Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾವೈಕ್ಯತೆ ಕೆಡಿಸಿ ಜನರ ಭಾವನೆ ಹಾಳು ಮಾಡುವವರಿಗೆ ಪಾಠ ಕಲಿಸಿ.
(ರಾಜ್ಯ ) ಜಿಲ್ಲೆ

ಭಾವೈಕ್ಯತೆ ಕೆಡಿಸಿ ಜನರ ಭಾವನೆ ಹಾಳು ಮಾಡುವವರಿಗೆ ಪಾಠ ಕಲಿಸಿ.

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಮದಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ

ವಿಜಯಪುರ: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಗಾಳಿ ಬೀಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶನಿವಾರ ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಅವರು ಮತಯಾಚಿಸಿ ಮಾತನಾಡಿದರು.
ಕಳೆದ ಲೋಕಸಭೆ ಚುನಾವಣೆ ವೇಳೆ ಪುಲ್ವಾಮಾ ಮೇಲೆ ದಾಳಿ ಮತ್ತು ಭಾರತ ಕೈಗೊಂಡ ಪ್ರತಿದಾಳಿಯಂಥ ಭಾವನಾತ್ಮಕ ವಿಚಾರಗಳು ಬಿಜೆಪಿಗೆ ವರವಾಗಿದ್ದವು. ಮೋದಿ ಅವರು ನೀಡಿದ್ದ ಕಪ್ಪು ಹಣ ವಾಪಸ್ ತರುವುದು, ಪ್ರತಿಯೊಬ್ಬರ ಅಕೌಂಟಿಗೆ ರೂ. 15 ಲಕ್ಷ ಹಣ ಹಾಕುವುದು, ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಠಿಯ ಅಚ್ಛೇ ದಿನ್ ಭರವಸೆಗಳು ಈಡೇರಿಲ್ಲ. ಆದರೆ, ಈಗ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ ಬೀಸುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ಜನರ ಜೀವನಮಟ್ಟ ಸುಧಾರಿಸಿವೆ. 2013-18ರ ಅವಧಿಯಲ್ಲಿ ನಾವು ಕೈಗೊಂಡ ನೀರಾವರಿ ಯೋಜನೆಯಿಂದಾಗಿ ಅಂತರ್ಜಲ ಹೆಚ್ಚಾಗಿದ್ದು, ಇಂದು ರಾಜ್ಯಾದ್ಯಂತ ಭೀಕರ ಬರವಿದ್ದರೂ, ಜಿಲ್ಲೆಯಲ್ಲಿ ಅಷ್ಟೋಂದು ಪರಿಣಾಮ ಬೀರಿಲ್ಲ. ಕಾಂಗ್ರೆಸ್ ಸರಕಾರವಿದ್ಸಾಗ ತೈಲಬೆಲೆ ಕೇವಲ 10 ಪೈಸೆ ಹೆಚ್ಚಳವಾದರೂ ಬಿಜೆಪಿಯ ಸ್ಮೃತಿ ಇರಾನಿ ಮತ್ತು ಶೋಭಾ ಕರಂದ್ಲಾಜೆ ಸೇರಿದಂತೆ ನಾನಾ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ರೂ. 50 ಮತ್ತು ಅಡುಗೆ ಅನಿಲ ದರ ರೂ. 800 ರಷ್ಟು ಹೆಚ್ಚಾದರೂ ಅವರು ಮೌನ ವಹಿಸಿದ್ದಾರೆ. ಇವು ಬಿಜೆಪಿ ದೇಶದ ಜನರಿಗೆ ನೀಡಿರುವ ಅಚ್ಛೇ ದಿನ್ ಆಗಿವೆ ಎಂದು ಅವರು ಹೇಳಿದರು.
ಪ್ರಾಮಾಣಿಕರೆಂದು ಹೇಳುತ್ತಿದ್ದವರ ಮುಖವಾಡ ಚುನಾವಣೆ ಬಾಂಡ್ ಖರೀದಿಸಿದವರ ಹೆಸರು ಬಹಿರಂಗವಾದ ನಂತರ ಕಳಚಿ ಬಿದ್ದಿದೆ. ಐಟಿ, ಇಡಿ, ಸಿಬಿಐ ದಾಳಿಗೆ ಒಳಗಾದವರು ಚುನಾವಣೆ ಬಾಂಡ್ ಖರೀದಿ ಮಾಡಿರುವುದು ಈ ಸರಕಾರ ಭ್ರಷ್ಟಾಚಾರಕ್ಕೆ ಹೊಸ ಭಾಷೆ ಬರೆದಿರುವುದಕ್ಕೆ ಸಾಕ್ಷಿಯಾಗಿದೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರದಲ್ಲಿ ಕಾಂಗ್ರೆಸ್ ಸ್ಥಾಪಿಸಿದ್ದ ಸಾರ್ವಜನಿಕ ಸಂಸ್ಥೆಗಳನ್ನು ಈಗಿನ ಕೇಂದ್ರ ಸರಕಾರ ಖಾಸಗೀಕರಣ ಮಾಡುತ್ತಿದೆ. ಇಬ್ಬರು ಮಾರಾಟಗಾರರು ಮತ್ತು ಇಬ್ಬರು ಖರೀದಿಗಾರರು ಈ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಮತ ಹಾಕಿದರೆ ಅದು ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ ಗಾಂಧಿ, ಎಸ್. ಸಿದ್ಧರಾಮಯ್ಯ, ಡಿ. ಕೆ. ಶಿವಕುಮಾರ ಮತ್ತು ಎಂ. ಬಿ. ಪಾಟೀಲರಿ ಅವರಿಗೆ ಹಾಕಿದಂತೆ. ಅವರಿಗೆ ಮತ ಹಾಕಿ ನಮ್ಮ ಕೈ ಬಲಪಡಿಸಿ. ಈ ಮೂಲಕ ಭಾವೈಕ್ಯತೆ ಕೆಡಿಸಿ ಜನರ ಭಾವನೆ ಹಾಳು ಮಾಡುವವರಿಗೆ ಪಾಠ ಕಲಿಸಿ. ಸಂಸತ್ತಿನಲ್ಲಿ ಒಂದು ಬಾರಿಯೂ ಧ್ವನಿ ಜಿಗಜಿಣಗಿ ಅವರ ಬದಲು ಲೋಕಸಭೆಯಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡಲಿರುವ ಪ್ರೊ. ರಾಜು ಆಲಗೂರ ಅವರಿಗೆ ಮತಹಾಕಿ ಎಂದು ಎಂ. ಬಿ. ಪಾಟೀಲ ಮನವಿ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಐದು ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುತ್ತಿದ್ದಾರೆ. ಸಚಿವ ಎಂ. ಬಿ. ಪಾಟೀಲ ಅವರು ಬರದ ನಾಡನ್ನು ಹಸಿರು ಬೀಡನ್ನಾಗಿ ಮಾಡಿದ್ದಾರೆ. ಅಪೂರ್ಣ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ನೀರು ಹರಿಸಿದ್ದಾರೆ. ಇವು ನನ್ನ ಗೆಲುವಿಗೆ ಕಾರಣವಾಗಲಿವೆ. ರಮೇಶ ಜಿಗಜಿಣಗಿ ಕಳೆದ 30 ವರ್ಷಗಳಿಂದ ಸಂಸದರಾಗಿ ಜಿಲ್ಲೆ ಮತ್ತು ರಾಜ್ಯದ ಸಮಸ್ಯೆಗಳ ಬಗ್ಗೆ ಎಂದೂ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ. ಒಂದೂ ಕಾಮಗಾರಿ ಮಾಡಿಲ್ಲ. ಜನರನ್ನು ಭೇಟಿ ಮಾಡಿಲ್ಲ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿಲ್ಲ. ವಂದೇ ಭಾರತ ರೈಲು ಬಿಡಿಸಿಲ್ಲ. ನನಗೆ ಮತ ಹಾಕಿದರೆ ಲೋಕಸಭೆಯಲ್ಲಿ ವಿಜಯಪುರ ಜಿಲ್ಲೆಯ ಜನರ ಧ್ವನಿಯಾಗಿ ಕೆಲಸ ಮಾಡುವುದಾಗಿ ತಿಳಿಸಿದರು.
ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರ ಮಾತನಾಡಿದರು.
ಜಿ. ಪಂ. ಮಾಜಿ ಅಧ್ಯಕ್ಷರಾದ ವಿ. ಎಸ್. ಪಾಟೀಲ, ಬಸವರಾಜ ದೇಸಾಯಿ, ಮುಖಂಡರಾದ ಮೌಲಾಸಾಬ ಜಹಾಗಿರದಾರ, ಎಂ. ಕೆ. ಕುಲಕರ್ಣಿ, ಕುಮಾರ ದೇಸಾಯಿ, ರಫೀಕ ಖಾನೆ ಈ ಸಂದರ್ಭದಲ್ಲಿ ಮಾತನಾಡಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಕೃಷ್ಣಾಜಿ ಕುಲಕರ್ಣಿ, ಕಲ್ಲನಗೌಡ ಪಾಟೀಲ, ವಿ. ಎಚ್. ಬಿದರಿ, ಈರಣ್ಣ ಕೊಪ್ಪದ, ಆಶಾ ಕಟ್ಟಿಮನಿ, ಸುಮಿತ್ರಾ ಶಿರಬೂರ, ರೇಶ್ಮಾ ಮಲ್ಲಿಕಾರ್ಜುನ ಗಂಗೂರ, ಸುಖದೇವ ಕಟ್ಟಿಮನಿ, ರಮೇಶ ಜೈನಾಪೂರ, ಬಸವನಗೌಡ ಪಾಟೀಲ, ಕೌಸರ ನಿಯಾಜ ಅತ್ತಾರ, ಶೇಖು ಪೂಜಾರಿ, ಎಸ್. ಕೆ. ನಿಡೋಣಿ, ಬಸವರಾಜ ಮಲಕಗೊಂಡ, ಮಹಾದೇವ ಕಂತಿ, ಎಂ. ಎಂ. ಬಾಗವಾನ, ರೇಶ್ಮಾ, ಬಸಪ್ಪ ಬಾವಿಕಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಅಮರೇಶ ಹಾದಿಮನಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ
    In (ರಾಜ್ಯ ) ಜಿಲ್ಲೆ
  • ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ
    In Uncategorized
  • ಎಸ್ಸೆಸ್ಸೆಲ್ಸಿ: ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪರಾಕಾಷ್ಠೆ ಬೋಧಿಸಿದ ಬಸವ ಧರ್ಮ ಜಗದ ಧರ್ಮ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲ್ಯೂಜೆ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕಪ್ ಗೆದ್ದ ಬಿಎಲ್ಡಿಇ ಸಂಸ್ಥೆಯ ಆಯುರ್ವೇದ ಕಾಲೇಜ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.