Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ದೇಶ ಕಟ್ಟುವ ಕೆಲಸ ಮಾಡಿದೆ :ಸಚಿವ ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ದೇಶ ಕಟ್ಟುವ ಕೆಲಸ ಮಾಡಿದೆ :ಸಚಿವ ಎಂ.ಬಿ.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ದೇಶ ಕಟ್ಟಿದ್ದು ಕಣ್ಣ ಮುಂದೆಯೇ ಇದ್ದರೂ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಾರೆ. ಸಾವಿರಾರು ಡ್ಯಾಮ್‌ಗಳನ್ನು ಕಟ್ಟಿದ್ದು ಯಾರು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಪ್ರಶ್ನಿಸಿದರು.
ಮತಕ್ಷೇತ್ರದ ಬಂಡೆಪ್ಪ ಸಾಲವಾಡಗಿ ಹಾಗೂ ಕುದರಿ ಸಾಲವಾಡಗಿ ಗ್ರಾಮಗಳಲ್ಲಿ ಶನಿವಾರ ಸಂಜೆ ನಡೆದ ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ದೊಡ್ಡ ದೊಡ್ಡ ಸಂಸ್ಥೆ, ಶಾಲೆ, ಕಾರ್ಖಾನೆಗಳನ್ನು ಮಾಡಿದ್ದು ಕಾಂಗ್ರೆಸ್ ಪಕ್ಷ. ಒಂದು ಸೂಜಿಯೂ ದೇಶದಲ್ಲಿ ತಯಾರಾಗದ ಸ್ಥಿತಿಯನ್ನು ಮೀರಿಸಿ ಜಗತ್ತಿನ ಮುಂದುವರಿದ ದೇಶಗಳ ಪಟ್ಟಿಯಲ್ಲಿ ಭಾರತವನ್ನು ಇಟ್ಟಿದ್ದು ನಮ್ಮ ಪಕ್ಷ. ಇವರು ಅಧಿಕಾರಕ್ಕೆ ಬಂದು ಅಚ್ಛೇ ದಿನ್ ಅಂತ ಹೇಳಿ ಕೆಟ್ಟ ಪ್ರಯೋಗಗಳನ್ನು ಮಾಡಿದರು. ನೋಟು ಬ್ಯಾನ್ ಮಾಡಿ ಆರ್ಥಿಕ ಸ್ಥಿತಿ ಹದಗೆಡಿಸಿದರು. ಮನಮೋಹನ್ ಸಿಂಗ್ ಅವರು ಇದ್ದಾಗ ಎಪ್ಪತ್ತೆರಡು ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿಯವರು ಜನರ ಭಾವನೆಗಳನ್ನು ಕೆರಳಿಸಿ ಮತ ಕೇಳುತ್ತಿದ್ದಾರೆ. ಕಾಂಗ್ರೆಸ್ ಹೊಟ್ಟೆ ತುಂಬಿಸುವ, ಜನರ ಬದುಕು ಸುಧಾರಿಸುವ ಕಾರ್ಯಗಳನ್ನು ಮಾಡಿದೆ ಎಂದರು.
ಭಾಗ್ಯಗಳ ಮೂಲಕ ಜನಸಾಮಾನ್ಯರ ಜೀವನ ಸುಧಾರಿಸಿದೆ. ಈಗ ಗ್ಯಾರಂಟಿಗಳ ಮೂಲಕ ವಿಶ್ವಾಸ ಗಳಿಸಿದ್ದೇವೆ. ಹೇಳಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ತುಟ್ಟಿ ಭಾಗ್ಯ ನೀಡಿರುವ ಬಿಜೆಪಿ ಸರಕಾರದ ದುರ್ದಿನ ದೂರಗೊಳಿಸಿದ್ದು ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಉಚಿತ ಪ್ರಯಾಣ, ಅನ್ನ ಭಾಗ್ಯ, ಯುವ ನಿಧಿಗಳಂತಹ ಕಾರ್ಯಕ್ರಮಗಳು ಎಂದು ವಿವರಿಸಿದರು.
ಈ ಚುನಾವಣೆ ಸುಳ್ಳು ಮತ್ತು ಸತ್ಯದ ನಡುವೆ ಇದೆ. ಚುನಾವಣೆ ಬಾಂಡ್ ಮೂಲಕ ಇವರ ಬಣ್ಣ ಬಯಲಾಗಿದೆ. ಪ್ರಾಮಾಣಿಕತೆ ಪಾಠ ಹೇಳುವವರ ಮುಖವಾಡ ಕಳಚಿದೆ. ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿದರೆ ಜಿಲ್ಲೆ ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದರು.
ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಅಪ್ಪಾಜಿ ನಾಡಗೌಡ ಮಾತನಾಡಿ, ಈ ಭಾಗ ಕಾಂಗ್ರೆಸ್ ಪಕ್ಷವನ್ನು ಮೊದಲಿಂದ ಪೋಷಿಸುತ್ತ ಬಂದಿದೆ. ಕಾಂಗ್ರೆಸ್ ಯಾವತ್ತೂ ಸಿದ್ಧಾಂತವಿಟ್ಟುಕೊಂಡು ಮಾತು ಉಳಿಸಿಕೊಳ್ಳುವ ಪಕ್ಷ. ಹೇಳಿದಂತೇ ಐದು ಗ್ಯಾರಂಟಿಗಳನ್ನು ಪೂರೈಸಿದೆ. ಸದ್ಯ ಕೇಂದ್ರದಲ್ಲೂ ಪಕ್ಷ ಹಲವು ಭರವಸೆಗಳನ್ನು ನೀಡಿದೆ. ಅವು ಕೂಡ ಅಧಿಕಾರಕ್ಕೆ ಬಂದ ಮೇಲೆ ಜಾರಿಗೆ ಬರಲಿವೆ ಎಂದರು.
ಬೂದಿಹಾಳ-ಪೀರಾಪುರ ಸೇರಿದಂತೆ ಹಲವು ನೀರಾವರಿ ಯೋಜನೆಗಳನ್ನು ಪೂರೈಸಿರುವ ಹೆಗ್ಗಳಿಕೆ ನಮ್ಮದು. ಮತ್ತಷ್ಟು ಯೋಜನೆಗಳು ಸಾಕಾರಗೊಳ್ಳಬೇಕಾದರೆ ಗೆಜೆಟ್ ನೋಟಿಫಿಕೇಶನ್ ಆಗಬೇಕು. ಇದೆಲ್ಲ ಸಾದ್ಯವಾಗುವುದು ಕಾಂಗ್ರೆಸ್‌ಗೆ ನೀವು ಮತ ನೀಡಿದಾಗ ಮಾತ್ರ ಎಂದರು.
ಫುಲ್ವಾಮಾ ನಂತಹ ಘಟನೆಗಳನ್ನು ಮತವಾಗಿ ಪರಿವರ್ತಿಸಿಕೊಳ್ಳುವ, ರಾಮ ಮಂದಿರವನ್ನು ಗುತ್ತಿಗೆ ಪಡೆಯುವ ಪಕ್ಷ ಬೇಕೋ ಅಭಿವೃದ್ಧಿಪರತೆ ಬೇಕೋ ನಿರ್ಧರಿಸಿ. ದೇಶವನ್ನು ಒಡೆದಾಳುವ ಸ್ಥಿತಿಯಿಂದ ಹೊರ ತನ್ನಿ ಎಂದು ಮನವಿ ಮಾಡಿದರು.
ಶಾಸಕ ಸುನೀಲಗೌಡ ಪಾಟೀಲ ಮಾತನಾಡಿ, ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಒಮ್ಮೆಯೂ ಸಂಸದ ಜಿಗಜಿಣಗಿಯವರು ದನಿ ಎತ್ತಲಿಲ್ಲ. ನೀರಾವರಿ ಹೋಗಲಿ, ಸರಿಯಾದ್ದೊಂದು ರೈಲನ್ನೂ ವಿಜಯಪುರದಿಂದ ಓಡಿಸಲಿಲ್ಲ. ಮೂರು ಸಲ ಗೆದ್ದರೂ ಯಾರಿಗೂ ಮುಖ ತೋರಿಸಲಿಲ್ಲ. ನಮ್ಮ ಅಭ್ಯರ್ಥಿ ರಾಜು ಆಲಗೂರ್ ಅವರು ಅನುಭವಸ್ಥ ಮತ್ತು ವಿದ್ಯಾವಂತರಾಗಿದ್ದಾರೆ. ಇವರು ಲೋಕಸಭೆಯಲ್ಲಿ ನಮ್ಮ ಪರವಾಗಿ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಮಾತನಾಡಿ, ತಮಗೆ ಅವಕಾಶ ನೀಡಿದರೆ ಆಲಮಟ್ಟಿ ಅಣೆಕಟ್ಟು ಎತ್ತರಿಸಲು ಶತ ಪ್ರಯತ್ನ ಮಾಡುವುದಾಗಿ ಹೇಳಿದರು.
ಮಾಜಿ ಶಾಸಕರಾದ ಶರಣಪ್ಪ ಸುಣಗಾರ ಪ್ರಾಸ್ತಾವಿಕ ಮಾತನಾಡಿದರು.
ಬಿ.ಎಸ್. ಪಾಟೀಲ ಯಾಳಗಿ ಸ್ವಾಗತಿಸಿದರು. ಡಾ. ಸುಭಾಶ ಛಾಯಾಗೋಳ, ಡಾ.ಪ್ರಭುಗೌಡ ಲಿಂಗದಳ್ಳಿ, ಆನಂದ ದೊಡ್ಡಮನಿ, ಬಶೀರ್ ಶೇಟ, ಗೌರಮ್ಮ ಮುತ್ತತ್ತಿ, ಶಿವಾನಂದ ಪಾಟೀಲ, ರಂಜಾನ್ ಮುಜಾವರ, ಸಿದ್ದನಗೌಡ ಪಾಟೀಲ, ಸುರೇಶಗೌಡ, ಸರಿತಾ ನಾಯಕ, ಕಾಸೀಂಗೌಡ, ಮುತ್ತಣ್ಣ ಚಂದ್ರಾಪುರ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.