Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಸತ್ತಿನಲ್ಲಿ ಧ್ವನಿ ಎತ್ತಲು ಪ್ರೊ.ಆಲಗೂರ ಗೆಲುವು ಅಗತ್ಯ
(ರಾಜ್ಯ ) ಜಿಲ್ಲೆ

ಸಂಸತ್ತಿನಲ್ಲಿ ಧ್ವನಿ ಎತ್ತಲು ಪ್ರೊ.ಆಲಗೂರ ಗೆಲುವು ಅಗತ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಾಗಠಾಣ ವಿಧಾನಸಭೆ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅಭಿಮತ

ವಿಜಯಪುರ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ ಕೇಂದ್ರದ ಗಮನ ಸೆಳೆಯಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಬಹುಮತದಿಂದ ಗೆಲ್ಲಿಸುವುದು ಅಗತ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ರವಿವಾರ ನಗರದ ಐಶ್ವರ್ಯ ನಗರದಲ್ಲಿ ನಾಗಠಾಣ ವಿಧಾನಸಭೆ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆಯನ್ನು ಉದ್ಘಾಟಿಸಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಮತಯಾಚಿಸಿ ಮಾತನಾಡಿದರು.
ದೇಶದಲ್ಲಿ ಬದಲಾವಣೆ ಮಾಡುವುದಾಗಿ 2014 ರಲ್ಲಿ ಮೋದಿ ದೊಡ್ಡ ಪ್ರಚಾರ ಮಾಡಿ ಅಧಿಕಾರಕ್ಕೆ ಬಂದರು. ಆದರೆ, ಕಳೆದ 10 ವರ್ಷಗಳಲ್ಲಿ ಅವರು ನೀಡಿರುವ ಯಾವ ಭರವಸೆಗಳೂ ಈಡೇರಿಲ್ಲ. ಅಚ್ಛೆ ದಿನ್, ಕಪ್ಪು ಹಣ ವಾಪಸ್, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಸೇರಿದಂತೆ ಯಾವುದೂ ಈಡೇರಿಲ್ಲ. ಬದಲಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಅಡುಗೆ ಅನಿಲ ಬೆಲೆ ಹೆಚ್ಚಳ, ರೈತರ ಆದಾಯ ಕುಂಠಿತ ಇವರು ಜನರಿಗೆ ನೀಡಿರುವ ಅಚ್ಛೇ ದಿನ್ ಗಳಾಗಿವೆ. ಕಾಂಗ್ರೆಸ್ ಹಸಿರು ಕ್ರಾಂತಿ ಮೂಲಕ ಜನರಿಗೆ ಆಹಾರ ನೀಡಿತು. ನೆಹರೂ, ಶಾಸ್ತ್ರಿ, ಇಂದಿರಾ ಗಾಂಧಿ, ರಾಜೀವ ಗಾಂಧಿ, ಮನಮೋಹನಸಿಂಗ್ ಆರ್ಥಿಕಾಭಿವೃದ್ಧಿ, ಶೈಕ್ಷಣಿಕಾಭಿವೃದ್ಧಿ, ಕೃಷಿ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದರು. ಆದರೆ, ಬಿಜೆಪಿ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡಿದೆ. ಮನಮೋಹನಸಿಂಗ್ ಪ್ರಧಾನಿಯಾಗಿದ್ದಾಗ ರೈತರ ಸಾಲ ಮನ್ನಾ, ರೈಟ್ ಟು ಎಜುಕೇಶನ್ ಸೇರಿದಂತೆ ನಾನಾ ಬಡವರ ಪರ ಯೋಜನೆ ಜಾರಿಗೆ ತಂದಿತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಮನ್ ಕಿ ಬಾತ್, ಅಚ್ಛೆ ದಿನ್, ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ನಾ ಖಾವೂಂಗಾ, ನಾ ಖಾನೆ ದೂಂಗಾ ನಂಥ ವಿಚಾರಗಳು ಕೇವಲ ಸ್ಲೋಗನ್ ಗೆ ಮಾತ್ರ ಸೀಮಿತವಾಗಿವೆ. ಚುನಾವಣೆ ಬಾಂಡ್ ಹಗರಣ ಇವರ ಮುಖವಾಡ ಕಳಚುವಂತೆ ಮಾಡಿದೆ. ಹೇಳುವುದು ಒಂದು, ಮಾಡುವುದು ಮತ್ತೋಂದು. ಇದನ್ನು ಹೇಳುವವರ ಆತ್ಮಸಾಕ್ಷಿ ಒಪ್ಪುತ್ತಾ ಎಂದು ಸಚಿವರು ಪ್ರಶ್ನಿಸಿದರು.
ಸಂಸದ ರಮೇಶ ಜಿಗಜಿಣಗಿ ಅವರು ಆರು ಬಾರಿ ಆಯ್ಕೆಯಾಗಿದ್ದಾರೆ. ಕೇಂದ್ರದ ವ್ಯಾಪ್ತಿಗೆ ಬರುವ ಜಿಲ್ಲೆಯ ಯಾವ ಜ್ವಲಂತ ಸಮಸ್ಯೆಗಳನ್ನೂ ಬಗೆಹರಿಸಿಲ್ಲ. ಸಂಸತ್ತಿನಲ್ಲಿ ಅವುಗಳ ಬಗ್ಗೆ ಒಂದೂ ಪ್ರಶ್ನೆ ಕೇಳಿಲ್ಲ. ಹೀಗಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಆಯ್ಕೆ ಅಗತ್ಯವಾಗಿದೆ. ಆಲಗೂರ ಅವರು ಸಂಸದರಾಗಿ ಆಯ್ಯೆಯಾದ ಮೇಲೆ ಆಲಮಟ್ಟಿ ಜಲಾಷಯದ ಎತ್ತರ ಹೆಚ್ಚಳ ಕುರಿತು ಗೆಜೆಟ್ ನೊಟಿಫಿಕೇಶನ್ ಮಾಡಿಸಲು, ವಂದೇ ಭಾರತ ರೈಲು ಸೇವೆ ಪ್ರಾರಂಭಿಸಲು, ತೋಟಗಾರಿಕೆ, ಪ್ರವಾದೋದ್ಯಮ, ಸೇರಿದಂತೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಿ ಕೆಲಸ ಮಾಡಲಿದ್ದಾರೆ. ಅವರನ್ನು ಮತ ಹಾಕಿದರೆ ನನಗೆ ಮತ ಹಾಕಿದಂತೆ ಎಂದು ಎಂ. ಬಿ. ಪಾಟೀಲ ಹೇಳಿದರು.
ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ, ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ಆದರೆ, ಭೀಕರ ಬರದ ನಡುವೆಯೂ ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿಲ್ಲ. ಇದಕ್ಕೆ ಸಚಿವ ಎಂ. ಬಿ. ಪಾಟೀಲ ಅವರು ಕೈಗೊಂಡಿರುವ ನೀರಾವರಿ ಯೋಜನೆಗಳೇ ಕಾರಣವಾಗಿವೆ. ಈ ಭಾಗದಲ್ಲಿ ಇನ್ನೂ ಬಾಕಿ ಇರುವ ನೀರು, ವಿದ್ಯುತ್, ರಸ್ತೆ ದುರಸ್ಥಿ ಚುನಾವಣೆ ನಂತರ ಕೈಗೆತ್ತಿಕೊಳ್ಳಲಾಗುವುದು. ಎಂದು ಹೇಳಿದರು.
ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಮಾತನಾಡಿ, ಸಚಿವ ಎಂ. ಬಿ. ಪಾಟೀಲರು ಬರದ ನಾಡಾಗಿದ್ದ ವಿಜಯಪುರ ಜಿಲ್ಲೆಯನ್ನು ಬಂಗಾರದ ನಾಡನ್ನಾಗಿ ಮಾಡಿದ್ದಾರೆ. ಈ ಬಾರಿ ಸುಶಿಕ್ಷಿತ ಪ್ರೊ.ರಾಜು ಆಲಗೂರ ಅವರನ್ನು ಗೆಲ್ಲಿಸುವ ಮೂಲಕ ಹೊಸ ಅಭಿವೃದ್ಧಿಗೆ ಕೈಜೋಡಿಸೋಣ ಎಂದು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಮಾತನಾಡಿ ಮತ ಯಾಚಿಸಿದರು.
ನಿವೃತ್ತ ನೌಕರರ ಸಂಘದ ಮುಖಂಡ ಎಸ್. ಪಿ. ಬಿರಾದಾರ ಕಡ್ಲೆವಾಡ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ, ಮುಖಂಡೆ ಸ್ನೇಹಲತಾ ಶೆಟ್ಟಿ, ಉದ್ಯಮಿ ರವೀಂದ್ರ ಬಿಜ್ಜರಗಿ ಮಾತನಾಡಿ, ಪ್ರೊ.ರಾಜು ಆಲಗೂರ ಪರ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಿ.ಎಸ್.ಬಿರಾದಾರ, ನಾಗಠಾಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಹಜಹಾನ್ ಮುಲ್ಲಾ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.