Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಆರೋಪ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಆರೋಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೇವಲ ಟಿಎ, ಡಿಎ ಗೆ ಸೀಮಿತವಾಗಿರುವ ಜಿಗಜಿಣಗಿ

ವಿಜಯಪುರ: ಕೇವಲ ಟಿಎ, ಡಿಎ ಗಾಗಿ ಸೀಮಿತವಾಗಿರುವ ಸಂಸದ ರಮೇಶ ಜಿಗಜಿಣಗಿ ಬದಲು ಸಂಸತ್ತಿನಲ್ಲಿ ಬಸವ ನಾಡಿನ ಜನರ ಪರ ಧ್ವನಿ ಎತ್ತಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಗೆಲ್ಲಿಸಬೇಕಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಬುಧವಾರ ತಿಕೋಟಾ ತಾಲೂಕಿನ ಮುಮ್ಮೆಟಿಗುಡ್ಡದ ಬಳಿ ಅರ್ಜುನ ರಾಠೊಡ ಅವರ ತೋಟದಲ್ಲಿ ನಡೆದ ಅರಕೇರಿ ಜಿ. ಪಂ. ವ್ಯಾಪ್ತಿಯ ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಸಂಸತ್ತಿನಲ್ಲಿ ಎಂದೂ ಜನರ ಸಮಸ್ಯೆಗಳ ಪರ ಪ್ರಶ್ನೆ ಕೇಳದವರು ಕೇವಲ ಟಿಎ, ಡಿಎ ಪಡೆಯಲು ಎಂಪಿ ಆಗಬೇಕಾ? ಅಥವಾ ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸುವವರಿಗೆ ಮತ ಹಾಕಬೇಕಾ ಎಂಬುದರ ಕುರಿತು ಯೋಚಿಸಬೇಕು. ಪ್ರೊ. ರಾಜು ಆಲಗೂರ ಅವರು ಆಯ್ಕೆಯಾದ ಬಳಿಕ ಜಿಲ್ಲೆಯ ನೀರಾವರಿ, ರೈಲು, ತೋಟಗಾರಿಕೆ, ಪ್ರವಾಸೋದ್ಯಮ, ಪ್ರಾಚೀನ ಸ್ಮಾರಕಗಳನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರಿಸುವ ಕೆಲಸ ಮಾಡಲಿದ್ದಾರೆ. ಅಷ್ಟೇ ಅಲ್ಲ, ಶರದ ಪವಾರ ಅವರ ಬಾರಾಮತಿ ಕ್ಷೇತ್ರದಂತೆ ವಿಜಯಪುರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಆಲಗೂರ ಅವರಿಗೆ ಹಾಕಿದರೆ ಆ ಮತ ನನಗೆ ಹಾಕಿದಂತೆ ಎಂದು ಸಚಿವರು ಹೇಳಿದರು.
ಸಂಸದ ರಮೇಶ ಜಿಗಜಿಣಗಿ ತಮಗೆ ಬಂಜಾರಾ ಮತಗಳು ಬೇಡ ಎಂದಿದ್ದಾರೆ. ಬೇಡ ಎಂದವರಿಗೆ ಯಾರಾದರೂ ಮತ ಹಾಕುತ್ತಾರಾ? ಎಂದು ಪ್ರಶ್ನಿಸಿದ ಅವರು, ಬೆಲೆ ಏರಿಕೆ, ಉದ್ಯೋಗ ನಷ್ಟ, ರೈತರ ಆದಾಯ ಕುಸಿತ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಡ್ರದ ಜನರಿಗೆ ನೀಡಿರುವ ಅಚ್ಛೆ ದಿನ್ ಆಗಿವೆ. ಎಲೆಕ್ಟ್ರಾಲ್ ಬಾಂಡ್ ಪ್ರಕರಣದಲ್ಲಿ ಮೋದಿಯವರ ಬಂಡವಾಳ ಬಯಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲೂ ಅವರ ಸುಳ್ಳುಗಳ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಇದಷ್ಟೇ ಅಲ್ಲ, ಇನ್ನೂ ಯಾವ್ಯಾವ ಹಗರಣಗಳಿವೆಯೋ ಗೊತ್ತಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿದಂತೆ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯುವನ್ಯಾಯ, ಮಹಿಳಾ ನ್ಯಾಯ, ರೈತ ನ್ಯಾಯ, ಶ್ರಮಿಕ ನ್ಯಾಯ, ಪಾಲುದಾರಿಕೆ ನ್ಯಾಯ ಯೋಜನೆಯಡಿ ಸರ್ವ ಜನಾಂಗದ ಕಲ್ಯಾಣ ಯೋಜನೆಗಳು ಜಾರಿಗೆ ಬರಲಿವೆ. ಈಗ ನಾವು ನುಡಿದಂತೆ ನಡೆಯುತ್ತಿದ್ದು, ಮುಂದೆಯೂ ನಡೆಯಲಿದ್ದೇವೆ ಎಂದು ಎಂ. ಬಿ. ಪಾಟೀಲ ಭರವಸೆ ನೀಡಿದರು.
ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಮಾತನಾಡಿ, ಅಮೀತ್ ಶಾ ರಾಜ್ಯದಲ್ಲಿ ಹಾಲುಮತದ ಯಾವ ಅಭ್ಯರ್ಥಿಗೂ ಟಿಕೆಟ್ ನೀಡಿಲ್ಲ. ಸಂಸದ ಜಿಗಜಿಣಗಿ ಬಂಜಾರ ಸಮಾಜದ ಮತಗಳು ತಮಗೆ ಬೇಡ ಎಂದು ಹೇಳಿದ್ದಾರೆ. ಸಂಸದ ರಮೇಶ ಜಿಗಜಿಣಗಿ ಜಿಲ್ಲೆಯ ಯಾವ ಸಮಸ್ಯೆಗಳ ಬಗ್ಗೆಯೂ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ. ಕೇಂದ್ರ ಸರಕಾರದ ಗಮನ ಸೆಳೆದಿಲ್ಲ. ಕೊರೊನಾ ಸಂಕಷ್ಟ ಸಮಯದಲ್ಲೂ ಯಾರಿಗೂ ಸ್ಪಂದಿಸಿಲ್ಲ. ಇದು ತಮ್ಮ ಕೊನೆಯ ಚುನಾವಣೆ ಎಂದು ಹೇಳುತ್ತಿದ್ದಾರೆ. ನನ್ನ ಮುಖ ನೋಡದೇ ಪ್ರಧಾನಿ ಮೋದಿ ಮುಖ ನೋಡಿ ಮತ ಹಾಕಿ ಎನ್ನುವ ಮೂಲಕ ಸಂಸದರು ಮುಖಗೇಡಿ ಆಗಿದ್ದಾರೆ. ಕೇಂದ್ರ ರೈತರ ಹೋರಾಟ ಹತ್ತಿಕ್ಕುತ್ತಿದ್ದರೆ, ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ. ಜಿಗಜಿಣಗಿ ಮಾತಿಗೆ ಮರುಳಾಗದೇ ನನಗೆ ಮತಹಾಕಿ ಅವಕಾಶ ಮಾಡಿಕೊಡಿ. ನಿಮ್ಮ ಪರವಾಗಿ ಕೇಂದ್ರದಲ್ಲಿ ಕೆಲಸ ಮಾಡಲು ನನಗೆ ಅವಕಾಶ ನೀಡಿ ಎಂದು ಹೇಳಿದರು.
ಜಿ. ಪಂ. ಮಾಜಿ ಅಧ್ಯಕ್ಷ ಅರ್ಜುನ ರಾಠೋಡ, ಕಾಂಗ್ರೆಸ್ ಹಿರಿಯ ಮುಖಂಡ ಡಿ. ಎಲ್. ಚವ್ಹಾಣ ಮಾತನಾಡಿದರು.
ಮುಖಂಡರಾದ ಗೋವಿಂದ ಶಿಂಧೆ, ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಗೀತಾಂಜಲಿ ಪಾಟೀಲ, ಎಪಿಎಂಸಿ ಮಾಜಿ ನಿರ್ದೇಶಕ ಸಿದ್ದಣ್ಣ ಸಕ್ರಿ, ರಾಜುಗೌಡ ಪೊಲೀಸ್ ಪಾಟೀಲ ಮಾತನಾಡಿದರು.
ಈ ಸಂದರ್ಭದಲ್ಲಿ ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಅಶೋಕ ದಳವಾಯಿ, ಪೋಪಟ ಮಹಾರಾಜರು, ಶಂಕರ ಮಹಾರಾಜರು, ಹುಸೇನಿ ಮನಗೂಳಿ, ಮುದಕಪ್ಪ ಚಲವಾದಿ, ರಾಜಶೇಖರ ಪವಾರ, ಧನಸಿಂಗ್ ಚವ್ಹಾಣ, ಸುಭಾಸ ರಜಪೂತ, ಸತೀಶ ನಾಯಕ, ಅಣ್ಣಪ್ಪ ಮಾಣವರ, ಪೀರ ಪಟೇಲ, ವಾಮನ ಚವ್ಹಾಣ, ನಿಂಗಪ್ಪ ಬೆಳ್ಳುಬ್ಬಿ, ಸುಭಾಷ ರಾಠೋಡ, ಓಗೆಪ್ಪ ಗೋಪಣೆ, ಶಿವಪ್ಪ ಚಲವಾದಿ, ಪೂಜಾರಿ, ಚನ್ನಪ್ಪ ದಳವಾಯಿ, ಪ್ರಶಾಂತ ಝಂಡೆ, ಅರಕೇರಿ ಜಿ. ಪಂ. ವ್ಯಾಪ್ತಿಯ ಗ್ರಾಮಸ್ಥರು ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.