Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾರಾಷ್ಟ್ರದ ಪುಣೆಯಲ್ಲಿ ಕನ್ನಡ ಕಲರವ
(ರಾಜ್ಯ ) ಜಿಲ್ಲೆ

ಮಹಾರಾಷ್ಟ್ರದ ಪುಣೆಯಲ್ಲಿ ಕನ್ನಡ ಕಲರವ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪುಣೆ ನಮ್ಮವರು ಸಂಘದಿಂದ ಮಹಿಳಾ ದಿನಾಚರಣೆ | ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಪುಣೆ ಘಟಕದ ವಾರ್ಷಿಕೋತ್ಸವ

ಪುಣೆ: ನಗರದಲ್ಲಿ ’ನಮ್ಮವರು ಸಂಘ’ದಿಂದ ಮಹಿಳಾ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಪುಣೆ ಘಟಕ ದ ಎರಡನೆಯ ವಾರ್ಷಿಕೋತ್ಸವವನ್ನು ಏ.೧೩ರಂದು ತಾರಂಗಣ ಸಭಾಗೃಹದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ಹಾಗೂ ಮುಖ್ಯ ಅತಿಥಿಗಳು ದೀಪ ಬೆಳಗಿಸಿ, ನಾಡಗೀತೆ ಹಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀಮತಿ ವಿರಜಾ ಭಟ್ ಮತ್ತು ಚಂದ್ರಕಾಂತ ಹಾರಕುಡೆ ಅವರು ನಮ್ಮವರು ಸಂಘದ ಎಲ್ಲಾ ಕೆಲಸ ಕಾರ್ಯಗಳನ್ನು ಹೊಗಳಿ ಹಾರೈಸಿದರು. ಬಸವರಾಜ ಹಿರೇಮಠ ನಮ್ಮವರು ಸಂಘ ಮತ್ತು ಮಕ್ಕಳ ಸಾಹಿತ್ಯ ಸಮ್ಮೇಳನದ ಬಗ್ಗೆ ವಿವರಣೆ ನೀಡಿ ಮುಂಬರುವ ಹಲವಾರು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ನಮ್ಮವರು ಸಂಘದ ನೂತನ ಕಾರ್ಯಕಾರಿ ಸಮಿತಿಯಲ್ಲಿ ಭಾರ್ಗವ, ವೇಣು ಅಚ್ಯುತ್, ಶಿವಣ್ಣ ಪಟ್ಟಣ, ಸತೀಶ್ ಮೆಣಸಿಗಿ, ವೆಂಕಟೇಶ ಕುಲ್ಕರ್ಣಿ, ಶ್ರೀ ಅಂಕಿತ, ಹಾಗೂ ಸಂಗಮೇಶ ಗುಲ ಅ ವರನ್ನು ಸನ್ಮಾನಿಸಿ ತಂಡಕ್ಕೆ ಬರಮಾಡಿಕೊಂಡರು ಮತ್ತು ಮಕ್ಕಳ ಸಾಹಿತ್ಯ ಪರಿಷತ್ತಿನ ಹೊಸ ಪದಾಧಿಕಾರಿಗಳಾಗಿ ಶ್ರೀಮತಿ ಝಾನ್ಸಿ ರಾವ್, ಶ್ರೀಮತಿ ಕವಿತಾ ಮಹೇಶ, ಶ್ರೀಮತಿ ಜಯವಿಜಯಾ ರಾವ ಮತ್ತು ಕುಮಾರಿ ಸಂಸ್ಕೃತಿ ಚೌಗಲೆರವರನ್ನು ನೇಮಕ ಮಾಡಲಾಯಿತು. ಶ್ರೀಮತಿ ಹೇಮಾ ಮಳಗಿ ಅವರು ನಮ್ಮವರು ಕನ್ನಡ ಕಲಿ ಬೇಸಿಗೆ ಕ್ಲಾಸ್ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸೇರಿದ್ದ ಗಣ್ಯರು ನಮ್ಮವರು ಸಂಘ ಉದ್ದೇಶಿಸಿ ಮಾತನಾಡಿ ತಮ್ಮ ಅನಿಸಿಕೆಗಳು ಮತ್ತು ಸಲಹೆಗಳನ್ನು ಹಂಚಿಕೊಂಡರು.
ವಿಶೇಷವಾಗಿ, ಮಕ್ಕಳ ಸಾಹಿತ್ಯ ಸಮ್ಮೇಳನದ ಆಚರಣೆಯಲ್ಲಿ ಮಕ್ಕಳಲ್ಲಿ ಕನ್ನಡ ಭಾಷೆ, ಜಾನಪದ ಸಾಹಿತ್ಯ ಮತ್ತು ಕಲೆಗಳ ಬಗ್ಗೆ ಅರಿವು ಮೂಡಿಸಲು ಮಕ್ಕಳಿಗಾಗಿ ಭಾಷಣ, ಕವನ ಹಾಗೂ ಜಾನಪದ ಹಾಡುಗಳಿಗೆ ನೃತ್ಯಗಳು ಮತ್ತು ಜಾನಪದ ಹಾಡುಗಳನ್ನು ಹಾಡುವ ಮೂಲಕ ಮಕ್ಕಳು ಕನ್ನಡ ಭಾಷೆಗೆ ಹೆಚ್ಚಿನ ಮೆರಗು. ತಂದರು. ಮಹಿಳೆಯರಿಗಾಗಿ ಭಾರತದ ಬೇರೆ ಬೇರೆ ರಾಜ್ಯಗಳ ವೇಷ ಭೂಷಣ ಸ್ಪರ್ದೆ ಹಾಗೂ ದಂಪತಿಗಳಿಗಾಗಿ ಗಂಡ-ಗುಂಡಿ ವಿನೂತನ ಹೆಸರನ್ನು ಸ್ಪರ್ಧೆಗೆ ಸೂಚಿಸಲಾಗಿತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ದಂಪತಿಗಳು ಆನಂದ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಆಕರ್ಷಣೆಯಾದ ಸ್ಟ್ಯಾಂಡ್ಅಪ್ ಕಾಮಿಡಿಯನ್ ಸುಬ್ರಹ್ಮಣ್ಯ ಹೆಗಡೆರವರು ತಮ್ಮ ಹಾಸ್ಯ ಮಾತುಗಳಿಂದ ಎಲ್ಲರನ್ನೂ ಮನಃ ಪೂರ್ತಿ ನಗುವಂತೆ ಮಾಡಿದರು.
ಇದೆ ಸಂದರ್ಭದಲ್ಲಿ ಹೊಸ ವರ್ಷ ಯುಗಾದಿ ಹಬ್ಬ ಆಚರಿಸಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದಿತು. ನಮ್ಮವರು ಸಂಘದ ಚಿಕ್ಕ ಮಕ್ಕಳು ಹಾಗೂ ಹಿರಿಯರು ವಿವಿಧ ಬಗೆಯ ಹಾಡು, ನೃತ್ಯಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಇವೆಲ್ಲವನ್ನೂ ನೋಡಿ ನೆರೆದ ಜನರೆಲ್ಲ ಸಂಭ್ರಮಪಟ್ಟರು.
ಬಸವರಾಜ ಪಟ್ಟಣಶೆಟ್ಟಿ ಹಾಗೂ ಅಮಿತ ಇನಾಮದಾರ್ ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ವಹಿಸಿದ್ದರು. ನಮ್ಮವರು ಸಂಘದ ಅನೇಕ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರ್ವಾಹಣೆ ಬಿಂದುಮಾಧವ ದೇಸಾಯಿ, ಪರಾಗ ಮುಳಗುಂದ, ಅಂಕಿತ, ಶ್ರೀಮತಿ ಶಾಂತಲಾ ಬಿರಾದರ, ಹಾಗೂ ಶ್ರೀಮತಿ ವಿದ್ಯಾ ಮದಲಿಯವರು ನಡೆಸಿಕೊಟ್ಟರು.
ಶ್ರೀಮತಿ ಜಾನ್ಸಿ ರಾವ್ ಅವರು ವಂದನಾರ್ಪಣೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ತೆರೆಬಿದ್ದಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.