ಕೊಲ್ಹಾರ: ಬಿಜೆಪಿ ಪಕ್ಷದ ಯುವ ಶಕ್ತಿ ಬೂತ್ ಮಟ್ಟದ ಪದಾದಿಕಾರಿಗಳು ಕಳೆದ ೧೦ ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಆಡಳಿತ ಮಾಡುತ್ತಿರುವ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಮತದಾರರ ಮನೆಮನೆಗೆ ತೆರಳಿ ತಿಳಿಸಿಕೊಟ್ಟು ಮತ್ತೊಮ್ಮೆ ಭಾರತೀಯ ಜನತಾಪಕ್ಷವು ಅಧಿಕಾರದ ಚುಕ್ಕಾಣಿ ಪಡೆದುಕೊಳ್ಳಲು ಶ್ರಮಿಸಬೇಕಾಗಿದೆ ಎಂದು ಮಾಜಿ ಶಾಸಕ ಸೋಮನಗೌಡ ಬ ಪಾಟೀಲ ಹೇಳಿದರು.
ಪಟ್ಟಣದ ಮಾಜಿ ಸಚಿವ ಎಸ.ಕೆ.ಬೆಳ್ಳುಬ್ಬಿಯವರ ಮನೆಯಲ್ಲಿ ನಡೆದ ಕೊಲ್ಹಾರ ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದರು.
ವಿಜಯಪೂರ ಲೋಕಸಭಾ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸುಮಾರು ಇಪ್ಪತ್ತು ಸಾವಿರ ಅಧಿಕ ಮತಗಳು ದೊರಕಿ ಮತ್ತೊಮ್ಮೆ ಸಂಸದರಾಗಲು ಪ್ರಯತ್ನಿಸಬೇಕು. ಅವರು ಹಾಗೂ ಕ್ಷೇತ್ರದ ಮಾಜಿ ಶಾಸಕರು, ಸಚಿವರು ಆದಂತಹ ಎಸ್.ಕೆ.ಬೆಳ್ಳುಬ್ಬಿಯವರ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೂಡ ಜನರಿಗೆ ಮನಮುಟ್ಟುವಂತೆ ವಿವರಿಸಿ ಬಿಜೆಪಿ ಪಕ್ಷಕ್ಕೆ ಮತ ಹಾಕಿಸಲು ಪ್ರಯತ್ನಿಸಬೇಕು ಎಂದು ಕಾರ್ಯಕರ್ತರಿಗೆ ಕರೆಕೊಟ್ಟರು.
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯದಕ್ಷತೆಯನ್ನು ಹಾಗೂ ದೇಶದ ಹಿತದೃಷ್ಟಿಯಿಂದ ಈಗಾಗಲೇ ಜನರ ಒಲವು ಬಿಜೆಪಿ ಪಕ್ಷದ ಕಡೆಇದ್ದು ಆದರೂ ಕೂಡ ನಾವು ಮೈಮರೆಯದೇ ಅವಿರತವಾಗಿ ಶ್ರಮಿಸಬೇಕಾಗಿದೆ ಎಂದ ಅವರು ರಾಜ್ಯದಲ್ಲಿ ಆಳ್ವಿಕೆ ಮಾಡುತ್ತರುವ ಕಾಂಗ್ರೆಸ್ ಪಕ್ಷದ ಅಧಿಕಾರ ಅವಧಿಯಲ್ಲಿ ಕಾನೂನು ಸುವ್ಯವ್ಯವಸ್ಥೆ ಹದಗೆಟ್ಟಿದ್ದು ಒಂದು ರೀತಿ ಗುಂಡಾಗಿರಿ ಆಡಳಿತ ವ್ಯವಸ್ಥೆ ಜಾರಿಯಲ್ಲಿದೆ. ಇದಕ್ಕೆ ಕಡಿವಾಣ ಹಾಕಲು ಭಾರತೀಯ ಜನತಾಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ದೇಶಕ್ಕೆ ಮತ್ತೊಮ್ಮೆ ನರೆಂದ್ರ ಮೋದಿಯವರ ಆಡಳಿತ ಬರುವಂತೆ ಕೆಲಸ ಮಾಡಬೇಕಾಗಿದೆ ಎಂದರು.
ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿದರು.
ಮುಳವಾಡ, ಕೂಡಗಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿತ್ತು. ಮಂಡಲ ಅಧ್ಯಕ್ಷ ಸಿದ್ರಾಮ ಕಾಖಂಡಕಿ, ಪಟ್ಟಣ ಪಂಚಾಯತ ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಧುರೀಣರಾದ ಶಂಕರಗೌಡ ಪಾಟೀಲ, ಮಲ್ಲಿಕಾರ್ಜುನ ಬೆಳ್ಳುಬ್ಬಿ, ಜಗದೀಶ ಸುಣಗದ, ಬಸವರಾಜ ಬಿರಾದಾರ, ಅಖಿಲಗೌಡ ಪಾಟೀಲ, ಅನೇಕ ಪ್ರಮುಖರು ಹಾಗೂ ಶಕ್ತಿ ಮತ್ತು ಮಹಾಶಕ್ತಿ ಕೇಂದ್ರದ ಜಿಲ್ಲೆಯ ಹಾಗೂ ಮಂಡಲ ಪದಾದಿಕಾರಿಗಳು ಉಪಸ್ಥಿತರಿದ್ದರು. ಪುಂಡಲೀಕ ಬಾಟಿ ಸ್ವಾಗತಿಸಿ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

