ಸಿಂದಗಿ: ರಾಜ್ಯದಲ್ಲಿ ರಾಜಾರೋಷವಾಗಿ ಇಂತಹ ಕೃತ್ಯಗಳು ನಡೆಯುತ್ತಿದ್ದು, ಕಾನೂನಿನ ಸುವ್ಯವಸ್ಥೆ ಕುಸಿದು ಹೋಗಿದೆ ಎಂದು ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.
ಪಟ್ಟಣದ ಸಂಗಮೇಶ್ವರ ದೇವಾಸ್ಥಾನದಿಂದ ಸ್ವಾಮಿ ವಿವೇಕಾನಂದ ವೃತ್ತದವರೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಹುಬ್ಬಳ್ಳಿ ಬಿವಿಬಿ ಕಾಲೇಜಿನ ವಿದ್ಯಾರ್ಥಿ ನೇಹಾಳನ್ನು ಹತ್ಯೆಗೈದ ಆರೋಪಿಗಳನ್ನು ಕೂಡಲೇ ಗಲ್ಲು ಶಿಕ್ಷೆಗೆ ಹಾಕಬೇಕು. ಅಂದಾಗ ಮುಂದೇ ಈ ರೀತಿಯ ಘಟನೆಗಳು ಸಂಭವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಶಿಲ್ಪಾ ಕುದರಗೊಂಡ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ, ಹತ್ಯೆ ನಡೆಯುತ್ತಿದ್ದರೂ ರಾಜ್ಯ ಸರಕಾರ ನಿರ್ಲಕ್ಷö್ಯ ತೋರುತ್ತಿರುವುದು ಸರಿಯಲ್ಲ. ನೇಹಾಗೆ ಚಾಕುವಿನಿಂದ ಇರಿದ ಫಯಾಜ್ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಿದರು.
ಈ ವೇಳೆ ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಅಶೋಕ ನಾರಾಯಣಪೂರ, ಗುರು ತಳವಾರ, ಸಿದ್ರಾಮ ಅನಗೊಂಡ, ಎಸ್.ಆರ್.ಪಾಟೀಲ, ಚೇತನ ಗುತ್ತೇದಾರ, ನೀಲಮ್ಮ ಯಡ್ರಾಮಿ, ಪ್ರಶಾಂತ ಕದ್ದರಕಿ, ವಿಠ್ಠಲ ನಾಯ್ಕೋಡಿ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಸಿದ್ದಲಿಂಗಯ್ಯ ಹಿರೇಮಠ, ಯಲ್ಲು ಇಂಗಳಗಿ, ಬಾಳು ಕುಂಬಾರ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪದಾಧಿಕಾರಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

