ಬಸವನಬಾಗೇವಾಡಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ ಸಿನಿಮಾ ಮಾದರಿಯಲ್ಲಿ ನಡೆದಿರುವುದು ಇಡೀ ಮನುಕುಲವೇ ತಲೆತಗ್ಗಿಸುವಂತಾಗಿದೆ. ಇದೊಂದು ಅಮಾನವೀಯ ಕೃತ್ಯವಾಗಿದೆ. ಈಚೆಗೆ ಲವ್ ಜಿಹಾದ್ ಹೆಸರಿನಲ್ಲಿ ಹಿಂದು ಹೆಣ್ಣುಮಕ್ಕಳು ಬಲಿಯಾಗುತ್ತಿರುವುದು ಖೇದಕರ ಸಂಗತಿ. ಅಬ್ದುಲ್ ಕಲಾಂ, ಸಂತ ಶಿಶುನಾಳ ಷರೀಪ್ ಅಜ್ಜ ಸೇರಿದಂತೆ ಅನೇಕ ವ್ಯಕ್ತಿಗಳು ಮುಸ್ಲಿಂ ಸಮಾಜಕ್ಕೆ ಸೇರಿದವರಾದರೂ ಇಡೀ ಮನುಕುಲಕ್ಕೆ ಬೇಕಾದವರು. ಇವರ ಸಂದೇಶ ಇಡೀ ಜಗತ್ತಿಗೆ ಮಾದರಿಯಾಗಿದೆ. ಇಂತಹ ಮಹಾತ್ಮರ ಹಾದಿಯಲ್ಲಿ ಎಲ್ಲ ಸಮಾಜ ಬಾಂಧವರು ನಡೆಯುವಂತಾಗಬೇಕು. ಯಾವುದೇ ಸಮಾಜದಲ್ಲಿ ಇಂತಹ ಹೀನ ಕೃತ್ಯ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸುವಂತಾಗಬೇಕು. ಇಂತಹ ದುಷ್ಕ್ರತ್ಯ ಮಾಡಿದವರನ್ನು ಬಹಿರಂಗವಾಗಿ ಶಿಕ್ಷೆ ವಿಧಿಸಿದರೆ ಮುಂದಿನ ದಿನಗಳಲ್ಲಿ ಇಂತಹ ಘಟನೆ ಜರುಗುವುದಿಲ್ಲ. ನೇಹಾ ಹಿರೇಮಠ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡುವಂತಾಗಲಿ ಎಂದು ಸ್ಥಳೀಯ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

