Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಸದರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದ
(ರಾಜ್ಯ ) ಜಿಲ್ಲೆ

ಸಂಸದರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಮುಖಂಡ ವಿವೇಕಾನಂದ‌ ಡಬ್ಬಿ ಸವಾಲು

ವಿಜಯಪುರ: ನಮ್ಮ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಅಭಿವೃದ್ಧಿ ಕಾರ್ಯಗಳು, ಕೊಡುಗೆಗಳನ್ನು ಪದೇಪದೇ ಪ್ರಶ್ನಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಯವರು ಹಾಗೂ ಕಾಂಗ್ರೆಸ್ ನಾಯಕರು ಕೇಳಲು ಸಿದ್ದರಿದ್ದರೆ ನಾವು ಹಾಗೂ ನಮ್ಮ ಅಭ್ಯರ್ಥಿ ಗಾಂಧಿ ಚೌಕಿನಲ್ಲಿ ಬಂದು ನಮ್ಮ ಬಿಜೆಪಿ ಸರ್ಕಾರದ ಹಾಗೂ ಸಂಸದರ ಅಭಿವೃದ್ಧಿ ಕಾರ್ಯಸಾಧನೆಗಳ ಬಗ್ಗೆ ಹೇಳಲು ಸಿದ್ದರಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕಾಂಗ್ರೆಸ್ಸಿನ ನಾಯಕರು ಬರುವುದಿದ್ದರೆ ಅಲ್ಲಿಗೆ ಬಂದು ಉತ್ತರ ಕೊಡಲಿ ಎಂದು ಬಿಜೆಪಿ ಓಬಿಸಿ ಮೊರ್ಚಾ ರಾಜ್ಯ ಉಪಾಧ್ಯಕ್ಷರಾದ ವಿವೇಕಾನಂದ ಡಬ್ಬಿ ಅವರು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.
ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ‌ ಅವರು ಮಾತನಾಡಿ, ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಏನು ಮಾಡಿದ್ದಾರೆಂದು ಕಾಂಗ್ರೆಸ್ಸಿಗರು ಪ್ರಶ್ನಿಸುತ್ತಿದ್ದಾರೆ. ನಮ್ಮ‌ ಅಭ್ಯರ್ಥಿ 12 ನೇ ಚುನಾವಣೆ ಎದುರಿಸುತ್ತಿದ್ದಾರೆ. ವಿಜಯಪುರ ಜಿಲ್ಲೆಗೆ ಕಿಸಾನ್ ಸಮ್ಮಾನ್ ಯೋಜನೆಯಡಿ 2, 51,107 ರೈತರಿಗೆ ಕೇಂದ್ರದಿಂದ ವರ್ಷಕ್ಕೆ 6 ಸಾವಿರ ಹಣ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 2,10,484 ತಾಯಂದಿರಿಗೆ ಗ್ಯಾಸ್ ವಿತರಣೆ, ಪಿಎಂ ಅವಾಸ್ ಯೋಜನೆಯಡಿ ಜಿಲ್ಲೆಯ 27,724 ಜನರಿಗೆ ಮನೆಗಳನ್ನು, ಜಲಜೀವನ್ ಮೀಷನ್ ಯೋಜನೆಯಡಿ 2,99,991 ಮನೆಗಳಿಗೆ ನಳ ಸಂಪರ್ಕ, ಪಿಎಂ ಗರೀಬ್ ಕಲ್ಯಾಣ ಯೋಜನೆಯಡಿ 16,15,708 ಕಾರ್ಡುದಾರರಿಗೆ 5 ಕೆಜಿ ಉಚಿತ ಅಕ್ಕಿ ವಿತರಿಸುವ ಕೆಲಸ ಮಾಡಿಸಿದ್ದಾರೆ.
ಜೊತೆಗೆ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ ಯೋಜನೆಯಡಿ 4, 95,613 ಆಯುಷ್ಮಾನ್ ಕಾರ್ಡ್, ಪಿಎಂ ಗ್ರಾಮ ಸಡಕ್ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿವರೆಗೂ 2006 ಕಿ.ಮೀ ಗ್ರಾಮೀಣ ರಸ್ತೆ ನಿರ್ಮಾಣ, 47 ಜನೌಷಧಿ ಕೇಂದ್ರ, ಸ್ವಚ್ಚ ಭಾರತದಡಿ 2,11,153 ಮನೆಗಳಿಗೆ ಶೌಚಾಲಯಗಳ ನಿರ್ಮಾಣ, ಶ್ರಮಿಕ ವರ್ಗದ 3,24,337 ಶ್ರಮಿಕರಿಗೆ ಇ-ಶ್ರಮ ಕಾರ್ಡ್ ನೀಡಲಾಗಿದೆ. ಹೀಗೆ ಜಿಲ್ಲೆಯಲ್ಲಿ ಅಂದಾಜು 19 ಲಕ್ಷ ಮತದಾರರಲ್ಲಿ ಒಬ್ಬೊಬ್ಬರಿಗೆ ಎರಡ್ಮೂರು ಯೋಜನೆಗಳಂತೆ ಸರಿಸುಮಾರು 30 ಲಕ್ಷ ಜನರಿಗೆ ನಮ್ಮ ಯೋಜನೆಗಳು ತಲುಪಿವೆ.‌ ಜಿಲ್ಲೆಯ ಅಭಿವೃದ್ಧಿಗೆ ಸಂಸದರು ಸುಮಾರು 1 ಲಕ್ಷ‌ ಕೋಟಿಗೂ ಅಧಿಕ‌ ಅನುದಾನ ತಂದಿದ್ದಾರೆ ಎಂದರು.
ಬಿಜೆಪಿ ಮುಖಂಡ ಕಾಸೂಗೌಡ ಬಿರಾದಾರ ಮಾತನಾಡಿ, ವಿಜಯಪುರ ನಗರ ಮತಕ್ಷೇತ್ರದಲ್ಲಿ‌ ಎರಡು ದಿನಗಳ ಕಾಲ ಬಿಜೆಪಿ ಪ್ರಚಾರಾರ್ಥ ಕಾರ್ಯವಾಗಿ ಉಸ್ತುವಾರಿಯಾಗಿ ನೇಮಕವಾಗಿದ್ದೇನೆ.‌ ನಗರದ ಎರಡು ದಿನಗಳ ಪ್ರಚಾರದಲ್ಲಿ ಬಿಜೆಪಿ ಪರ ಅತ್ಯುತ್ತಮ ಬೆಂಬಲ ವ್ಯಕ್ತವಾಗಿದ್ದು, ನಿಜಕ್ಕೂ ನಮ್ಮ‌ ಅಭ್ಯರ್ಥಿ ಜಿಗಜಿಣಗಿ ಅವರು ಅತ್ಯಧಿಕ‌ ಮತಗಳಿಂದ‌ ಗೆದ್ದು ಬರುವ ವಿಶ್ವಾಸ ಮೂಡಿಸಿದೆ. ಸಂಸದ ರಮೇಶ ಜಿಗಜಿಣಗಿ, ಶಾಸಕ ಯತ್ನಾಳರು ಹಾಗೂ ನಮ್ಮ‌ ಪಾಲಿಕೆ ಸದಸ್ಯರು ನಗರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು, ಬದಲಾವಣೆಗಳನ್ನು ಜನತೆ ಮೆಚ್ಚಿಕೊಂಡಿದ್ದಾರೆ ಎಂದರು. ಬಿಜೆಪಿ ಸಾಧನೆಗಳನ್ನು ಕಂಡು ಕಾಂಗ್ರೆಸ್ಸಿಗರು ಹತಾಶರಾಗಿದ್ದಾರೆ. 70 ವರ್ಷದಲ್ಲಾಗದ ಅಭಿವೃದ್ಧಿ ಕೆಲಸಗಳನ್ನು ಪ್ರಧಾನಿ ಮೋದಿಯವರು ಹತ್ತು ವರ್ಷಗಳ ಮಾಡಿ ತೋರಿಸಿದ್ದಾರೆ. ನಮ್ಮ ಅಭ್ಯರ್ಥಿ ಜಿಗಜಿಣಗಿ ಅವರು 3 ಲಕ್ಷದವರೆಗೂ ಅಧಿಕ ಅಂತರದಿಂದ ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.