ಸಿಂದಗಿ: ಸತ್ಯ ಅಂಹಿಸಾ ತತ್ವಾದರ್ಶಗಳನ್ನು ಬೋಧಿಸಿದ ಭಗವಾನ್ ಮಹಾವೀರ ಅವರನ್ನು ದೇಶದ ಎಲ್ಲ ಸಮುದಾಯದವರು ನೆನೆಯಬೇಕು ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ೨೦೨೪ರ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಭಗವಾನ್ ಮಹಾವೀರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ ಅವರು, ತ್ಯಾಗ, ಸತ್ಯ ಮತ್ತು ಅಂಹಿಸೆಯ ಶಾಶ್ವತ ಸಂಕೇತವಾದ ಭಗವಾನ್ ಮಹಾವೀರರು ತಮ್ಮ ಬೋಧನೆಗಳ ಮೂಲಕ ಇಡೀ ಮಾನವ ಜನಾಂಗದ ಕಲ್ಯಾಣಕ್ಕೆ ದಾರಿ ಮಾಡಿಕೊಟ್ಟರು. ಅವರ ಪಂಚಶೀಲ ತತ್ವಗಳು ಜನರಿಗೆ ಮಾರ್ಗದರ್ಶನ ನೀಡುತ್ತಿವೆ ಎಂದರು.
ಇದೇ ಸಂದರ್ಭದಲ್ಲಿ ಸಮಾಜದ ಮುಖಂಡರಾದ ವಿ.ಡಿ.ಪಾಟೀಲ, ಸುಭಾಸ ಒನಕುದರಿ, ಡಾ.ಅಭಯ ಕಾಗಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಮತ್ತಿತರರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

