Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ನಡಹಳ್ಳಿಯವರ ಕೋಟಿ, ಕೋಟಿ ಭ್ರಷ್ಟಾಚಾರಕ್ಕೆ ನಾನೇ ಸಾಕ್ಷಿ : ಶಾಂತಗೌಡ ಗಂಭೀರ ಆರೋಪ
(ರಾಜ್ಯ ) ಜಿಲ್ಲೆ

ಶಾಸಕ ನಡಹಳ್ಳಿಯವರ ಕೋಟಿ, ಕೋಟಿ ಭ್ರಷ್ಟಾಚಾರಕ್ಕೆ ನಾನೇ ಸಾಕ್ಷಿ : ಶಾಂತಗೌಡ ಗಂಭೀರ ಆರೋಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಹೋದರಗೆ ಸವಾಲೆಸೆದ ಶಾಂತಗೌಡ | ತೀವ್ರ ವಾಗ್ದಾಳಿ | ದಾಖಲೆ ಬಿಡುಗಡೆಯ ಎಚ್ಚರಿಕೆ

ಮುದ್ದೇಬಿಹಾಳ: ಮುಂಬರುವ ದಿನಗಳಲ್ಲಿ ನಾನು ಗೆದ್ದುಬಂದರೆ ಸುಮಾರು ೧೦ ಸಾವಿರ ಉದ್ಯೋಗ ಸೃಷ್ಠಿ ಮಾಡುತ್ತೇವೆ. ಪ್ರತಿ ಕುಟುಂಬದ ಮಹಿಳೆಗೆ ಒಂದು ಹಸು ಕೊಡುವುದರ ಮೂಲಕ ತಿಂಗಳಿಗೆ ೩೦ ಸಾವಿರ ಸಂಪಾದನೆ ಮಾಡುವಂತೆ ಮಾಡುತ್ತೇನೆ ಎಂದು ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ)ಯವರು ಹೇಳಿಕೆ ನೀಡುವ ಮೂಲಕ ಜನರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ನಾವೇ ಶಾಸಕರಿಗೊಂದು ಹಸು ಕೊಡಿಸುತ್ತೇವೆ. ತಿಂಗಳಿಗೆ ೩೦ ಸಾವಿರ ದುಡಿದು ತೋರಿಸಲಿ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ಸವಾಲೆಸೆದರು.
ಗುರುವಾರ ಪಟ್ಟಣದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ)ಯವರು ಕೇವಲ ಸಿಸಿ ರಸ್ತೆಗಳನ್ನು ಮಾಡಿ ಅವುಗಳಿಗೆ ವಿದ್ಯುತ್ ದೀಪಗಳನ್ನು ಹಾಕಿದರೆ ನಿಜವಾದ ಅಭಿವೃದ್ಧಿಯಾಗುವುದಿಲ್ಲ ಎಂದು ಕುಟುಕಿದರು.
ಮುಖ್ಯಮಂತ್ರಿ ಸಿದ್ರಾಮಯ್ಯನವರ ಆಡಳಿತದಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಗಳ ಅನುದಾನ ತರುವ ಮೂಲಕ ಹಿಂದುಳಿದ ಜನಾಂಗದ ಎಸ್‌ಸಿ, ಎಸ್ಟಿ ವಸತಿ ಕಾಲೇಜು, ಸರಕಾರಿ ಶಾಲೆಗಳನ್ನು, ವಿದ್ಯುತ್ ಸ್ಥಾವರಗಳು ಸೇರಿದಂತೆ ಹಲವಾರು ನೀರಾವರಿ ಯೋಜನೆಗಳು, ರಸ್ತೆ ನಿರ್ಮಾಣ ಯೋಜನೆಗಳಲ್ಲಿ ಅಭಿವೃದ್ಧಿಪಡಿಸಿದ ಕೀರ್ತಿ ಮಾಜಿ ಸಚಿವ ಸಿ.ಎಸ್.ನಾಡಗೌಡ ಅವರಿಗೆ ಸಲ್ಲುತ್ತದೆ. ಆದರೆ ಹಿಂದಿನ ಶಾಸಕರ ಸರಕಾರದ ಆಡಳಿತದಲ್ಲಿ ಆದ ಕಾಮಗಾರಿಗಳಿಗೆ ನಡಹಳ್ಳಿಯವರು ತಾವು ಮಾಡಿದೆನೆಂದು ಜನರಲ್ಲಿ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎನ್ನುವುದನ್ನು ಎಲ್ಲರೂ ಅರಿತುಕೊಳ್ಳಬೇಕು.

ಶಾಸಕರು ಕುಟುಂಬ ರಾಜಕಾರಣ, ದುರಾಡಳಿತ, ಅನೈತಿಕ ರಾಜಕಾರಣ ಮತ್ತು ಬಿಜೆಪಿ ಮೂಲ ಕಾರ್ಯಕರ್ತರ ಹಾಗೂ ಪ್ರಮುಖ ಮುಖಂಡರ ಕಡೆಗಣೆಗೆ ಸಾಕ್ಷಿ ತಾಳಿಕೋಟೆಯಲ್ಲಿ ನಡೆದ ಬಿಜೆಪಿಯ ವಿಜಯಸಂಕಲ್ಪ ಯಾತ್ರೆ ವಿಫಲಗೊಂಡಿದ್ದು. ತಾಲೂಕಿನ ನಾಲತವಾಡದಲ್ಲಿ ಮುಖ್ಯಮಂತ್ರಿಗಳು ವಿವಿಧ ಕಾಮಗಾರಿಗಳ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿಯೂ ಸಹ ಬಿಜೆಪಿ ಮೂಲ ಕಾರ್ಯಕರ್ತರು, ಮುಖಂಡರು ಗೈರು ಉಳಿದು ವಿರೋಧದ ನಡೆ ಪ್ರದರ್ಶಿಸಿದರು. ಇಂತಹ ಸಂದರ್ಭದಲ್ಲಿ ಈ ಬಾರಿ ೨೦೨೩ರ ವಿಧಾನ ಸಭಾ ಚುನಾವಣೆಯಲ್ಲಿ ಮತ್ತೆ ಎ.ಎಸ್.ಪಾಟೀಲ(ನಡಹಳ್ಳಿ)ರಿಗೆ ಟಿಕೆಟ್ ಕೊಟ್ಟರೆ ಖಂಡಿತ ಸೋಲು ಕಟ್ಟಿಟ್ಟಂತೆ. ಹಾಗಾಗಿ ಬಿಜೆಪಿ ವರಿಷ್ಠರು ನಡಹಳ್ಳಿಯವರಿಗೆ ಟಿಕೆಟ್ ನೀಡದೇ ಮೂಲ ಬಿಜೆಪಿ ಕಾರ್ಯಕರ್ತರಲ್ಲಿ ಯಾರಿಗೇ ಟಿಕೆಟ್ ಕೊಟ್ಟರೂ ಎಲ್ಲ ಒಗ್ಗಟ್ಟಾಗಿ ಮತ್ತೆ ಬಿಜೆಪಿ ಗೆಲ್ಲಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ ಎಂದರು.
ಬಬಲೇಶ್ವರ ಶಾಸಕ ಎಂ.ಬಿ ಪಾಟೀಲರು ನೀರಾವರಿ ಸಚಿವರಾಗಿದ್ದ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಗೆ ಸಮಗ್ರ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂದರ್ಭ ಸುಮಾರು ರೂ.೭೫೦ ಕೋಟಿ ಭ್ರಷ್ಟಾಚಾರವೆಸಗಿದ್ದು ಮುಂದಿನ ದಿನಗಳಲ್ಲಿ ದಾಖಲೆ ಸಮೇತ ಬಿಡುಗಡೆ ಮಾಡುತ್ತೇನೆ ಎಂದು ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ಕೊಟ್ಟಿದ್ದರು. ಆದರೆ ಸಧ್ಯ ರಾಜ್ಯದಲ್ಲಿ ತಮ್ಮದೇ ಸರಕಾರವಿದ್ದರೂ ತಾವು
ಯಾಕೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿವೇಶನದಲ್ಲಿ ಧ್ವನಿ ಎತ್ತಲಿಲ್ಲ.? ಎಂದು ಪ್ರಶ್ನಿಸಿದರು.
ಮತಕ್ಷೇತ್ರದ ಯಾವೊಬ್ಬ ಗುತ್ತಿಗೆದಾರರಿಂದ ಒಂದು ನಯಾ ಪೈಸೆ ಹಣ ಕಮೀಷನ್ ಪಡೆದಿಲ್ಲ ; ಸುಮ್ಮನೆ ನನ್ನ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳುವ ಶಾಸಕ ನಡಹಳ್ಳಿಯವರು ಶೇ. ೧೦ ರಿಂದ ೧೫ ರಷ್ಟು ಕಮೀಷನ್ ಪಡೆದಿರುವ ದಾಖಲೆಗಳು ಮತ್ತು ಗುತ್ತಿಗೆದಾರರ ಬಳಿ ಹಣ ಪಡೆಯುತ್ತಿರುವ ವಿಡಿಯೋಗಳು ನನ್ನ ಹಾಗೂ ಗುತ್ತಿಗೆದಾರರ ಬಳಿ ಇವೆ. ಭ್ರಷ್ಟಾಚಾರದಿಂದಲೇ ಸುಮಾರು ರೂ.೩೫೦ ಕೋಟಿ ಗಳಿಸಿದ್ದಾರೆ. ಅದರಲ್ಲಿ ನನ್ನ ನೇತೃತ್ವದಲ್ಲಿಯೇ ಬಹುತೇಕ ಗುತ್ತಿಗೆದಾರರು ರೂ.೯೫ ಕೋಟಿವರೆಗೆ ಕಮೀಷನ್ ಕೊಟ್ಟಿದ್ದಾರೆ. ನನ್ನ ಸಹೋದರರಿದ್ದೀರಿ ಎನ್ನುವ ಕಾರಣಕ್ಕೆ ನಾನು ಮೌನ ವಹಿಸಿದ್ದೇನೆ ಎಂದು ಶಾಂತಗೌಡ ಗಂಭೀರ ಆರೋಪ ಮಾಡಿದರು.

BIJAPUR NEWS MUDDEBIHAL NEWS NADAHALLI NEWS udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.