Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋದಿ ಮತ್ತೆ ಪ್ರಧಾನಿಯಾಗಲು ನಾಮಪತ್ರ ಹಿಂಪಡೆದೆ :ಹುಣಶಿಕಟ್ಟಿ
(ರಾಜ್ಯ ) ಜಿಲ್ಲೆ

ಮೋದಿ ಮತ್ತೆ ಪ್ರಧಾನಿಯಾಗಲು ನಾಮಪತ್ರ ಹಿಂಪಡೆದೆ :ಹುಣಶಿಕಟ್ಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜವಾಬ್ದಾರಿಯುತ ಹಿರಿಯ ನಾಗರಿಕನಾಗಿ ದೇಶದ ರಕ್ಷಣೆ, ಅಭಿವೃದ್ಧಿ ನನಗೆ ಮುಖ್ಯ. ಹಾಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ‌ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿಯವರನ್ನು‌ ಬೆಂಬಲಿಸಿ, ರಾಷ್ಟ್ರ ರಕ್ಷಣೆ, ಪ್ರಗತಿಗಾಗಿ ಜಗಮೆಚ್ಚಿದ ನಾಯಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದಿದ್ದೇನೆ ಎಂದು ನಿವೃತ್ತ ಡಿವೈಎಸ್ಪಿ ಸಂಗಪ್ಪ ಹುಣಶಿಕಟ್ಟಿ ಹೇಳಿದರು.
ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿ, ನಾನು ಸುಮಾರು 30 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ನಿವೃತ್ತಿಯ ನಂತರವೂ ಸಮಾಜಮುಖಿ ಕೆಲಸಕ್ಕೆ ತೊಡಗಿಕೊಳ್ಳಬೇಕೆಂಬ ಉದ್ದೇಶದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ‌ ನಾಮಪತ್ರ ಸಲ್ಲಿಸಿದ್ದೆ. ಆಗ ನಮ್ಮ‌ ಸಮುದಾಯದ ಅನೇಕ‌ ಹಿರಿಯರು ಆಗಮಿಸಿ ಕಳೆದ ಹತ್ತು ವರ್ಷಗಳಲ್ಲಿ ಮೋದಿಯವರ ಆಡಳಿತದಲ್ಲಿ ದೇಶದಲ್ಲಾದ ಅನೇಕ ಅಭಿವೃದ್ಧಿ ಕಾರ್ಯಗಳು, ಬದಲಾವಣೆಗಳ ಬಗ್ಗೆ ಚರ್ಚಿಸಿ ಪ್ರಸ್ತುತ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಅವಶ್ಯಕತೆ ಬಗ್ಗೆ ವಿವರಿಸಿದರು. ಅವರೆಲ್ಲಾ ಒತ್ತಾಸೆಯಂತೆ ಹಾಗೂ ನಾನು ಸಹ ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ಇದಕ್ಕೆ‌ ಬೆಂಬಲ ವ್ಯಕ್ತಪಡಿಸಿ ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರ ಹಿಂಪಡೆದಿದ್ದೇನೆ ಎಂದರು.
ಕಾಂಗ್ರೇಸ್ ಪಕ್ಷದಲ್ಲಿ ಸಂಸ್ಕಾರವಿಲ್ಲ, ನಾಯಕರಲ್ಲಿ ಅಧಿಕಾರದ ಹಪಹಪಿತನ ಹೆಚ್ಚಾಗಿದೆ. ಹಿಂದೆ ಸಿಎಂಗಳಾಗಿದ್ದ ಎಸ್.ಎಂ.ಕೃಷ್ಣ, ಜೆ.ಹೆಚ್.ಪಟೇಲರು, ವಿರೇಂದ್ರ ಪಾಟೀಲರು, ರಾಮಕೃಷ್ಣ ಹೆಗ್ಡೆ ಹೀಗೆ ಅನೇಕ‌ ಸಜ್ಜನ ರಾಜಕಾರಣಿಗಳು ಮಾತನಾಡುತ್ತಿದ್ದರೆ ಮುತ್ತು ರತ್ನಗಳು ಉದುರಿದಂತೆ ಮಾತುಗಳು ಹೊರಬರುತ್ತಿದ್ದವು. ಆದರೆ ಈಗಿನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ ಅವರ ಅಹಂಕಾರ, ದುರಾಹಂಕಾರದ ಮಾತುಗಳು ಕೇಳಿದರೆ ತೀವ್ರ ಬೇಸರವಾಗುತ್ತದೆ. ದಿನಬೆಳಗಾದರೆ ಕಾಂಗ್ರೆಸ್ ನವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರು ಹೇಳುತ್ತಾರೆ. ಆದರೆ ಅವರನ್ನು ಚುನಾವಣೆಯಲ್ಲಿ ಸೋಲಿಸಿದವರೇ ಕಾಂಗ್ರೆಸ್ ನವರು. ಅಂಬೇಡ್ಕರ್ ಅವರು ಮೃತಪಟ್ಟಾಗ ಅವರ ಶವಸಂಸ್ಕಾರಕ್ಕೂ ಬರದೇ, ಅಂತ್ಯಕ್ರಿಯೆಗೆ ಜಾಗ ನೀಡಲಿಲ್ಲ, ಭಾರತದ ಸಂವಿಧಾನ ಶಿಲ್ಪಿಯಾಗಿರುವ ಅಂಬೇಡ್ಕರ್ ಅವರಿಗೆ ಭಾರತರತ್ನ ಸಹ ನೀಡಿಲ್ಲ. ದೇಶದ ಸರ್ವಾಂಗಿಣ ಪ್ರಗತಿಗೆ, ಭವಿಷ್ಯಕ್ಕೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಿದೆ ಎಂದರು.
ಮುಖಂಡ ಹನುಮಂತ ಬಿರಾದಾರ ಮಾತನಾಡಿ, ಜಿಲ್ಲೆಯ ಅಜಾತಶತ್ರು, ಜಾತ್ಯಾತೀತ ರಾಜಕಾರಣಿ ರಮೇಶ ಜಿಗಜಿಣಗಿ ಅವರು ಇಷ್ಟು ವರ್ಷ ರಾಜಕಾರಣ ಮಾಡಿದರೂ‌ ಯಾರಿಗೂ ತೊಂದರೆ ಕೊಟ್ಟವರಲ್ಲ, ಎಂದೂ ಜಾತಿ ರಾಜಕಾರಣ ಮಾಡಿದವರಲ್ಲ. ಜಿಲ್ಲೆಯ ಅಭಿವೃದ್ಧಿಗೆ‌ ಒಂದು ಲಕ್ಷ‌ ಕೋಟಿಯಷ್ಟು ಅನುದಾನ ತಂದು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೂ ಎಂದು ಪ್ರಚಾರ ಪಡೆದವರಲ್ಲ. ಹಾಗಾಗಿ ಅಂತಹ ರಾಜಕಾರಣಿ‌ ಮತ್ತೊಮ್ಮೆ‌ ಆರಿಸಿ‌ ಬಂದು‌ ನರೇಂದ್ರ‌ ಮೋದಿಯವರ ಕೈ ಬಲಪಡಿಸಬೇಕಿದೆ. ನಾವೆಲ್ಲಾ ಅವರ ಗೆಲುವಿಗೆ ಟೊಂಕಕಟ್ಟಿ ಕಂಕಣಬದ್ಧರಾಗಿದ್ದೇವೆ ಎಂದರು. ಈ ವೇಳೆ ಮುಖಂಡ ಶರಣು ಬ್ಯಾಳಿ ವಿಜಯ ಜೋಶಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.