ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು, ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರಿಗೆ ಮತ್ತು ಪೊಲಿಂಗ್ ಏಜೆಂಟರಿಗೆ ಗಂಬೀರವಾಗಿ ತಿಳುವಳಿಕೆ ನೀಡುವ ಕಾರ್ಯವಾಗಬೇಕು ಎಂದು ವಿಜಯಪುರ ಮೀಸಲು ಲೋಕಸಭಾ ಚುನಾವಣೆಯ ಸಾಮಾನ್ಯ ವೀಕ್ಷಕರಾದ ಡಾ. ರತನಕನ್ವರ ಹೆಚ್. ಗಡವಿಚರಣ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಮತ್ತು ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದ ಫಲಿತಾಂಶ ಪ್ರಕಟವಾಗುವರೆಗೂ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಪಾರದರ್ಶಕವಾಗಿರಬೇಕಾಗಿದ್ದು, ನೀವು ನೇಮಕ ಮಾಡಿಕೊಳ್ಳುವ ಏಜೇಂಟರು ಚುನಾವಣಾ ಆಯೋಗದ ಮಾರ್ಗಸೂಚಿಗಳ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರಬೇಕು. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೂಪದ ನಿರ್ದಿಷ್ಟವಾದ ದೂರು ಅಥವಾ ಸಮಸ್ಯೆ ಇದ್ದಲ್ಲಿ ಅದನ್ನು ಚುನಾವಣಾ ವೀಕ್ಷಕರ ಗಮನಕ್ಕೆ ತರಬೇಕು ಎಂದರು.
ವೆಚ್ಚ ವೀಕ್ಷಕ ಅನುಪ್ ಕುಮಾರ್ ಮಾತನಾಡಿ ಚುನಾವಣಾ ಆಯೋಗದ ನಿರ್ದೆಶನದಂತೆ ಪ್ರತಿಯೊಒಬ್ಬ ಅಭ್ಯರ್ಥಿಯು ಈ ಚುನಾವಣೆಗಾಗಿಯೇ ಅಭ್ಯರ್ಥಿ ಹೆಸರಿನಲ್ಲಿ ಪ್ರತ್ಯೆಕವಾದ ಬ್ಯಾಂಕ್ ಖಾತೆಯನ್ನು ತೆರೆಯಬೇಕಾಗುತ್ತದೆ. ಚುನಾವಣಾ ಆಯೋಗವು ಅಭ್ಯರ್ಥಿಗಳು ನಡೆಸುವ ಸಾರ್ವಜನಿಕಮ ಸಭೆಗಳು, ರ್ಯಾಲಿ, ಬ್ಯಾನರ್ ಸೇರಿದಂತೆ ಚುನಾವಣಾ ಪ್ರಚಾರಕ್ಕೆ ಕಾನೂನುಬದ್ದವಾಗಿ ಮಾತ್ರ ಖರ್ಚು ಮಾಡಲು ಈ ಬಾರಿ ೯೫ ಲಕ್ಷದವರೆಗೂ ಅನುಮೋದಿಸುತ್ತಿರುತ್ತದೆ. ಇದನ್ನು ಹೊರತುಪಡಿಸಿದ ಸಂಶಯಾಸ್ಪದ ವಹಿವಾಟುಗಳು ಕಂಡು ಬಂದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. .
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾಗಿರುವ ಟಿ. ಭೂಬಾಲನ್ ಮಾತನಾಡಿ ಮತಯಾಚನೆಯ ಜಾಹಿರಾತುಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಬೇಕಾದಲ್ಲಿ ಮತ್ತು ಕರಪತ್ರಗಳನ್ನು ಮುದ್ರಿಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಪಕ್ಷದ ಬಾವುಟಗಳನ್ನು ರಾಜಕಿಯ ಪಕ್ಷಗಳ ಕಾರ್ಯಲಯದ ಕಚೇರಿ ಹೊರತುಪಡಿಸಿ ಯಾರ ಮನೆಯ ಮೇಲು ಪ್ರದರ್ಶಿಸಲು ಅವಕಾಶವಿರುವುದಿಲ್ಲಾ. ಈ ಎಲ್ಲಾ ಮಾರ್ಗಸುಚಿಗಳನ್ನು ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾಗಿರುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಾಣೆ ಮಾತನಾಡಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌದ ಸೋಮನಾಳ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳಿಗೆ ಮಾದರಿ ನಡತೆ ಸಂಹಿತೆ ಕುರಿತು ತಿಳುವಳಿಕೆ ನೀಡಿದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment
