ಮುದ್ದೇಬಿಹಾಳ: ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲ ಸಮುದಾಯಗಳ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಬಂದ್ ಮಾಡುವ ಮೂಲಕ ಪ್ರತಿಭಟಿಸಿದರು.
ವಿವಿಧ ಹಿಂದೂಪರ ಸಂಘಟನೆಗಳು, ಬಜಾರ್ ವ್ಯಾಪಾರಸ್ಥರ ಸಂಘದ ವತಿಯಿಂದ ಸ್ವಯಂಪ್ರೇರಿತರಾಗಿ ಬಂದ್ ಮಾಡುವದಾಗಿ ನಿರ್ಧರಿಸಿದ್ದರು. ಬೆಳಿಗ್ಗೆಯಿಂದ ಮಾಧ್ಯಾಹ್ನದವರೆಗೆ ತರಕಾರಿ, ಹಣ್ಣು, ಔಷದ ಅಂಗಡಿಗಳನ್ನು ಹೊರತುಪಡಿಸಿ ಎಲ್ಲ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

