ಢವಳಗಿ: ಸಮೀಪದ ಬಸರಕೋಡ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರರ ಜಾತ್ರಾ ನಿಮಿತ್ತವಾಗಿ ಮಂಗಳವಾರದಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವಿಜಯಪುರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಢವಳಗಿ ಹಾಗೂ ಶ್ರೀ ಪವಾಡ ಬಸವೇಶ್ವರರ ದೇವಸ್ಥಾನದ ಕಮೀಟಿ ಬಸರಕೋಡ ಅವರ ಸಹಯೋಗದಲ್ಲಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರದಲ್ಲಿ ಒಟ್ಟು 47 ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ಶ್ರೀ ಪವಾಡ ಬಸವೇಶ್ವರ ಸಂಸ್ಥೆಯ ಅಧ್ಯಕ್ಷ ಕೆ ವಾಯ್ ಬಿರಾದಾರ, ಪ್ರಧಾನ ಕಾರ್ಯದರ್ಶಿ ಸಿಂದುಬಲ್ಲಾಳರಾವ್ ನಾಡಗೌಡ ಧಣಿಗಳು, ಜಾತ್ರಾ ಕಮೀಟಿ ಅಧ್ಯಕ್ಷ ಶ್ರೀಶೈಲ ಸೂಳಿಭಾವಿ, ಬಿ ಎಸ್ ಬೈಲಗುಂಡ್,ಎಸ್ ವಾಯ್ ಸೂಳಿಭಾವಿ, ಶ್ರೀಶೈಲ ಮೇಟಿ, ಹಾಗೂ ಆಶಾ ಕಾರ್ಯಕರ್ತೆಯರು, ಮತ್ತು ಯುವಕರು ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

