Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಕ್ತಿ ಮತ್ತು ಶಕ್ತಿಗೆ ಹುನುಮಂತನೆ ಮೂಲ :ಜಂಬುನಾಥ ಕಂಚಾಣಿ
(ರಾಜ್ಯ ) ಜಿಲ್ಲೆ

ಭಕ್ತಿ ಮತ್ತು ಶಕ್ತಿಗೆ ಹುನುಮಂತನೆ ಮೂಲ :ಜಂಬುನಾಥ ಕಂಚಾಣಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸತ್ಸಂಗದಿಂದ ಮಾತ್ರ ಮನಸ್ಸು ಶುದ್ಧೀಕರಣಗೊಳ್ಳಲು ಸಾಧ್ಯ ಎಂದು ಹಿರಿಯ ಸಾಹಿತಿ ಜಂಬುನಾಥ ಕಂಚಾಣಿ ಹೇಳಿದರು. ಮಂಗಳವಾರ ನಗರದ ಸಾಯಿ ರೆಸಿಡೆನ್ಸಿ ಬಡವಾಣೆಯ ವೀರಾಂಜನೇಯ ದೇವಸ್ಥಾನದ ಕ್ಷೇಮಾಭಿವೃದ್ಧಿ ಸಮಿತಿಯು ಹಮ್ಮಿಕೊಂಡ ಹನುಮಾನ ಜಯಂತಿ ಉತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿ, ಜಾತ್ರೆ ಮತ್ತು ಮಹಾತ್ಮರ ಜಯಂತ್ಯೋತ್ಸವಗಳ ನೆಪದಲ್ಲಿ ಮನಸ್ಸು ವಿಕಸನಗೊಳ್ಳುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ರಾಮನ ಬಂಟನಾದ ಹನುಮಂತ ಬಹು ಜನಪ್ರಿಯನಾದ ನಾಡದೇವತೆ, ಊರ ಹೊರಗಿದ್ದ ಹನುಮಾನ ದೇವಾಲಗಳು ಇಂದು ಊರಿನ ಮಧ್ಯ ಹಾಗೂ ಜನರ ಹೃದಯದಲ್ಲಿ ಸ್ಥಾಪಿತವಾಗಿವೆ. ನಾವು ಮಾಡುವ ಭಕ್ತಿ ಮನಸ್ಸುಗಳನ್ನು ಬೆಸೆಯುವ ಹಾಗಿರಬೇಕು. ರಾಮ ಮತ್ತು ಸೀತೆಯರನ್ನು ಒಂದುಗೂಡಿಸಿದ ಹುನುಮಂತ ಭಕ್ತಿಗೆ, ಶಕ್ತಿಗೆ, ಯುಕ್ತಿಗೆ, ಜ್ಞಾನಕ್ಕೆ ಮೂಲನಾಗಿರುವನು ಎಂದರು.
ಸಾನಿಧ್ಯ ವಹಿಸಿ ಮಾತನಾಡಿದ ಶಿವ ಬಸವ ಯೋಗಾಶ್ರಮದ ಮಾತೋಶ್ರೀ ದಾನಮ್ಮ ತಾಯಿಯವರು ಮಾತನಾಡಿ, ಮಹಾತ್ಮರನ್ನು ನೆನೆಯುವುದೇ ಘನ ಮುಕ್ತಿ ಪದಂ ಎನ್ನುವಂತೆ ಈ ನಾಡಿನಲ್ಲಿ ಜನಿಸಿ ಜನರ ಬದುಕನ್ನು ಹಸನುಗೊಳಿಸಲು ಶ್ರಮಿಸಿದ ಶರಣರನ್ನು ಸತ್ಪುರುಷರನ್ನು ನಾವು ನಿತ್ಯವೂ ನೆನೆಯಬೇಕು, ಹನುಮಾನ ಜಯಂತಿಯ ಮೂಲಕ ನಿಷ್ಠೆಯಿಂದ ಭಕ್ತಿ ಮಾಡುವ ಮನೋಭಾವ ಹೆಚ್ಚಿಸಿಕೊಂಡು ಯಾವತ್ತೂ ಸತ್ಸಂಗದಲ್ಲಿ ಭಾಗಿಯಾಗಿ ನಿಜ ಸುಖವನ್ನು ಅನುಭವಿಸಬೇಕು ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಾಂಜನೇಯ ದೇವಸ್ಥಾನದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಸ್ ಡಿ ಕೃಷ್ಣಮೂರ್ತಿ ವಹಿಸಿಕೊಂಡಿದ್ದರು.
ವೇದಿಕೆಯಲ್ಲಿ ಮಲ್ಲಿಕಾರ್ಜುನ ಗಡಗಿ, ಮಹಾಲಕ್ಷ್ಮಿ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಸುಧಾ ರಾ ಇಂಡಿ, ರಾಣಿ ಕಿತ್ತೂರು ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಗೌರಮ್ಮ ಕುಬಕಡ್ಡಿ ಅತಿಥಿಗಳಾಗಿ ಭಾಗವಹಿಸಿದ್ದರು, ಇದೇ ಸಂದರ್ಭದಲ್ಲಿ ಡಾ. ಸಿ ಕೆ ಹೊಸಮನಿ, ಎಸ್ ಬಿ ಪೂಜಾರ, ಅಮೋಘಸಿದ್ದ ಹಂಜಗಿ ದಂಪತಿಗಳನ್ನು ಸನ್ಮಾನಿಸಲಾಯಿತು, ಕಾರ್ಯಕ್ರಮದಲ್ಲಿ ಮುಖಂಡರಾದ ಮಹಾದೇವ ಕಾಮಗೊಂಡ, ಈರಣ್ಣ ನಾಗರಾಳ, ಎಸ್ ಬಿ ಹಳಗುಣಕಿ, ಬೇವೂರು, ಎಸ್ ಟಿ ಕನಕ, ಶಿವಾನಂದ ಯಾಳವಾರ, ಹೆಚ್ ಹೆಚ್ ಭರಡ್ಡಿ, ಶ್ರೀಕಾಂತ್ ಜಮಖಂಡಿ, ಬಿ ಆರ್ ನರಗುಂದ, ಹೆಚ್ ಎಲ್ ಸಂಕ, ರಾಜಶೆಖರ ಇಂಡಿ, ಎಸ್ ಎಸ್ ದುರಗದ, ಚಿದಾನಂದ ಗಡಗಿ, ಸಿದ್ದು ಇಜೇರಿ, ಬಸವರಾಜ ಪವಾರ, ಸುನೀಲ್ ಟಂಕಸಾಲೆ ಸೇರಿದಂತೆ ಹಲವರು ಭಾಗವಹಿಸಿದ್ದರು ಎಂ ಬಿ ಮಮದಾಪೂರ ಹಾಗೂ ಸಾವಿತ್ರಿಬಾಯಿ ಮುಂಡಾಸ್ ಕಾರ್ಯಕ್ರಮ ನಿರೂಪಿಸಿದರು ಪಂಡಿತರಾವ ಪಾಟೀಲ್ ವಂದಿಸಿದರು
ಬೆಳಿಗ್ಗೆ ದೇವಸ್ಥಾನದ ಆವರಣದ ವೀರಾಂಜನೇಯ ಸ್ವಾಮಿಯ ಮೂರ್ತಿಗೆ ಅಭಿಷೇಕ, ವಿಶೇಷ ಪೂಜೆ ನಡೆದವು ನಂತರ ಅತ್ಯಂತ ಸಂಭ್ರಮ ಹಾಗೂ ಭಕ್ತಿ ಭಾವದಿಂದ ಮಹಿಳಾ ಭಕ್ತರು ಬಾಲ ಹನುಮನನ್ನು ತೊಟ್ಟಿಲಲ್ಲಿ ಹಾಕಿ ಜೋಗುಳ ಪದಗಳನ್ನು ಹಾಡಿ ನಾಮಕರಣ ಕಾರ್ಯಕ್ರಮವನ್ನು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮಾಡುವ ಮೂಲಕ ಸಂಭ್ರಮಿಸಿದರು
ಮಧ್ಯಾಹ್ನ ಅನ್ನ ಪ್ರಸಾದ ನಡೆಯಿತು ಈ ಕಾರ್ಯಕ್ರಮದಲ್ಲಿ ಸಾಯಿ ರೆಸಿಡೆನ್ಸಿ, ಸದಾಶಿವ ನಗರದ ಹಾಗೂ ಎಕ್ಸಾಟಿಕ್ ಕಾಲೋನಿಗಳ ನೂರಾರು ಜನ ಭಕ್ತರು ಭಾಗವಹಿಸಿ ಹನುಮ ಜಯಂತಿಯನ್ನು ಭಕ್ತಿ ಸಡಗರದಿಂದ ಆಚರಿಸಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.