ವಿಜಯಪುರ: ೨೦೨೩-೨೪ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿಜಯಪುರ ಜಿಲ್ಲೆಯಲ್ಲಿಯ ಖಾಸಗಿ ಶಾಲೆಗಳಿಗೆ ೬ನೇ ತರಗತಿಗೆ ಪ್ರವೇಶ ಕಲ್ಪಿಸಲು ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲು ಮೇ.೯ ರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಅರ್ಜಿಗಳನ್ನು ಸಲ್ಲಿಸಲು ಮೇ.೨೧ ಕೊನೆಯ ದಿನ ವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲೀಕ್ ಮಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
