ತಾಳಿಕೋಟಿ: ಸಂಸದ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಏ.26 ಶುಕ್ರವಾರ ರಂದು ವಿಜಯಪುರ ಪ್ರವಾಸ ಕೈಗೊಂಡು ಅಭ್ಯರ್ಥಿ ರಾಜು ಆಲಗೂರ ಪರ ಪ್ರಚಾರ ನಡೆಸಲಿದ್ದಾರೆ. ಈ ಸಮಾವೇಶದಲ್ಲಿ ಮುದ್ದೇಬಿಹಾಳ ಮತ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಶಾಸಕ ಹಾಗೂ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಅಂದು ಮುಂಜಾನೆ 11:00 ಗಂಟೆಗೆ ನಗರದ ಸೋಲಾಪೂರ ರಸ್ತೆಯಲ್ಲಿರುವ ಬಿ ಎಲ್ ಡಿಇ ನೂತನ ಕ್ಯಾಂಪಸ್ ನಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು ರಾಹುಲ್ ಗಾಂಧಿಯವರೊಂದಿಗೆ ಎ ಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ಹಾಗೂ ಸಚಿವರಾದ ಎಂ ಬಿ ಪಾಟೀಲ ಶಿವಾನಂದ ಪಾಟೀಲ ಜಿಲ್ಲೆಯ ಶಾಸಕರಾದ ಯಶವಂತರಾಯ ಗೌಡ ಪಾಟೀಲ ವಿಠ್ಠಲ ಕಟಕದೊಂಡ ಅಶೋಕ ಮನಗೂಳಿ ವಿಧಾನ ಪರಿಷತ್ ಸದಸ್ಯ ಸುನಿಲ್ ಗೌಡ ಪಾಟೀಲ ಪಕ್ಷದ ಮುಖಂಡರು ಉಪಸ್ಥಿತರಿರಲಿದ್ದಾರೆ. ಕಾರಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಈ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

