ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ರೇವತಗಾಂವ ಗ್ರಾಮದ ಶಿಕ್ಷಕ ಮುಕುಂದ ಅಡಕೆ ಅವರ ಸುಪುತ್ರ ಆನಂದ ಅಡಕೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಚಡಚಣದ ಸಂಗಮೇಶ್ವರ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶೇ.೯೮.೭ ಅಂಕಗಳನ್ನು ಪಡೆದು ತಾಲೂಕು ಹಾಗೂ ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿ ಉತ್ತೀಣನಾಗಿ ಗ್ರಾಮದ ಕೀರ್ತಿಯನ್ನು ಹಿಚ್ಚಿಸಿದ ಪ್ರಯುಕ್ತ ಗ್ರಾಮದ ಪಿಕೆಪಿಎಸ್ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಕೋಳಿ, ಅಮಸಿದ್ದ ಹಿರೇಕುರುಬರ, ನಿಂಗಪ್ಪ ಮೇತ್ರೆ, ಸಂತೋಷ ಕುಂಬಾರ, ಮಲ್ಲಿಕಾರ್ಜುನ ತಳ್ಳೆಯವರುಗಳು ವಿದ್ಯಾರ್ಥಿಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಈ ವೇಳೆಯಲ್ಲಿ ಮಾತನಾಡಿದ ಪಿಕೆಪಿಎಸ್ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಕೋಳಿಯವರು. ಸದಾ ಏಕಾಗ್ರತೆಯಿಂದ ಅಧ್ಯಯನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಉತ್ತಮ ಅಂಕಗಳನ್ನು ಗಳಿಸಲು ಸಾಧ್ಯವಾಗುತ್ತದೆ. ನಿರಂತರವಾದ ಅಭ್ಯಾಸದಿಂದ ಉತ್ತಮ ಸಾಧನೆ ಮಾಡಲು ಸಾಧ್ಯ. ಯಾವುದೇ ವಿಷಯವನ್ನು ಕಷ್ಟಪಟ್ಟು ಅಧ್ಯಯನ ಮಾಡದೇ ಇಷ್ಟಪಟ್ಟು ಅಧ್ಯಯನ ಮಾಡಬೇಕು ಎಂದು ಹೇಳಿದರು.
Subscribe to Updates
Get the latest creative news from FooBar about art, design and business.
Related Posts
Add A Comment

