Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಲ್ಲಯ್ಯ ಕಂಬಿಗಳ ಪುರಪ್ರವೇಶ :ಭಕ್ತರಿಂದ ಅದ್ಧೂರಿ ಸ್ವಾಗತ
(ರಾಜ್ಯ ) ಜಿಲ್ಲೆ

ಮಲ್ಲಯ್ಯ ಕಂಬಿಗಳ ಪುರಪ್ರವೇಶ :ಭಕ್ತರಿಂದ ಅದ್ಧೂರಿ ಸ್ವಾಗತ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಸುಕ್ಷೇತ್ರ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದ ಮಲ್ಲಯ್ಯನ ಕಂಬಿಗಳನ್ನು ಭಕ್ತರು ವಿವಿಧ ವಾಧ್ಯ ಮೇಳಗಳೊಂದಿಗೆ ಸಂಭ್ರಮ, ಸಡಗರದಿಂದ ಗುರುವಾರ ಬರಮಾಡಿಕೊಂಡರು.
ಕಳೆದ ತಿಂಗಳು ಹೋಳಿಹುಣ್ಣಿಮೆ ಮರುದಿನ ಇಲ್ಲಿಂದ ಪಾದಯಾತ್ರಾ ಭಕ್ತರೊಂದಿಗೆ ಕಂಬಿಗಳು ಪಾದಯಾತ್ರೆ ಮೂಲಕ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದವು. ದ್ವಾದಶ ಲಿಂಗಗಳಲ್ಲಿ ಒಂದಾದ ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರದಲ್ಲಿ ಪ್ರತಿ ವರ್ಷ ಯುಗಾದಿ ಹಬ್ಬದಂದು ನಡೆಯುವ ರಥೋತ್ಸವದಲ್ಲಿ ಈ ಭಾಗದ ಜನರು ಭಾಗವಹಿಸಿ ತಮ್ಮ ತಮ್ಮ ಗ್ರಾಮಗಳಿಗೆ ಆಗಮಿಸುತ್ತಾರೆ. ತದ ನಂತರ ಹುಣ್ಣಿಮೆಗೆ ಆಯಾ ಆಯಾ ಗ್ರಾಮಗಳಿಗೆ ಅಂದು ತೆರಳಿದ್ದ ಮಲ್ಲಯ್ಯನ ಕಂಬಿಗಳು ಆಗಮಿಸುವದು ಸಾಮಾನ್ಯ.
ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿರುವ ಕಂಬಿ ಕಟ್ಟೆಗೆ ನಿನ್ನೆ ರಾತ್ರಿ ಮಲ್ಲಯ್ಯನ ಕಂಬಿಗಳು ಬಂದಿದ್ದವು. ಇಂದು ಬೆಳಗ್ಗೆ ಇಲ್ಲಿನ ಭಕ್ತರು ಕುಂಬಾರರ ಮನೆಗೆ ತೆರಳಿ ಅಲ್ಲಿಂದ ಪೂಜಾ ಸಾಮಗ್ರಿಗಳೊಂದಿಗೆ ಬಸವೇಶ್ವರರ ವಂಶಸ್ಥರಾದ ಕುಲಕರ್ಣಿಯವರ ಮನೆಗೆ, ಗೌಡರ ಮನೆಗೆ ವಿವಿಧ ವಾಧ್ಯ ಮೇಳಗಳೊಂದಿಗೆ ತೆರಳಿ ಅವರನ್ನು ಕರೆದುಕೊಂಡು ಕಂಬಿ ಕಟ್ಟೆಗೆ ಆಗಮಿಸಿದರು. ನಂತರ ಕಂಬಿ ಕಟ್ಟೆಯಲ್ಲಿ ಮಲ್ಲಯ್ಯನ ಕಂಬಿಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮಂಗಳಾರತಿ ಸಲ್ಲಿಸಿ ವಾದ್ಯಮೇಳಗಳೊಂದಿಗೆ ಬಸವೇಶ್ವರ ದೇವಸ್ಥಾನಕ್ಕೆ ಭಕ್ತರು ಅವುಗಳನ್ನು ಬರಮಾಡಿಕೊಂಡರು. ಬಸವೇಶ್ವರ ದೇವಸ್ಥಾನದಲ್ಲಿ ಬಂದು ಕುಳಿತ ಮಲ್ಲಯ್ಯನ ಕಂಬಿಗಳಿಗೆ ಭಕ್ತರು ಬೆಲ್ಲವನ್ನು ಮಲ್ಲಯ್ಯನಿಗೆ ಅರ್ಪಿಸಿ ನೆರೆದ ಭಕ್ತ ಸಮೂಹಕ್ಕೆ ಹಂಚಿ ಧನ್ಯತಾ ಭಾವ ಅನುಭವಿಸಿದರು.
ವೇ.ಗುರುಸಂಗಯ್ಯ ಮಠಪತಿ, ಶ್ರೀಶೈಲ ಮಠಪತಿ ಅವರನ್ನು ಮಾತನಾಡಿಸಿದಾಗ, “ಪ್ರತಿ ವರ್ಷವೂ ಮಲ್ಲಯ್ಯನ ಕಂಬಿಗಳು ಶ್ರೀಶೈಲಕ್ಕೆ ತೆರಳುತ್ತವೆ. ಅಲ್ಲಿ ಮಲ್ಲಯ್ಯನ ಜಾತ್ರೆ ಮುಗಿಸಿಕೊಂಡು ಹದಿನೈದು ದಿನಗಳ ನಂತರ ಕಂಬಿಗಳು ಆಗಮಿಸಿದ ನಂತರ ಶ್ರೀಶೈಲ ಮಲ್ಲಿಕಾರ್ಜುನ ಭಕ್ತರು ತಮ್ಮ ತಮ್ಮ ಮನೆಗಳಲ್ಲಿ ಭೋರಮ್ಮ ಎಂದು ಪೂಜೆಯನ್ನು ಮಾಡುವ ಮೂಲಕ ಶ್ರೀಶೈಲ ಕ್ಷೇತ್ರದ ಹರಕೆಯನ್ನು ತೀರಿಸುವ ಪದ್ದತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಪ್ರತಿ ಗ್ರಾಮದಲ್ಲಿ ಮಲ್ಲಯ್ಯನ ಕಂಬಿಗಳು ಬಂದ ನಂತರವೇ ಈ ಪೂಜೆ ಎಲ್ಲರ ಮನೆಯಲ್ಲಿ ಅವರ ಅನುಕೂಲಕ್ಕೆ ತಕ್ಕಂತೆ ಎರಡು ತಿಂಗಳ ಕಾಲ ನಡೆಯುತ್ತದೆ. ಏ.೨೯ ರಂದು ಪಟ್ಟಣದಲ್ಲಿ ಐದೇಶಿ(ಬೋರಮ್ಮ) ಪೂಜೆಯನ್ನು ಭಕ್ತರು ಮಾಡುವರು” ಎಂದರು.
ಕಂಬಿ ಮೆರವಣಿಗೆಯಲ್ಲಿ ವೇ. ಗುರುಸಂಗಯ್ಯ ಮಠಪತಿ, ವೀರಗಂಗಾಧರಯ್ಯ ಕಾಳಹಸ್ತೇಶ್ವರಮಠ, ಮುದುಕಯ್ಯ ತೆಗ್ಗಿನಮಠ, ಮಲ್ಲಯ್ಯ ನರಸಲಗಿಮಠ, ಶ್ರೀಕಾಂತ ಮಠಪತಿ, ಬಸವರಾಜ ಹಾರಿವಾಳ,ಮಲ್ಲಪ್ಪ ಕುಂಬಾರ,ಶ್ರೀಶೈಲ ಮಠಪತಿ, ಮಲ್ಲಪ್ಪ ಕಡಕೋಳ, ಪ್ರವೀಣ ಪೂಜಾರಿ,ರಾಜು ಕಡಿ,ಸಂಗಪ್ಪ ಬೋಳಿ, ಜಗು ಪತ್ತಾರ, ಬ್ರಹ್ಮಾನಂದ ಕುಂಬಾರ, ಶಂಕರಗೌಡ ಪಾಟೀಲ, ಈರಪ್ಪ ಅಡಗಿಮನಿ, ಚನ್ನಪ್ಪ ಪತ್ತಾರ, ಜಗದೇವಿ ಕಡಕೋಳ, ಭಾರತಿ ಮುಳವಾಡ, ರೂಪಾ ಕುಂಬಾರ, ಸಾವಿತ್ರಿ ಸಾರಂಗಮಠ, ಪೂಜಾ ಕುಂಬಾರ, ಶಾಂತವ್ವ ಜಾಡರ, ರಾಜೇಶ್ವರಿ ಕುಂಬಾರ, ಸೌಮ್ಯ ಕುಂಬಾರ, ಮೀನಾಕ್ಷಿ ಕುಂಬಾರ, ರೇಖಾ ಕುಂಬಾರ, ಶ್ರೀದೇವಿ ತೆಗ್ಗಿನಮಠ, ಬೋರಮ್ಮ ಕುಂಬಾರ, ಸೇರಿದಂತೆ ಇತರರು ಭಾಗವಹಿಸಿದ್ದರು.
ಪ್ರಸಾದ ವ್ಯವಸ್ಥೆ: ಪಟ್ಟಣದ ಬಸವೇಶ್ವರ ದೇವಸ್ಥಾನದ ಜೀರ್ಣೋದ್ದಾರಕರ ದಿ. ಮಲ್ಲಪ್ಪ ಸಿಂಹಾಸನ ಪ್ರತಿಮೆ ಆವರಣದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆ ಸೇವಾ ಸಮಿತಿಯಿಂದ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪ್ರಸಾದ ವ್ಯವಸ್ಥೆ ವೀರಗಂಗಾಧರಯ್ಯ ಕಾಳಹಸ್ಸೇಶ್ವರಮಠ, ಬಸಯ್ಯ ವಿರಕ್ತಮಠ, ಶರಣು ನಾಲತವಾಡ, ರಮೇಶ ನಾಗೂರ, ಮುನ್ನಾ ಅಗರವಾಲ, ಗಿರೀಶ ಹಾರಿವಾಳ, ಬಾಬು ಕುಂಟೋಜಿ, ಶರಣು ಅಂಗಡಿ, ಬಸು ಹಿರೇಮಠ, ಬಾಬು ದುಂಬಾಳಿ,ಪಾವೆಡಪ್ಪ ಕೊಂಡಗುಳಿ, ಶರಣು ಮನಗೂಳಿ, ಕುಮಾರಗೌಡ ಪಾಟೀಲ, ಬಸವರಾಜ ಅಡಗಿಮನಿ, ಮೀರಾಸಾಬ ಕೊರಬು ಸೇರಿದಂತೆ ಇತರರ ಉಸ್ತುವಾರಿಯಲ್ಲಿ ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.