ಸಿಂದಗಿ: ಬೆಂಗಳೂರಿನ ಇಸ್ಕಾನ್ ಸಂಸ್ಥೆ ಅಡಿಯಲ್ಲಿ ನಡೆದ ಭಗವದ್ಗೀತೆ ಆಧರಿಸಿದ ಮೌಲ್ಯ ಶಿಕ್ಷಣ ಸ್ಪರ್ಧೆಯಲ್ಲಿ ಪಟ್ಟಣದ ಮಾತಾ ಲಕ್ಷ್ಮೀ ಪಬ್ಲಿಕ್ ಶಾಲೆಯ ೭ನೇ ತರಗತಿಯ ವಿದ್ಯಾರ್ಥಿ ಋತ್ವೀಕ ಬ್ಯಾಕೋಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾನೆ. ಮತ್ತು ಇಸ್ರೋ ಪ್ರವಾಸಕ್ಕೂ ಆಯ್ಕೆಯಾಗಿದ್ದಾನೆ.
ಈ ವೇಳೆ ಆಯ್.ಎಸ್.ಟಿ.ಆರ್.ಎ.ಸಿ ಇಸ್ರೋ ಸಹ ನೀರ್ದೇಶಕ ರಾಮಕೃಷ್ಣ ಅವರು ವಿದ್ಯಾರ್ಥಿಗೆ ಬೈಸಿಕಲ್ ಮತ್ತು ಪದಕವನ್ನು ನೀಡಿ ಗೌರವಿಸಿದರು.
ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಅಧ್ಯಕ್ಷ ಸಂಜೀವ ದೇಶಪಾಂಡೆ, ಪ್ರವೀಣ ಹಾಲಹಳ್ಳಿ, ನಿರ್ದೇಶಕ ಮಂಡಳಿ, ಪ್ರಾಚಾರ್ಯ ಪ್ರಸನ್ನ ಕುಲಕರ್ಣಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

