ಪುರಾಣ ಪ್ರಾರಂಭೋತ್ಸಕ್ಕೆ ಚಾಲನೆ ನೀಡಿದ ಡಾ.ವಿಶ್ವರಾಧ್ಶ ಶಿವಾಚಾಯ೯ ಅಭಿಮತ
ಬ್ರಹ್ಮದೇವನಮಡು: ಪ್ರತಿಯೊಬ್ಬರೂ ಧಾಮಿ೯ಕ ಕಾಯ೯ಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ನೆಮ್ಮದಿ ಕಂಡಕೊಳ್ಳಬೇಕು ಎಂದು ಮಾಗಣಗೇರಿಯ ಬೃಹನ್ಮಠದ ಶಿವಾಚಾಯ೯ ರತ್ನ ಪ್ರಶಸ್ತಿ ಪುರಸ್ತ್ರತ ಡಾ.ವಿಶ್ವರಾಧ್ಶ ಶಿವಾಚಾಯ೯ರು ಹೇಳಿದರು.
ಸಿಂದಗಿ ತಾಲೂಕಿನ ಸುಕ್ಷೇತ್ರ ಹೊನ್ನಳ್ಳಿ – ಬ್ರಹ್ಮದೇವನಮಡು ಗ್ರಾಮದ ಶ್ರೀ ಕಲ್ಶಾಣದೇಶ್ವರ ಜಾತ್ರೆ ಅಂಗವಾಗಿ ಗುರುವಾರ ರಾತ್ರಿ ಹಮ್ಮಿಕೊಂಡಿದ್ದ ಮಹಾ ಸಾದ್ವಿ ಶಿವಶರಣಿ ಹೇಮರಡ್ಡಿ ಮಲ್ಲಮ್ಮನವರ ಮಹಾ ಪುರಾಣ ಪ್ರಾರಂಭೋತ್ಸಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದ ಉದ್ದಾರಕ್ಕಾಗಿ ಶ್ರಮಿಸಿದ ಮಹಾ ಪುರಷರ ಜೀವನ ಚರಿತ್ರೆ ತಿಳಿಯಲು ಎಲ್ಲರೂ ಮುಂದಾಗಬೇಕು. ಬದುಕಿನಲ್ಲಿ ದಾನ ಧಮ೯ ಮಾಡುವ ಮನೋಭಾವ ಬೆಳಸಿಕೊಳ್ಳಬೇಕು ಎಂದರು.
ಖಾನಾಪೂರದ ಮೌನಯೋಗಿ ಕಲ್ಶಾಣದಯ್ಶ ಸ್ವಾಮೀಜಿ, ಕುರಳಗೇರಾದ ಸಜ್ಜಾದೆ ನಶಿನ್ ದಗಾ೯ದ ಹಜರತ್ ಸಯ್ಶದ್ ಹುಸೇನ್ ಬಾಷಾ ದಿವ್ಶ ಸಾನ್ನಿಧ್ಶ ವಹಿಸಿದ್ದರು.ಶ್ರೀಮಠದ ಒಡೆಯ ಕಲ್ಶಾಣದಯ್ಶ ವೀರಘಂಟಯ್ಶ ಸ್ವಾಮೀಜಿ,ಚನ್ನಮಲ್ಲಯ್ಶ ಹಿರೇಮಠ, ಕಾಂಗ್ರೆಸ್ ಮುಖಂಡ ಮಲ್ಲಣ್ಣ ಸಾಲಿ ಪುರಾಣ ಕಾಯ೯ಕ್ರಮಕ್ಕೆ ಚಾಲನೆ ನೀಡಿದರು. ಮಾಜಿ ಎಪಿಎಂಸಿ ಅಧ್ಶಕ್ಷ ಹಳ್ಳೆಪ್ಪಗೌಡ ಚೌಧರಿ,ಹೊನ್ನಳ್ಳಿ ಗ್ರಾಪಂ ಅಧ್ಶಕ್ಷ ಸಂಗನಗೌಡ ಬಿರಾದಾರ ಅಧ್ಶಕ್ಷತೆ ವಹಿಸಿದ್ದರು. ಮುಖಂಡ ಯಂಕನಗೌಡ ಪಾಟೀಲ,ರಾಮರಾವ ದೇಶಮುಖ,ಬಾಪುಗೌಡ ದೇಶಮುಖ, ಮುರಗೆಪ್ಪಗೌಡ ರದ್ದೇವಾಡಗಿ, ಕಾಂಗ್ರೆಸ್ ಮುಖಂಡ ಬಸವರಾಜ ಮಾರಲಭಾವಿ, ಸಾಹೇಪಟೇಲ ಮುರಡಿ ಇದ್ದರು. ಪ್ರವಚನಕಾರ ಯಡ್ರಾಮಿ ವಿರಕ್ತ ಮಠದ ಸಿದ್ದಲಿಂಗ ಶಿವಯೋಗಿಗಳು ಪ್ರವಚನ ನೀಡಿದರು. ಕಟ್ಟಿಸಂಗಾವಿಯ ವೀರಭದ್ರಯ್ಶ ಹಿರೇಮಠ ಗವಾಯಿಗಳು ಸಂಗೀತ ಸೇವೆಯೊಂದಿಗೆ ರಮೇಶಕುಮಾರ ಕಟ್ಟಿಸಂಗಾವಿ ತಬಲಾ ಸಾಥ್ ನೀಡಿದರು.

