Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೋಲಿನ ಹತಾಶೆಯಿಂದ ಮೋದಿ ಭಾವನಾತ್ಮಕ ವಿಚಾರ ಪ್ರಸ್ತಾಪ :ಸಿಎಂ
(ರಾಜ್ಯ ) ಜಿಲ್ಲೆ

ಸೋಲಿನ ಹತಾಶೆಯಿಂದ ಮೋದಿ ಭಾವನಾತ್ಮಕ ವಿಚಾರ ಪ್ರಸ್ತಾಪ :ಸಿಎಂ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸುಳ್ಳು ಹೇಳುವಲ್ಲಿ ಮೋದಿಜಿ ಪ್ರವೀಣರು, ಹೆಚ್ಚು ಸುಳ್ಳು ಹೇಳಿದ ಪ್ರಧಾನಿ ಯಾರಾದರೂ ಇದ್ದರೆ ಅದು ಮಿಸ್ಟರ್ ನರೇಂದ್ರ ಮೋದಿ. ಸೋಲಿನ ಹತಾಶೆಯಿಂದ ಭಾವನಾತ್ಮಕ ವಿಚಾರ ಪ್ರಸ್ತಾಪಿಸುತ್ತಿದ್ದಾರೆ, ಹೊಸದಾಗಿ ಮುಸ್ಲಿಂರಿಗೆ ನಾವು ಮೀಸಲಾತಿ ನೀಡುತ್ತಿಲ್ಲ, ಈ ವಿಷಯವಾಗಿ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಾವನೂರ ಆಯೋಗ, ಚಿನ್ನಪ್ಪ ರೆಡ್ಡಿ ಆಯೋಗ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಡಲು ಶಿಫಾರಸ್ಸು ಮಾಡಿದೆ, ಹೊಸದಾಗಿ ಯಾವ ರೀತಿಯ ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರ ನೀಡಿಲ್ಲ ಎಂದರು.
ಈ ಚುನಾವಣೆಯಲ್ಲಿ ಸೋಲುವುದು ಶತಸಿದ್ಧ ಎಂದು ಬಿಜೆಪಿ ನಾಯಕರಿಗೂ ಗೊತ್ತಾಗಿದೆ, ಸೋಲಿನ ಭೀತಿಯಿಂದಾಗಿ ೪೦೦ ಸೀಟು ಜಪ ಮಾಡುತ್ತಿದೆ, ಭಾರತೀಯ ಸಂವಿಧಾನ ಬದಲಾವಣೆ ಮಾಡುವಗೋಸ್ಕರವೇ ಈ ಬಿಜೆಪಿ ಈ ಜಪ ಮಾಡುತ್ತಿದೆ, ಭಾರತೀಯ ಸಂವಿಧಾನಕ್ಕೆ ವಿರುದ್ಧವಾಗಿ ಹಾಗೂ ಸಾಮಾಜಿಕ ನ್ಯಾಯದ ವಿರುದ್ಧವಾಗಿ ಇರುವವರು ಬಿಜೆಪಿ. ಅವರು ಯಾವತ್ತೂ ಸಂವಿಧಾನದ ಪರವಾಗಿ ಇಲ್ಲ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಸಾಧನೆ ಉಲ್ಲೇಖಿಸಿ ಮತ ಕೇಳುತ್ತಿಲ್ಲ, ಕೇವಲ ಭಾವನಾತ್ಮಕ ವಿಚಾರ ಪ್ರಸ್ತಾಪಿಸಿ, ಭಾವನೆ ಕೆರಳಿಸಿ, ಧರ್ಮ_ಧರ್ಮ ಹಾಗೂ ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ, ಹೆಚ್ಚು ಸ್ಥಾನ ಬರುವುದಿಲ್ಲ ಎಂದು ಗೊತ್ತಾಗಿ ನರೇಂದ್ರ ಮೋದಿ ಅವರು ಹತಾಶರಾಗಿ ಸಂಬಂಧಪಡದ ಅನೇಕ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ ಎಂದರು.
ಬೇರೆ ಧರ್ಮದವರ ಮೀಸಲಾತಿ ಕಸಿದುಕೊಂಡು ಮುಸ್ಲಿಂರಿಗೆ ಮೀಸಲಾತಿ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆ ಖಂಡನಾರ್ಹ, ಇದು ಪ್ರಧಾನಿ ಸ್ಥಾನಕ್ಕೆ ಚ್ಯುತಿ ತರುವ ಹೇಳಕೆಯಾಗಿದೆ ಎಂದು ಸಿದ್ಧರಾಮಯ್ಯ ಗರಂ ಆದರು.
ಪ್ರತಿಯೊಬ್ಬರ ಅಕೌಂಟ್‌ಗೆ ೧೫ ಲಕ್ಷ ರೂ. ಹಾಕುವುದಾಗಿ ಹೇಳಿದ್ದ ನರೇಂದ್ರ ಮೋದಿ ಅವರು ೧೫ ಪೈಸೆ ಸಹ ಹಾಕಲಿಲ್ಲ, ರೈತರ ಆದಾಯ ದ್ವಿಗುಣಗೊಳಿಸುವ ವಾಗ್ದಾನ ನೀಡಿದರು, ಆದರೆ ರೈತರ ಖರ್ಚು ಹೆಚ್ಚಾಗಿದೆ ಹೊರತು ಅವರ ಆದಾಯ ಏರಿಕೆಯಾಗಿಲ್ಲ ಇದು ಮೋದಿ ಅವರ ಎರಡನೇಯ ಸುಳ್ಳು, ಅಚ್ಛೆ ದಿನ ಆಯೇಂಗೆ ಎಂದು ಬೆಲೆ ಏರಿಕೆ ಕಡಿವಾಣ ಹಾಕುವ ಭರವಸೆ ನೀಡಿದರು. ಆದರೆ ಯಾವ ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಲಿಲ್ಲ, ಇದು ಮೋದಿ ಅವರು ಹೇಳಿದ ಮೂರನೇಯ ಸುಳ್ಳು, ಡಾ.ಸ್ವಾಮಿನಾಥನ್ ಆಯೋಗದ ವರದಿ ಸಹ ಜಾರಿ ಮಾಡಲಿಲ್ಲ, ಇದು ಮೋದಿ ಅವರ ಮತ್ತೊಂದು ಸುಳ್ಳು ಎಂದರು.
ರೈತರ ಸಾಲಮನ್ನಾ ಮಾಡಿ ಎಂದರೆ ದುಡ್ಡಿಲ್ಲ ಎಂದು ಹೇಳುವ ಬಿಜೆಪಿ, ಕೈಗಾರಿಕೋದ್ಯಮಿಗಳ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದರು. ಈ ಹಿಂದೆ ನಮ್ಮ ಪಕ್ಷದ ಸದಸ್ಯ ಉಗ್ರಪ್ಪ ಅವರು ಸಾಲಮನ್ನಾ ವಿಷಯವಾಗಿ ಪ್ರಶ್ನೆ ಮಾಡಿದಾಗ ರೈತರ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಬಳಿ ನೋಟ್ ಪ್ರಿಂಟ್ ಮಾಡುವ ಮಷೀನ್ ಇಲ್ಲ ಎಂದು ಉಡಾಫೆಯ ಮಾತುಗಳನ್ನು ಬಿಜೆಪಿಯ ಯಡಿಯೂರಪ್ಪ ಅವರು ಆಡಿದ್ದರು ಎಂದು ಸಿದ್ಧರಾಮಯ್ಯ ಮತ್ತೊಮ್ಮೆ ಉಲ್ಲೇಖಿಸಿದರು.
ಈ ಭಾಗದಿಂದ ಆಯ್ಕೆಯಾದ ಸಂಸದರು ಒಂದೇ ಒಂದು ಬಾರಿಯೂ ರಾಜ್ಯದ ಹಿತಾಸಕ್ತಿ ಪರವಾಗಿ ಮಾತನಾಡಲಿಲ್ಲ, ಏಕೆಂದರೆ ಅವರಿಗೆ ಮೋದಿ ಅವರನ್ನು ಕಂಡರೆ ನಡುಕವಿದೆ, ರಾಜ್ಯದ ಹಿತಾಸಕ್ತಿ ಕಾಪಾಡದೇ ಇರುವುವರು ಲೋಕಸಭೆಗೆ ಹೋದರೆ ಏನೂ ಪ್ರಯೋಜನ, ಕರ್ನಾಟಕಕೆ ಆಗಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವವರು ಲೋಕಸಭೆಗೆ ಹೋಗಬೇಕು ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.