ಮುದ್ದೇಬಿಹಾಳ: ತಾಲ್ಲೂಕಿನ ವನಕಿಹಾಳ ಗ್ರಾಮದಲ್ಲಿ ಶುಕ್ರವಾರ ಜರುಗಿದ ಮಹೇಂದ್ರಕರ ಮದುವೆ ಸಮಾರಂಭದಲ್ಲಿ ಗ್ರಾಮ ಪಂಚಾಯತಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಮೂಡಿಸಲಾಯಿತು.
ವನಕಿಹಾಳ ಗ್ರಾಮದ ಹಿರೇಮುರಾಳ ಗ್ರಾಮ ಪಂಚಾಯತಿ ಸಿಬ್ಬಂದಿ ಹಣಮಂತ್ರಾಯ ಹಾಗೂ ರೇಣುಕಾ ಇವರ ಮದುವೆ ಕಾರ್ಯಕ್ರಮದಲ್ಲಿ ತಾಲೂಕು ಸ್ವೀಪ್ ಸಮಿತಿ ಸದಸ್ಯರು ಮತದಾರರ ಜಾಗೃತಿ ಕರಪತ್ರಗಳನ್ನು ನೀಡಿ ವಿಶಿಷ್ಟವಾಗಿ ಚಟುವಟಿಕೆ ಹಮ್ಮಿಕೊಂಡು ಮದುವೆಗೆ ನೆರೆದಿದ್ದ ಜನರಿಗೆ ನವ ವಧು-ವರರಿಗೆ ಮತದಾನದ ಜವಾಬ್ದಾರಿಗಳ ಕುರಿತು ತಿಳಿಸಿದರು.
ಮದುವೆ ಸಮಾರಂಭದಲ್ಲಿ ೪೦೦ಕ್ಕೂ ಅಧಿಕ ಜನರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಕೆ.ಎಚ್.ಕುಂಬಾರ ಅವರು “ಮತದಾನ ಪ್ರತಿಜ್ಞೆ ವಿಧಿ” ಬೋಧಿಸಿದರು. ತಾಲೂಕು ಪಂಚಾಯತಿ ನರೇಗಾ ಐಇಸಿ ಸಂಯೋಜಕ ಪರಮೇಶ ಹೊಸಮನಿ, ಗ್ರಾಮ ಪಂಚಾಯತಿ ಎಸ್ಡಿಎ ಎನ್.ಜಿ.ಬಿರಾದಾರ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

