ವಿಜಯಪುರ: ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಹೇಳಿದರು.
ಸೋಮವಾರ ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಭಾವುಕರಾಗಿ ಮಾತನಾಡಿ, ಅವರೊಂದಿಗಿದ್ದ ತಮ್ಮ ಸಂಬಂಧವನ್ನು ಮೆಲುಕು ಹಾಕಿದರು.
ಹಿಂದುಳಿದ ವರ್ಗದ ಹಿತ ಕಾಪಾಡಿದವರು ಶ್ರೀನಿವಾಸ್ ಪ್ರಸಾದ. ನಮಗೆ ಅವರು ದನಿಯಾಗಿದ್ದವರು. ಅವರೊಂದಿಗೆ ನನಗೆ ಉತ್ತಮ ಸಂಬಂಧವಿತ್ತು. ಅವರೊಬ್ಬ ಶ್ರೇಷ್ಠ ಸಂಸದೀಯ ಪಟುವಾಗಿದ್ದರು. ಮೊದಲ ಸಲ ನಾನು ಬಳ್ಳೊಳ್ಳಿ ಕ್ಷೇತ್ರದಲ್ಲಿ ನಿಂತಾಗ ನನ್ನ ಜತೆ ಶಕ್ತಿಯಾಗಿದ್ದರು. ಬಡವರು, ಅಲ್ಪಸಂಖ್ಯಾತರ ಪರ ಅವರ ಕಳಕಳಿ ಅಪಾರವಾಗಿತ್ತು. ಅಂತಹ ನಾಯಕ ಈಗ ಯಾರೂ ಇಲ್ಲ. ಹಿಂದೆ ನಮ್ಮೂರಿಗೆ ಕರೆಸಿ ಅವರಿಂದ ಭಾಷಣ ಮಾಡಿಸಿದ್ದೆ. ಚಳವಳಿಯ ದಿನಗಳಿಂದ ಜಿಲ್ಲೆಯಲ್ಲಿ ನಾನವರಿಗೆ ಒಡನಾಡಿಯಾಗಿದ್ದೆ. ಆರು ಸಲ ಸಂಸದರಾಗಿ, ಶಾಸಕರಾಗಿ ಅವರು ಜೀವಪರವಾಗಿ ಮಿಡಿದಿದ್ದಾರೆ ಎಂದು ಆಲಗೂರ ಅವರು ಹೇಳಿದರು.
Subscribe to Updates
Get the latest creative news from FooBar about art, design and business.
Related Posts
Add A Comment

