Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಲಿತರು ಶಿಕ್ಷಣವಂತರಾಗಿ, ಸಮಗ್ರ ಅಭಿವೃದ್ಧಿಯಾಗಬೇಕು :ಹೆಬ್ಬಾಳ.
(ರಾಜ್ಯ ) ಜಿಲ್ಲೆ

ದಲಿತರು ಶಿಕ್ಷಣವಂತರಾಗಿ, ಸಮಗ್ರ ಅಭಿವೃದ್ಧಿಯಾಗಬೇಕು :ಹೆಬ್ಬಾಳ.

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಡಾ.ಅಂಬೇಡ್ಕರ ಅವರು ಹಲವು ಇಲ್ಲಗಳ ಕಾಲಘಟ್ಟದಲ್ಲಿ, ಅನೇಕ ಸಾಮಾಜಿಕ ಬಹಿಷ್ಕಾರದಂತಹ ಪರಿಸ್ಥಿತಿಗಳಲ್ಲಿ ಡಾ ಅಂಬೇಡ್ಕರ ಬೆಳೆಯಲು ಶಿಕ್ಷಣವೇ ಮುಖ್ಯ ಕಾರಣ. ಈಗ ಶಿಕ್ಷಣ ಪಡೆಯಲು ಸಾಕಷ್ಟು ಅವಕಾಶಗಳಿವೆ, ಹೀಗಾಗಿ ದಲಿತರು ಶಿಕ್ಷಣವಂತರಾಗಿ, ಸಮಗ್ರ ಅಭಿವೃದ್ಧಿಯಾಗಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ಸೈನ್ಯದ ರಾಜ್ಯ ಸಂಘಟನಾ ಸಂಚಾಲಕ ಹಾಗೂ ವಿಜಯಪುರ ಜಿಲ್ಲಾ ಘಟಕದ ಸಂಚಾಲಕ ಮರೆಪ್ಪ ಹೆಬ್ಬಾಳ ಅಭಿಪ್ರಾಯಪಟ್ಟರು.
ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಭಾನುವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ಸೈನ್ಯದ ವತಿಯಿಂದ ಡಾ ಅಂಬೇಡ್ಕರ ಅವರ ೧೩೩ ನೇ ಜಯಂತಿ ಅಂಗವಾಗಿ ನಡೆದ, ಪ್ರಜಾಪ್ರಭುತ್ವ ರಕ್ಷಣೆಗಾಗಿ ತಾಲ್ಲೂಕು ಮಟ್ಟದ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಉಮೇಶ ಅಲಕಪುರ ಮಾತನಾಡಿ, ದಲಿತರು ಮೂಡನಂಬಿಕೆಗೆ ಹಾಗೂ ಆಮಿಷಕ್ಕೆ ಒಳಪಟ್ಟು ದೇವರುಗಳ ಹೆಸರಲ್ಲಿ ಕುರಿ, ಕೋಳಿ, ಕೋಣ ಬಲಿ ಕೊಡುವುದು, ದೇವದಾಸಿಯಂತಹ ಅನಿಷ್ಠ ಪದ್ಧತಿಯನ್ನು ತೊಡೆದು ಹಾಕಿ ದಲಿತರು ಮುಂದೆಬರಬೇಕು ಎಂದರು. 
ತತ್ವಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಡಾ ವೀರೇಶ್ವರ ಕುಂಬಾರ ಮಾತನಾಡಿ, ಡಾ ಅಂಬೇಡ್ಕರ್, ಶೋಷಿತ, ದಮನಿತರ, ಕಾರ್ಮಿಕರ, ಮಹಿಳೆ, ರೈತರ ಹಿತವನ್ನು ಕಾಪಾಡುವ ಕೆಲಸ ಮಾಡಿದ್ದಾರೆ, ಅವರ ಅಪಾರ ಶ್ರಮ, ಸಂವಿಧಾನ ರಚನೆಯಲ್ಲಿನ ಬದ್ಧತೆಯಿಂದಾಗಿ ಇಂದು ನಾವು ಚೆನ್ನಾಗಿದ್ದೇವೆ ಎಂದರು.
ಸಂಘಟನೆಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ನ್ಯಾಯವಾದಿ ಪ್ರಕಾಶ ದೊಡಮನಿ, ರಾಜ್ಯ ಸಂಘಟನಾ ಸಂಚಾಲಕ ಮಲ್ಲು ಬಿಜ್ಜೂರ, ಜ್ಯೋತಿ ಹಣಮಂತ ಹೆಬ್ಬಾಳ ಮಾತನಾಡಿ, ದಲಿತರು ಪ್ರಜ್ಞಾವಂತ ಮನೋಭಾವದವರಾಗಿರಬೇಕು ಎಂದರು.
ಬಾಗಲಕೋಟೆ ಜಿಲ್ಲಾ ಘಟಕದ ಸಂಚಾಲಕ ಹಣಮಂತ ಹಿರೇಮಳಗಾವಿ, ನಿಡಗುಂದಿ ತಾಲ್ಲೂಕು ಘಟಕದ ಸಂಚಾಲಕ ಹಣಮಂತ ಮುದ್ದಾಪುರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುನಿತಾ ಹೆಬ್ಬಾಳ, ರಸೂಲಬಿ ನದಾಫ್, ಮಲ್ಲಪ್ಪ ಹೆಬ್ಬಾಳ, ಯಲ್ಲವ್ವ ಮಾದರ, ಹಣಮವ್ವ ಗಂಟಿ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.