ತಾಳಿಕೋಟಿ: ಕರ್ನಾಟಕ ಸರಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಮೇ1ರಂದು ತಾಳಿಕೋಟಿ ಪಟ್ಟಣಕ್ಕೆ ಆಗಮಿಸಲಿದ್ದಾರೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೆಬೂಬ ಚೋರಗಸ್ತಿ ಅವರು ತಿಳಿಸಿದ್ದಾರೆ. ಮಧ್ಯಾಹ್ನ 12:00 ಘಂಟೆಗೆ ಪಟ್ಟಣದ ಶ್ರೀ ಸಂಗಮೇಶ್ವರ ನೂತನ ಸಭಾ ಭವನದಲ್ಲಿ ಹಮ್ಮಿಕೊಂಡ ತಾಳಿಕೋಟಿ ತಾಲೂಕಿನ ವೀರಶೈವ ಲಿಂಗಾಯತ ಸಮಾಜ ಬಾಂಧವರ ಸಭೆಯಲ್ಲಿ ಭಾಗವಹಿಸುವ ಅವರು ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಇವರ ಪರ ಮತಯಾಚನೆ ಮಾಡಲಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಹಾಗೂ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ .ಎಸ್. ನಾಡಗೌಡ (ಅಪ್ಪಾಜಿ) ಸಭೆಯ ಅಧ್ಯಕ್ಷತೆಯನ್ನು ವಹಿಸುವರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

