Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಂಡನ ಹಣ ಕಿತ್ತು ಹೆಂಡತಿಗೆನೀಡುವ ಕಾಂಗ್ರೆಸ್ ಗೆ ಬುದ್ಧಿ ಕಲಿಸಿ
(ರಾಜ್ಯ ) ಜಿಲ್ಲೆ

ಗಂಡನ ಹಣ ಕಿತ್ತು ಹೆಂಡತಿಗೆನೀಡುವ ಕಾಂಗ್ರೆಸ್ ಗೆ ಬುದ್ಧಿ ಕಲಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿಯಲ್ಲಿ ಬಹಿರಂಗ ಪ್ರಚಾರ | ಮಾಜಿ ಶಾಸಕ ಭೂಸನೂರ ಕಿಡಿ

ಮೋರಟಗಿ: ಒಂದು ಕುಟುಂಬಕ್ಕೆ ಜಯಕಾರ ಹಾಕುವ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಬುದ್ಧಿ ಕಲಿಸಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕು ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.
ಲೋಕಸಭೆ ಚುನಾವಣೆಯ ವಿಜಯಪುರ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರ ಮಂಗಳವಾರ ಮತ ಯಾಚಿಸಿ ಅವರು ಮಾತನಾಡಿದರು.
ನಮ್ಮ ಪಕ್ಷ ಯಾವತ್ತೂ ಭಾರತ ಮಾತಾ ಕೀ ಜೈ ಎನ್ನುವ ಮೂಲಕ ದೇಶ ಪ್ರೇಮ ಮೆರೆಯುತ್ತದೆ. ಜನರಲ್ಲಿ ಸೌಹಾರ್ದ ಮೂಡಿಸುತ್ತದೆ. ಆದರೆ ಕಾಂಗ್ರೆಸ್ ನವರು ಕೇವಲ ಸೋನಿಯಾ ಗಾಂಧಿ ಕೀ ಜೈ, ರಾಹುಲ್ ಗಾಂಧಿ ಕೀ ಜೈ ಎನ್ನುವ ಮೂಲಕ ಒಂದು ಕುಟುಂಬವನ್ನು ಓಲೈಸುವ ಕಾರ್ಯ ಮಾಡುತ್ತಾರೆ. ಇಂಥವರಿಂದ ದೇಶದ ಅಭಿವೃದ್ಧಿ ಸಾಧ್ಯವೇ ಎಂದು ಪ್ರಶ್ನಿಸಿದರು.
ಬಡವರಿಗೆ ಪ್ರಧಾನಿ ನರೇಂದ್ರ ಮೋದಿ ಏನು ಮಾಡಿದ್ದಾರೆ ಎಂದು ಕೆಲವರು ಕೇಳುತ್ತಾರೆ. ಸಂಕಷ್ಟ ಸಮಯದಲ್ಲಿ ಎಲ್ಲರಿಗೂ ವ್ಯಾಕ್ಸಿನ್ ನೀಡುವ ಮೂಲಕ ಪ್ರಾಣ ಉಳಿಸಿದ ಪುಣ್ಯಾತ್ಮ ಮೋದಿ ಎಂಬುದನ್ನು ಯಾರೂ ಮರೆಯಬಾರದು.
ಅಡುಗೆ ಅನಿಲ, ಆರೋಗ್ಯಕ್ಕೆ ಅಭಯ, ಶೌಚಗೃಹ ನಿರ್ಮಾಣಕ್ಕೆ ಸಹಾಯಧನ, ಆಯುಷ್ಮಾನ್ ಭಾರತ, ಜನೌಷಧಿ ಕೇಂದ್ರ, ಮನೆ ಮನೆಗೆ ನಲ್ಲಿ ಸಂಪರ್ಕ, ರೈತರಿಗೆ ಕಿಸಾನ್ ಸಮ್ಮಾನ, ಬಡವರಿಗೆ ಅಕ್ಕಿ ಹೀಗೆ ಅನೇಕ ಯೋಜನೆಗಳನ್ನು ಪ್ರಧಾನಿ ಮೋದಿ ಬಡವರಿಗಾಗಿ ಜಾರಿಗೊಳಿಸಿದ್ದಾರೆ. ನಮ್ಮ ಮಕ್ಕಳ ಉನ್ನತ ಶಿಕ್ಷಣಕ್ಕೆ ಮೋದಿ ಕ್ರಮ ಕೈಗೊಂಡಿದ್ದಾರೆ. ನಡೆದಾಡುವ ದೇವರೆಂದೇ ಖ್ಯಾತರಾದ ಸಿದ್ಧೇಶ್ವರ ಶ್ರೀಗಳು ಕೂಡ ಪ್ರಧಾನಿ ಮೋದಿ ಅವರನ್ನು ಕೊಂಡಾಡಿದ್ದಾರೆ. ಕೇವಲ ದೇಶವಲ್ಲ, ಇಂದು ಜಗತ್ತೇ ಅವರ ಮಾತು ಕೇಳುವಂತಾಗಿದೆ. ಗಂಡನಿಂದ ಹಣ ಕಿತ್ತುಕೊಂಡು ಹೆಂಡತಿಗೆ ಕೊಡುವ, ಬಹಿರಂಗವಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದೂ ಘೋಷಣೆ ಕೂಗಿದರೂ ಕ್ರಮ ಕೈಗೊಳ್ಳದ ಕಾಂಗ್ರೆಸ್ ನಿಂದ ದೇಶ ಭದ್ರವಾಗಿರಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನವರು ದೇಶವನ್ನೇ ಕೊಳ್ಳೆ ಹೊಡೆಯುತ್ತಾರೆ. ರೈತರಿಗೆ ರಾಜ್ಯ ಸರಕಾರ ನೀಡುತ್ತಿದ್ದ ೪ ಸಾವಿರ ರೂ.ಸಹಾಯ ಧನವನ್ನು ಕಾಂಗ್ರೆಸ್ ಸರಕಾರ ಬಂದ್ ಮಾಡಿದೆ. ಸಂವಿಧಾನ ಬರೆದ ಡಾ.ಅಂಬೇಡ್ಕರ್ ಅವರಿಗೆ ಗೌರವ ನೀಡದ ಕಾಂಗ್ರೆಸ್ ಸರಕಾರ ದಲಿತರನ್ನೂ ಕಡೆಗಣಿಸಿದೆ. ಈ ಎಲ್ಲ ಸಂಗತಿಗಳನ್ನು ಪರಿಗಣಿಸಿ ನಾವೆಲ್ಲ ಏಕತೆಯಿಂದ ಬಿಜೆಪಿ ಬೆಂಬಲಿಸೋಣ ಎಂದರು.
ರೈತರ ಹೊಲಗಳು ಹಾಗೂ ಗ್ರಾಮೀಣ ಭಾಗಕ್ಕೆ ರಸ್ತೆಗಳನ್ನು, ಹೊಲಗಳಿಗೆ ಉಚಿತ ವಿದ್ಯುತ್, ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಸಂಕಲ್ಪ ನಮ್ಮದಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ನೀವು ಅಭಿವೃದ್ಧಿ ಸದ್ದು ಕೇಳಲು ಸಾಧ್ಯ ಎಂದರು.
ಡಿ.ಕೆ.ಸುರೇಶ ಕೇವಲ ೨ ಬಾರಿ ಸಂಸದರಾಗಿ ತಮ್ಮ ಆಸ್ತಿ ೨೪೬೫ ಕೋಟಿ ಎಂದು ಘೋಷಿಸಿಕೊಂಡಿದ್ದಾರೆ. ಆದರೆ ಮೋದಿಯವರು ಮೂರು ಬಾರಿ ಮುಖ್ಯಮಂತ್ರಿಯಾಗಿ, ಎರಡು ಬಾರಿ ಪ್ರಧಾನಿಯಾಗಿ ಕೇವಲ ೨ ಕೋಟಿ ಆಸ್ತಿ ಹೊಂದಿದ್ದಾರೆ. ಇದರಿಂದಲೇ ನಮ್ಮ ಮೋದಿ ಅವರ ವ್ಯಕ್ತಿತ್ವ ಅರ್ಥವಾಗುತ್ತದೆ. ಪ್ರತಿಯೊಬ್ಬರೂ ದೇಶದ ಅಭಿವೃದ್ಧಿಗಾಗಿ ರಮೇಶ ಜಿಗಜಿಣಗಿ ಅವರನ್ನು ಬೆಂಬಲಿಸುವ ಮೂಲಕ ಮೋದಿ ಅವರ ಕೈಬಲಪಡಿಸಬೇಕು. ಬಲಿಷ್ಠ ಭಾರತ ನಿರ್ಮಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಮೋರಟಗಿ ವ್ಯಾಪ್ತಿಯ ಬಗಲೂರ, ಶಿರಸಗಿ, ಹಾವಳಗಿ, ಯರಗಲ್ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ಬಹಿರಂಗ ಸಭೆಯಲ್ಲಿ ಮಲ್ಲಿಕಾರ್ಜುನ ಜೋಗೂರ, ಗುರು ತಳವಾರ, ಸಿದ್ದು ಅನಗೊಂಡ, ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಶ್ರೀಶೈಲಗೌಡ ಬಿರಾದಾರ, ಸಿದ್ದನಗೌಡ ಗುತ್ತರಗಿ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.