Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಂಡನ ಹಣ ಕಿತ್ತು ಹೆಂಡತಿಗೆನೀಡುವ ಕಾಂಗ್ರೆಸ್ ಗೆ ಬುದ್ಧಿ ಕಲಿಸಿ
(ರಾಜ್ಯ ) ಜಿಲ್ಲೆ

ಗಂಡನ ಹಣ ಕಿತ್ತು ಹೆಂಡತಿಗೆನೀಡುವ ಕಾಂಗ್ರೆಸ್ ಗೆ ಬುದ್ಧಿ ಕಲಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿಯಲ್ಲಿ ಬಹಿರಂಗ ಪ್ರಚಾರ | ಮಾಜಿ ಶಾಸಕ ಭೂಸನೂರ ಕಿಡಿ

ಮೋರಟಗಿ: ಒಂದು ಕುಟುಂಬಕ್ಕೆ ಜಯಕಾರ ಹಾಕುವ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಬುದ್ಧಿ ಕಲಿಸಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕು ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.
ಲೋಕಸಭೆ ಚುನಾವಣೆಯ ವಿಜಯಪುರ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರ ಮಂಗಳವಾರ ಮತ ಯಾಚಿಸಿ ಅವರು ಮಾತನಾಡಿದರು.
ನಮ್ಮ ಪಕ್ಷ ಯಾವತ್ತೂ ಭಾರತ ಮಾತಾ ಕೀ ಜೈ ಎನ್ನುವ ಮೂಲಕ ದೇಶ ಪ್ರೇಮ ಮೆರೆಯುತ್ತದೆ. ಜನರಲ್ಲಿ ಸೌಹಾರ್ದ ಮೂಡಿಸುತ್ತದೆ. ಆದರೆ ಕಾಂಗ್ರೆಸ್ ನವರು ಕೇವಲ ಸೋನಿಯಾ ಗಾಂಧಿ ಕೀ ಜೈ, ರಾಹುಲ್ ಗಾಂಧಿ ಕೀ ಜೈ ಎನ್ನುವ ಮೂಲಕ ಒಂದು ಕುಟುಂಬವನ್ನು ಓಲೈಸುವ ಕಾರ್ಯ ಮಾಡುತ್ತಾರೆ. ಇಂಥವರಿಂದ ದೇಶದ ಅಭಿವೃದ್ಧಿ ಸಾಧ್ಯವೇ ಎಂದು ಪ್ರಶ್ನಿಸಿದರು.
ಬಡವರಿಗೆ ಪ್ರಧಾನಿ ನರೇಂದ್ರ ಮೋದಿ ಏನು ಮಾಡಿದ್ದಾರೆ ಎಂದು ಕೆಲವರು ಕೇಳುತ್ತಾರೆ. ಸಂಕಷ್ಟ ಸಮಯದಲ್ಲಿ ಎಲ್ಲರಿಗೂ ವ್ಯಾಕ್ಸಿನ್ ನೀಡುವ ಮೂಲಕ ಪ್ರಾಣ ಉಳಿಸಿದ ಪುಣ್ಯಾತ್ಮ ಮೋದಿ ಎಂಬುದನ್ನು ಯಾರೂ ಮರೆಯಬಾರದು.
ಅಡುಗೆ ಅನಿಲ, ಆರೋಗ್ಯಕ್ಕೆ ಅಭಯ, ಶೌಚಗೃಹ ನಿರ್ಮಾಣಕ್ಕೆ ಸಹಾಯಧನ, ಆಯುಷ್ಮಾನ್ ಭಾರತ, ಜನೌಷಧಿ ಕೇಂದ್ರ, ಮನೆ ಮನೆಗೆ ನಲ್ಲಿ ಸಂಪರ್ಕ, ರೈತರಿಗೆ ಕಿಸಾನ್ ಸಮ್ಮಾನ, ಬಡವರಿಗೆ ಅಕ್ಕಿ ಹೀಗೆ ಅನೇಕ ಯೋಜನೆಗಳನ್ನು ಪ್ರಧಾನಿ ಮೋದಿ ಬಡವರಿಗಾಗಿ ಜಾರಿಗೊಳಿಸಿದ್ದಾರೆ. ನಮ್ಮ ಮಕ್ಕಳ ಉನ್ನತ ಶಿಕ್ಷಣಕ್ಕೆ ಮೋದಿ ಕ್ರಮ ಕೈಗೊಂಡಿದ್ದಾರೆ. ನಡೆದಾಡುವ ದೇವರೆಂದೇ ಖ್ಯಾತರಾದ ಸಿದ್ಧೇಶ್ವರ ಶ್ರೀಗಳು ಕೂಡ ಪ್ರಧಾನಿ ಮೋದಿ ಅವರನ್ನು ಕೊಂಡಾಡಿದ್ದಾರೆ. ಕೇವಲ ದೇಶವಲ್ಲ, ಇಂದು ಜಗತ್ತೇ ಅವರ ಮಾತು ಕೇಳುವಂತಾಗಿದೆ. ಗಂಡನಿಂದ ಹಣ ಕಿತ್ತುಕೊಂಡು ಹೆಂಡತಿಗೆ ಕೊಡುವ, ಬಹಿರಂಗವಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದೂ ಘೋಷಣೆ ಕೂಗಿದರೂ ಕ್ರಮ ಕೈಗೊಳ್ಳದ ಕಾಂಗ್ರೆಸ್ ನಿಂದ ದೇಶ ಭದ್ರವಾಗಿರಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನವರು ದೇಶವನ್ನೇ ಕೊಳ್ಳೆ ಹೊಡೆಯುತ್ತಾರೆ. ರೈತರಿಗೆ ರಾಜ್ಯ ಸರಕಾರ ನೀಡುತ್ತಿದ್ದ ೪ ಸಾವಿರ ರೂ.ಸಹಾಯ ಧನವನ್ನು ಕಾಂಗ್ರೆಸ್ ಸರಕಾರ ಬಂದ್ ಮಾಡಿದೆ. ಸಂವಿಧಾನ ಬರೆದ ಡಾ.ಅಂಬೇಡ್ಕರ್ ಅವರಿಗೆ ಗೌರವ ನೀಡದ ಕಾಂಗ್ರೆಸ್ ಸರಕಾರ ದಲಿತರನ್ನೂ ಕಡೆಗಣಿಸಿದೆ. ಈ ಎಲ್ಲ ಸಂಗತಿಗಳನ್ನು ಪರಿಗಣಿಸಿ ನಾವೆಲ್ಲ ಏಕತೆಯಿಂದ ಬಿಜೆಪಿ ಬೆಂಬಲಿಸೋಣ ಎಂದರು.
ರೈತರ ಹೊಲಗಳು ಹಾಗೂ ಗ್ರಾಮೀಣ ಭಾಗಕ್ಕೆ ರಸ್ತೆಗಳನ್ನು, ಹೊಲಗಳಿಗೆ ಉಚಿತ ವಿದ್ಯುತ್, ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಸಂಕಲ್ಪ ನಮ್ಮದಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ನೀವು ಅಭಿವೃದ್ಧಿ ಸದ್ದು ಕೇಳಲು ಸಾಧ್ಯ ಎಂದರು.
ಡಿ.ಕೆ.ಸುರೇಶ ಕೇವಲ ೨ ಬಾರಿ ಸಂಸದರಾಗಿ ತಮ್ಮ ಆಸ್ತಿ ೨೪೬೫ ಕೋಟಿ ಎಂದು ಘೋಷಿಸಿಕೊಂಡಿದ್ದಾರೆ. ಆದರೆ ಮೋದಿಯವರು ಮೂರು ಬಾರಿ ಮುಖ್ಯಮಂತ್ರಿಯಾಗಿ, ಎರಡು ಬಾರಿ ಪ್ರಧಾನಿಯಾಗಿ ಕೇವಲ ೨ ಕೋಟಿ ಆಸ್ತಿ ಹೊಂದಿದ್ದಾರೆ. ಇದರಿಂದಲೇ ನಮ್ಮ ಮೋದಿ ಅವರ ವ್ಯಕ್ತಿತ್ವ ಅರ್ಥವಾಗುತ್ತದೆ. ಪ್ರತಿಯೊಬ್ಬರೂ ದೇಶದ ಅಭಿವೃದ್ಧಿಗಾಗಿ ರಮೇಶ ಜಿಗಜಿಣಗಿ ಅವರನ್ನು ಬೆಂಬಲಿಸುವ ಮೂಲಕ ಮೋದಿ ಅವರ ಕೈಬಲಪಡಿಸಬೇಕು. ಬಲಿಷ್ಠ ಭಾರತ ನಿರ್ಮಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಮೋರಟಗಿ ವ್ಯಾಪ್ತಿಯ ಬಗಲೂರ, ಶಿರಸಗಿ, ಹಾವಳಗಿ, ಯರಗಲ್ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ಬಹಿರಂಗ ಸಭೆಯಲ್ಲಿ ಮಲ್ಲಿಕಾರ್ಜುನ ಜೋಗೂರ, ಗುರು ತಳವಾರ, ಸಿದ್ದು ಅನಗೊಂಡ, ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಶ್ರೀಶೈಲಗೌಡ ಬಿರಾದಾರ, ಸಿದ್ದನಗೌಡ ಗುತ್ತರಗಿ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಮ್ಮ ಬೆಳೆಗಳಿಗೆ ನೀರು ಕೊಡದೆ ತೆಲಂಗಾಣಕ್ಕೆ ನೀರು ಹರಿಕೆ
    In (ರಾಜ್ಯ ) ಜಿಲ್ಲೆ
  • ಕೈಗಾರಿಕಾ ವಲಯದಲ್ಲಿ ಭೂಮಿ, ಹಣ, ವಿದ್ಯುತ್ ಇದ್ದರೆ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳಿ :ಸಚಿವ ಎಂ.ಬಿ. ಪಾಟೀಲ
    In (ರಾಜ್ಯ ) ಜಿಲ್ಲೆ
  • ಜು. ೨೯ರಂದು ಹಡಪದ ಅಪ್ಪಣ್ಣ ಜಯಂತಿ
    In (ರಾಜ್ಯ ) ಜಿಲ್ಲೆ
  • ೧೭,೩೮,೫೮೭ ಗಣತಿ ನಮೂನೆ ಗಣಕೀಕರಣ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.