Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತಗಟ್ಟೆ ಕೇಂದ್ರಗಳಲ್ಲಿ ಬಿಸಿಗಾಳಿ ಪರಿಣಾಮ ತಗ್ಗಿಸಲು ಕ್ರಮ :ಡಿಸಿ
(ರಾಜ್ಯ ) ಜಿಲ್ಲೆ

ಮತಗಟ್ಟೆ ಕೇಂದ್ರಗಳಲ್ಲಿ ಬಿಸಿಗಾಳಿ ಪರಿಣಾಮ ತಗ್ಗಿಸಲು ಕ್ರಮ :ಡಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಬಿಸಿಲಿನ ತಾಪಕ್ಕೆ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಕಡಿಮೆಯಾಗದಿರಲೆಂದು ಆಯ್ದ ಮತಗಟ್ಟೆ ಕೇಂದ್ರಗಳಲ್ಲಿ ಶೆಡ್ ಅಥವಾ ಪರದೆಯ ನೆರಳಿನ ವ್ಯವಸ್ಥೆ ಹಾಗೂ ನಿರೀಕ್ಷಣಾ ಕೊಠಡಿ (ವೇಟಿಂಗ್ ರೂಮ್) ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾಗಿರುವ ಟಿ. ಭೂಬಾಲನ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ವಿಷಯಗಳಾದ ಮಸ್ಟರಿಂಗ, ಡಿ ಮಸ್ಟರಿಂಗ್ ಹಾಗೂ ಮತದಾನ ದಿನದ ಪೂರ್ವಭಾವಿ ಸಿಧ್ಧತೆ ಕುರಿತು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದ ಅವರು ಭಾರತ ಚುನಾವಣಾ ಆಯೋಗವು ನೀಡಿರುವ ಮಾರ್ಗಸೂಚಿಗಳ ಅನ್ವಯ ಮತಗಟ್ಟೆ ಕೇಂದ್ರಗಳಲ್ಲಿ ಫ್ಯಾನ್, ನೀರು, ನೇರಳು, ಕೂಡಲು ಆಸನಗಳ ವ್ಯವಸ್ಥೆ ಆದ್ಯತೆ ಮೇರೆಗೆ ಕಲ್ಪಿಸುವ ಕಾರ್ಯವಾಗಬೇಕು ಎಂದರು.
ಪ್ರತಿ ಮತಗಟ್ಟೆಯಲ್ಲಿ ಕೂಡಾ ಪ್ರಥಮ ಚಿಕಿತ್ಸೆಯ ಪೆಟ್ಟಿಗೆ, ವೈದ್ಯರು ಅಥವಾ ವೈದ್ಯಕೀಯ ಸಿಬ್ಬಂದಿ ಮತ್ತು ಒಆರ್‌ಎಸ್ ಪಟ್ಟಣ ಇರುವ ವ್ಯವಸ್ಥೆ ಆಗಬೇಕು. ತುರ್ತು ಸನ್ನಿವೇಶದ ಕರೆ ಬಂದ ತಕ್ಷಣ ಅ್ಯಂಬುಲೆನ್ಸ್ ತಲುಪುವಂತಾಗಬೇಕು. ಹಿರಿಯ ನಾಗರಿಕರು ಮತ್ತು ವಿಶೇಷ ಚೇತನ ಮತದಾರರಿಗೆ ಗಾಲಿ ಕುರ್ಚಿ ನೀಡುವ ವ್ಯವಸ್ಥೆ ಇರತಕ್ಕದ್ದು, ಮತಗಟ್ಟೆಗಳಲ್ಲಿ ಮಹಿಳಾ ಸಿಬ್ಬಂದಿ ಇರುವದರಿಂದ ಶಿಸುಪಾಲನಾ ಕೇಂದ್ರ ತೆರೆಯುವ ವ್ಯವಸ್ಥೆ ಕೂಡಾ ಆಗಬೇಕು ಒಟ್ಟಾರೆ ಜಿಲ್ಲೆಯ ಯಾವ ಮತಗಟ್ಟೆ ಕೇಂದ್ರದ ಕುರಿತಂತೆ ಚುನಾವಣಾ ಆಯೋಗದಿಂದ ದೂರು ಬರದಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಮತಗಟ್ಟೆಯ ಮಟ್ಟದ ಅಧಿಕಾರಿಗಳು ತಮ್ಮ ಮತಗಟ್ಟೆ ವ್ಯಾಪ್ತಿಯ ಮತದಾರರ ಮನೆ ಮನೆಗೆ ಹೋಗಿ ಮತದಾರನ ವಿವರ ಇರುವ ವೋಟರ್ ಸ್ಲಿಪ್ ವಿತರಿಸುವ ಕಾರ್ಯ ನಾಳೆ ಸಂಜೆ ಯೊಳಗಾಗಿಯೇ ಮುಕ್ತಾಯಗೊಳ್ಳಬೇಕು. ಮತಗಟ್ಟೆ ಅಧಿಕಾರಿಗಳು ಮತದಾರರ ಮನೆಗೆ ಭೇಟಿ ನೀಡಿದಾಗ ಲಭ್ಯವಾಗದಿದ್ದಲ್ಲಿ ಮತದಾರನ ಪಕ್ಕದ ಮನೆಯಲ್ಲಿ ಮಾಹಿತಿ ನೀಡಿ ಬರಬೇಕು ಮತ್ತು ಮರುದಿನ ಮತ್ತೇ ಅದೆ ಮನೆಗೆ ತೇರಳಿ ಮತದಾನದ ಮಾಹಿತಿಯುಳ್ಳ ವೋಟರ್ ಸ್ಲಿಪ್ ವಿತರಿಸುವ ಕಾರ್ಯ ಆಗಬೇಕು. ಪರ ಊರು, ಪರ ಸ್ಥಳಗಳಿಗೆ ತೆರಳಿರುವ ಮತ್ತು ಇತರ ಕಾರಣಗಳಿಂದ ಬಿ ಎಲ್ ಒ ಗಳ ಸಂಪರ್ಕಕ್ಕೆ ಸಿಗದಿರುವ ಮತದಾರರಿಗೆ ಮತದಾನದ ದಿನದಂದು ಮತಗಟ್ಟೆ ವ್ಯಾಪ್ತಿಯ ನೂರು ಮೀಟರ್ ಒಳಗಡೆ ವೋಟರ್ ಹೆಲ್ಪಡೆಸ್ಕ ತೆರೆದು ಮತದಾರರಿಗೆ ವೋಟರ್ ಸ್ಲಿಪ್ ಕೋಡಬೇಕು ಯಾವುದೇ ಕಾರಣಕ್ಕೂ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಆಧಿಕಾರಿ ರಿಶಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಆರೋಗ್ಯ ಅಧಿಕಾರಿ ಬಸವರಾಜ ಹುಬ್ಬಳಿ, ಜಿಲ್ಲಾ ನಗರಾಬಿವೃದ್ಧಿ ಕೋಶದ ಅಧಿಕಾರಿ ಪ್ರೀತಮ್ ನಸಲಾಪುರ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.