Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾಗೃತಿ ಮೂಡಿಸಿ ಮತದಾನ ಪ್ರಮಾಣ ಹೆಚ್ಚಿಸಿ :ವಸ್ತ್ರದ
(ರಾಜ್ಯ ) ಜಿಲ್ಲೆ

ಜಾಗೃತಿ ಮೂಡಿಸಿ ಮತದಾನ ಪ್ರಮಾಣ ಹೆಚ್ಚಿಸಿ :ವಸ್ತ್ರದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು.
ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚುನಾವಣಾ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಈಗಾಗಲೇ ಜಿಲ್ಲೆಯಾದ್ಯಂತ ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇನ್ನಷ್ಟು ಪರಿಣಾಮಕಾರಿಯಾಗಿ ವಿಭಿನ್ನವಾಗಿ ಹಾಗೂ ವಿಶಿಷ್ಟವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಜಾಗೃತಿ ಕಾರ್ಯವನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಮತದಾರ ಜಾಗೃತಿ ಕಾರ್ಯವನ್ನು ಚಾಲೇಂಜ್ ಆಗಿ ಸ್ವೀಕರಿಸಿ, ಮತ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಂಡಿರುವ ಕಾರ್ಯಗಳ ಫಲಿತಾಂಶ ಮತದಾನ ದಿನದಂದು ತಿಳಿಯಲಿದೆ. ನೀವು ಮಾಡಿದ ಪ್ರಯತ್ನಕ್ಕೆ ಮತದಾನ ದಿನದಂದು ಫಲ ಸಿಗಲಿದೆ. ಚುನಾವಣಾ ಆಯೋಗದಿಂದ ಮುದ್ರಿಸಲಾದ ವೋಟರ್ ಗೈಡ್‌ನಲ್ಲಿ ಸಂಪೂರ್ಣವಾದ ಮಾಹಿತಿ ನೀಡಲಾಗಿದೆ. ಈ ಮಾಹಿತಿಯನ್ನು ಬಿಎಲ್‌ಓಗಳು, ಸೂಪರ್‌ವೈಸರ್‌ಗಳು ಸೇರಿದಂತೆ ನಿಯೋಜಿತ ಎಲ್ಲ ಅಧಿಕಾರಿಗಳು ತಿಳಿದುಕೊಂಡು ಪ್ರತಿ ಮನೆ-ಮನೆಗೆ ಭೇಟಿ ಮತದಾರರಲ್ಲಿ ತಿಳುವಳಿಕೆ ಮೂಡಿಸಬೇಕು. ಮತಗಟ್ಟೆಗಳಲ್ಲಿ ಮತದಾರರರಿಗೆ ಕಲ್ಪಿಸಲಾಗಿರುವ ವ್ಯವಸ್ಥೆಗಳ ಕುರಿತು ಮನವರಿಕೆ ಮಾಡಬೇಕು. ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ತಂಪು ಕುಡಿಯುವ ನೀರಿನ ವ್ಯವಸ್ಥೆ, ರ‍್ಯಾಂಪ್ ವ್ಯವಸ್ಥೆ, ನಿರೀಕ್ಷಣಾ ಕೊಠಡಿ ವ್ಯವಸ್ಥೆ, ನೆರಳು ವ್ಯವಸ್ಥೆ, ತುರ್ತು ಸಂದರ್ಭಕ್ಕೆ ಅಂಬ್ಯೂಲೆನ್ಸ್ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ, ಓ.ಆರ್.ಎಸ್. ಪೊಟ್ಟಣಗಳು, ಶೌಚಾಲಯ ಸೇರಿದಂತೆ ಮತಗಟ್ಟೆಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಪ್ರತಿ ಮತದಾರರಿಗೆ ಮಾಹಿತಿ ಒದಗಿಸುವ ಮೂಲಕ ಅವರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಪ್ರೇರೆಪಿಸಬೇಕು. ಬಿಎಲ್‌ಓ, ಸೂಪರ್‌ವೈಸರ್, ಆಶಾ ಕಾರ್ಯಕರ್ತೆರು ಮನೆಗಳಿಗೆ ಭೇಟಿ ನೀಡಿ ಪ್ರತಿ ಮನೆಯಲ್ಲಿ ಕನಿಷ್ಠ ೫ ನಿಮಿಷ ತಿಳಿ ಹೇಳುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸಹ ವಿವಿಧ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು. ಇದರಿಂದ ಬಿಎಲ್‌ಗಳಿಗೆ ಪ್ರೊತ್ಸಾಹ ದೊರೆಯಲಿದೆ. ಯುವ ಜನಾಂಗ, ಅಂಗವಿಕಲ ಮತದಾರ, ಹಿರಿಯ ನಾಗರೀಕ ಮತದಾರರಲ್ಲಿ ಹೆಚ್ಚಾಗಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತಿಯ ಎ.ಬಿ.ಅಲ್ಲಾಪುರ ಅವರು ಮಾಹಿತಿ ನೀಡಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧೆಡೆ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗಿದೆ. ಮಾನವ ಸರಪಳಿ, ಕ್ಯಾಂಡಲ್ ಮಾರ್ಚ್, ಪ್ರಯಾಣಿಕರ ಜಾಗೃತಿಗಾಗಿ ವಿವಿಧ ಬಸ್ ನಿಲ್ದಾಣಗಳಲ್ಲಿ ಅನೌನ್ಸ್ಮೆಂಟ್ ಮೂಲಕ ಜಾಗೃತಿ, ವಿವಿಧ ನಿಲ್ದಾಣಗಳಲ್ಲಿ ಸೆಲ್ಫಿ ಸ್ಟ್ಯಾಂಡ್ ಅಳವಡಿಕೆ, ಬಸ್‌ಗಳಿಗೆ ಪೋಸ್ಟರ್ ಅಂಟಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ವಸತಿ ನಿಲಯದ ವಿದ್ಯಾರ್ಥಿಗಳಿಂದ ಪಾಲಕರಿಗೆ ಪತ್ರ ಅಭಿಯಾನ ಹಮ್ಮಿಕೊಂಡ ಜಾಗೃತಿ ಮೂಡಿಸುವುದು, ಜಿಲ್ಲೆಯ ಕಾರ್ಮಿಕರಿರುವ ಸ್ಥಳಗಳಿಗೆ ಭೇಟಿ ನೀಡಿ ಕಾರ್ಮಿಕರಲ್ಲಿ ಜಾಗೃತಿ, ವಿವಿಧ ಮಾಲ್, ಶೋರೂಂಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯ ೧೫೨೮ ಸ್ಥಳಗಳಲ್ಲಿ ಚುನಾವಣಾ ಧ್ವಜಾರೋಹಣ, ಮಹಾನಗರ ಪಾಲಿಕೆ ವತಿಯಿಂದ ೧೦ ಅಡಿ ಬಲೂನ್ ಅಳವಡಿಸಿ ಮತದಾನ ಜಾಗೃತಿ, ಸೇರಿದಂತೆ ಹತ್ತು ಹಲವಾರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಯ ಟಿ-ಶರ್ಟ್ ಹಾಗೂ ಕ್ಯಾಪ್‌ಗಳನ್ನು ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ, ಮಹಾನಗರ ಪಾಲಿಕೆ ಆಯುಕ್ತ ಆರ್ಶದ ರೆಹಮಾನ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.