Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಂಬಾಣಿ ಸಮುದಾಯದಿಂದ ಆಲಗೂರರಿಗೆ ಆರಿಸಿ ತರುವ ಪಣ!
(ರಾಜ್ಯ ) ಜಿಲ್ಲೆ

ಲಂಬಾಣಿ ಸಮುದಾಯದಿಂದ ಆಲಗೂರರಿಗೆ ಆರಿಸಿ ತರುವ ಪಣ!

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಕಾಂಗ್ರೆಸ್‌‌ಗೆ ಬೆಂಬಲ ಸೂಚಿಸಿ ಬೃಹತ್ ಬಂಜಾರಾ ಸ್ವಾಭಿಮಾನಿ ಸಮಾವೇಶ

ವಿಜಯಪುರ: ಬಂಜಾರಾ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದ್ದು, ನಿಮ್ಮ ಬದುಕನ್ನು ಕಟ್ಟಿಕೊಡುವ ಕೆಲಸ ನಾವು ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಗುರುವಾರ ನಗರದಲ್ಲಿ ನಡೆದ ಬಂಜಾರಾ ಸ್ವಾಭಿಮಾನ ಸಮಾವೇಶದಲ್ಲಿ ಮಾತನಾಡಿ, ನೀವು ಶ್ರಮ ಜೀವಿಗಳು, ಗಟ್ಟಿಗರು. ಬಸವಣ್ಣನವರ ಕಾಯಕ ಪರಂಪರೆಯಂತೆ ಇದ್ದೀರಿ. ನಿಮ್ಮ ಸಂಸ್ಕೃತಿ ಬಿಟ್ಟಿಲ್ಲ ಎಂದರು.
ನಿಮಗೆ ಮೀಸಲಾತಿ ಕೊಡಿಸುವಲ್ಲಿ ಇಂದಿರಾಗಾಂಧಿ, ದೇವರಾಜ ಅರಸು ಅವರ ಶ್ರಮ ಕಾರಣ. ಇತ್ತೀಚೆಗೆ ತಾಂಡಾ ಅಭಿವೃದ್ಧಿ ಯೋಜನೆಗಳಿಂದ ನಿಮ್ಮ ಏಳಿಗೆಗೆ ಯತ್ನಿಸಿದ್ದೇವೆ. ಸಿದ್ದರಾಮಯ್ಯರು ಇಲ್ಲಿನ ನಿಡೋಣಿಗೆ ಬಂದಾಗ ಅಲ್ಲೇ ಸೇವಾಲಾಲರ ಜಯಂತಿ ಘೋಷಣೆ ಮಾಡಲಾಗಿತ್ತು. ಹಾಗೆಯೇ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಬದಲಾಯಿಸಿದ್ದು ನಮ್ಮ ಸರಕಾರ ಎಂದರು.
ಲಂಬಾಣಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿಸಲು ಮುಂದಿನ ಸಂಪುಟ ವಿಸ್ತರಣೆಯಲ್ಲಿ ಪ್ರಾಮಾಣಿಕವಾಗಿ ಒತ್ತಾಯ ಮಾಡುವುದಾಗಿ ಹೇಳಿದ ಸಚಿವ ಪಾಟೀಲರು, ಉಳಿದ ಸ್ಥಾನಮಾನಗಳಿಗೂ ಆದ್ಯತೆ ನೀಡಲಾಗುವುದು. ಇಡೀ ರಾಜ್ಯದಲ್ಲಿ ನಿಮ್ಮ ಸೌಖ್ಯವನ್ನು ಕಾಪಾಡಲಾಗಿದೆ. ಕಾಂಗ್ರೆಸ್‌ನಿಂದ ಸ್ವಾತಂತ್ರ್ಯ ನಂತರ ಬಂಜಾರಾ ಸಮಾಜಕ್ಕೆ ಬಹಳಷ್ಟು ಅನುಕೂಲವಾಗಿದೆ. ಪಡಿತರ ಕಾರ್ಡಿನಿಂದ ಹಿಡಿದು ಒಕ್ಕಲುತನ ಮಾಡಲು ಜಮೀನನ್ನು ಕೂಡ ನೀಡಲಾಗಿದೆ. ಅಭಿವೃದ್ಧಿ ಪರವಿರುವ ಪಕ್ಷಕ್ಕೆ ಮತ ನೀಡಿ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಭವಿಷ್ಯ ಮತ್ತಷ್ಟು ಸುಧಾರಿಸಲಿದೆ ಎಂದು ಹೇಳಿದರು.
ಮಾಜಿ ಜಿಪಂ ಸದಸ್ಯ ಅರ್ಜುನ ರಾಠೋಡ ಪ್ರಾಸ್ತಾವಿಕ ಮಾತನಾಡಿ, ಅಂಬೇಡ್ಕರ್ ಅವರಿಂದ ನಾವು ಮೀಸಲಾತಿ ಪಡೆದು ಅನುಕೂಲವಾಗಿದೆ. ನಾವು ಸುಶಿಕ್ಷತರಾಗಿ ಬದುಕುತ್ತಿದ್ದೇವೆ. ಕರ್ನಾಟಕದಲ್ಲಿ ಅತಿ ಹೆಚ್ಚು ಬಂಜಾರಾ ಸಮುದಾಯವಿದೆ. ಇಲ್ಲಿ ಐದು ಸಾವಿರ ತಾಂಡಾಗಳಿವೆ. ಈ ಲೋಕಸಭೆ ಚುನಾವಣೆಯಲ್ಲಿ ನಾವು ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸಬೇಕಿದೆ ಎಂದರು.
ಎಲ್ಲ ಮತಕ್ಷೇತ್ರದ ಜನ ಇಲ್ಲಿ ಸೇರಿದ್ದೇವೆ. ನಾವು ಯಾರಿಗೆ ಮತ ನೀಡಿದರೆ ಒಳಿತು ಎಂದು ಎಲ್ಲೆಡೆ ಚರ್ಚಿಸಲಾಗಿದೆ. ನಮಗಾಗಿ ಕಾಳಜಿ ವಹಿಸುವ ವ್ಯಕ್ತಿಗೆ ಮತ ನೀಡಬೇಕು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜು ಆಲಗೂರರು ಯೋಗ್ಯರಿದ್ದಾರೆ. ಇವರು ಗೆದ್ದರೆ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಬಂದರೆ ಬಹಳ ಅನುಕೂಲವಾಗಲಿದೆ. ಸಿದ್ದರಾಮಯ್ಯರ ಸರಕಾರ ನಮ್ಮ ಶ್ರೇಯೋಭಿವೃದ್ಧಿಗೆ ಶ್ರಮಿಸಿದೆ. ಜಿಲ್ಲೆಯಲ್ಲಿ ಸಚಿವ ಎಂ.ಬಿ.ಪಾಟೀಲರು ಸಾವಿರಾರು ಕೋಟಿ ರೂ.ನಲ್ಲಿ ನೀರಾವರಿ ಕೆಲಸ ಸಾಕಾರಗೊಳಿಸಿದ್ದಾರೆ. ನಮಗೆ ಬೆಲೆ ಬಾಳುವ ಜಮೀನು ನೀಡಿ ನಮ್ಮ ಸಂತರ ಗುಡಿ ಕಟ್ಟಿಸಲು ಸಹಾಯ ಮಾಡಿದ್ದಾರೆ. ಇದಲ್ಲದೇ ಸಮುದಾಯ ಭವನ ಸೇರಿ ಅನೇಕ ಕೆಲಸ ಆಗಲಿವೆ. ರಾಜ್ಯದಲ್ಲಿ ಎಲ್ಲೂ ನಮ್ಮ ಜನಕ್ಕೆ ಇಷ್ಟು ಸಹಾಯ ಸಿಕ್ಕಿಲ್ಲ. ತಾಂಡಾಗಳನ್ನು ಕಂದಾಯ ಗ್ರಾಮ ಮಾಡಿದ್ದು ಕೂಡ ಕಾಂಗ್ರೆಸ್ ಪಕ್ಷದ ಬದ್ಧತೆಯಾಗಿದೆ. ಹಾಗಾಗಿ ನಾವು ಆಲಗೂರರನ್ನು ಬೆಂಬಲಿಸುವುದು ನಮ್ಮ ಕರ್ತವ್ಯ. ನೂರಕ್ಕೆ ನೂರರಷ್ಟು ನಮ್ಮ ಬಂಜಾರಾ ಸಮಾಜ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡೋಣ. ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ನಮಗೆ ಅವಮಾನ ಮಾಡಿದ್ದಾರೆ. ಅವರಿಗೆ ಪಾಠ ಕಲಿಸಬೇಕು ಎಂದರು.
ಮುಖಂಡ ಬಿ.ಬಿ.ಲಮಾಣಿ ಮಾತನಾಡಿ, ನಾವು ಲಂಬಾಣಿಗರು ಸ್ವಾಭಿಮಾನಿಗಳಿದ್ದೇವೆ. ನಮಗೆ ಅಧಿಕಾರ ಸಿಗಬೇಕಾದರೆ ನಾವು ಸಂಘಟಿತರಾಗಬೇಕು. ನಮಗೆ ಆಗಿರುವ ಅನ್ಯಾಯ ಸರಿಯಾಗಬೇಕು. ನಮಗೆ ಮಂತ್ರಿ, ನಿಗಮ ಸ್ಥಾನ, ರಾಜ್ಯಸಭೆಯಲ್ಲಿ ಆದ್ಯತೆ ಸಿಗಬೇಕು. ನಮಗೆ ಎಂ.ಬಿ.ಪಾಟೀಲರು ಬೆನ್ನೆಲುಬಾಗಿದ್ದಾರೆ. ಅವರು ನಮ್ಮ ಅಳಲಿಗೆ ಸ್ಪಂದಿಸುತ್ತಾರೆ. ಜಿಗಜಿಣಗಿ ಮುತ್ಸದ್ದಿ ರಾಜಕಾರಣಿಯಾಗಿ ತಪ್ಪು ಮಾಡಿದ್ದಾರೆ, ಹಾಗಾಗಿ ನಾವು ಒಟ್ಟಾಗಿ ಕಾಂಗ್ರೆಸ್ ಬೆಂಬಲಿಸಬೇಕು ಎಂದರು.
ಅಭ್ಯರ್ಥಿ ಪ್ರೊ.ರಾಜು ಆಲಗೂರ್ ಮಾತನಾಡಿ, ಬಂಜಾರಾ ಸಮುದಾಯದ ಜೊತೆ ಯಾವತ್ತೂ ಇರುತ್ತೇನೆ. ಬಿಜೆಪಿಯವರಂತೆ ನಾನು ನಡೆದುಕೊಳ್ಳುವುದಿಲ್ಲ. ನೀವು ದೊಡ್ಡ ಸಮುದಾಯ. ನಿಮ್ಮ ಮತಗಳು ನನಗೆ ಬಂದರೆ ನನ್ನ ಗೆಲುವನ್ನು ತಡೆಯಲು ಜಿಗಜಿಣಗಿಯವರಿಂದ ಸಾಧ್ಯವಿಲ್ಲ. ನಿಮಗೆಲ್ಲ ನಾನು ಋಣಿಯಾಗಿರುವೆ ಎಂದು ಹೇಳಿದರು.
ಪರಿಷತ್ ಸದಸ್ಯ ಪ್ರಕಾಶ ರಾಠೋಡ ಮಾತನಾಡಿ, ಸ್ವಯಂ ಪ್ರೇರಿತರಾಗಿ ನೀವೆಲ್ಲ ನಿಮ್ಮ ಭವಿಷ್ಯಕ್ಕಾಗಿ ಸ್ವಾಭಿಮಾನ ಸಮಾವೇಶ ನಡೆಸಿ ಒಳ್ಳೆಯ ಕೆಲಸ ಮಾಡಿದ್ದೀರಿ. ಇಂತಹ ಬೆಳವಣಿಗೆ ಸರಿಯಾಗಿದೆ. ನೀವುಗಳು ಯೋಚಿಸಿ, ಚರ್ಚಿಸಿ ಒಂದು ನಿರ್ಧಾರಕ್ಕೆ ಬರುತ್ತಿದ್ದೀರಿ. ಕಾಂಗ್ರೆಸ್ ಜೊತೆಗೆ ಮೊದಲಿಂದ ನಮ್ಮದು ಒಡನಾಟವಿದೆ. ಈ ಲೋಕಸಭೆಗೆ ರಾಜು ಆಲಗೂರರನ್ನು ಆರಿಸಿ ಕಳಿಸುವುದು ಅಗತ್ಯವಿದೆ ಎಂದರು.
ಕೌಶಲ್ಯ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಮಾಜಿ ಶಾಸಕ ಶರಣಪ್ಪ ಸುಣಗಾರ, ಹಿರಿಯ ಮುಖಂಡ ಡಿ.ಎಲ್. ಚವ್ಹಾಣ, ವಾಮನ್ ಚವ್ಹಾಣ, ರಾಜು ಜಾಧವ, ಮಲ್ಲಿಕಾರ್ಜುನ ನಾಯಕ, ಶ್ರೀದೇವಿ ಉತ್ಲಾಸರ, ಶಂಕರ ಚವ್ಹಾಣ, ಎಂ. ಎಸ್. ನಾಯಕ, ಡಾ.ಗಂಗಾಧರ ಸಂಬಣ್ಣಿ, ಸುರೇಶ ರಾಠೋಡ, ಶೇಖರ ನಾಯಕ, ರವಿ ಜಾಧವ, ರಾಜು ಚವ್ಹಾಣ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.