ಇಂಡಿ: ಕೇಂದ್ರದ ಮಾಜಿ ಸಚಿವೆ ಶೋಭಾ ಕರಂದಾಜ್ಲೆ ಮೇ ೪ ರಂದು ತಾಲೂಕಿನ ತಡವಲಗಾ ಗ್ರಾಮಕ್ಕೆ ಆಗಮಿಸಲಿದ್ದಾರೆ ಎಂದು ವಿಜಯಪುರ ಜಿಲ್ಲಾ ರೈತ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ ತಿಳಿಸಿದ್ದಾರೆ.
ಅವರು ಬೆಳಗ್ಗೆ ೧೦ ಗಂಟೆಗೆ ಗ್ರಾಮದಲ್ಲಿ ೨೦೨೪ ಲೋಕಸಭಾ ಚುನಾವಣೆಯ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಲಿದ್ದಾರೆ.
ಅದಲ್ಲದೆ ಮೇ ೫ ರಂದು ಇಂಡಿಗೆ ಬಸನಗೌಡ ಪಾಟೀಲ ಆಗಮಿಸಲಿದ್ದಾರೆ. ಬೆಳಗ್ಗೆ ೧೧ ಗಂಟೆಗೆ ಮಹಾವೀರ ವೃತ್ತದಿಂದ ಧನಶೆಟ್ಟಿ ಮಂಗಲ ಕಾರ್ಯಾಲಯದ ವರೆಗೆ ರೋಡ್ ಶೋ ನಡೆಸಲಿದ್ದಾರೆ. ನಂತರ ಧನಶೆಟ್ಟಿ ಮಂಗಲ ಕಾರ್ಯಾಲಯದಲ್ಲಿ ಲೋಕಸಭಾ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ಮತ ಯಾಚಿಸಲಿದ್ದಾರೆ ಎಂದು ಕಾಸುಗೌಡ ಬಿರಾದಾರ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

