Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಗಜಿಣಗಿ ನೆನಪಿಡುವ ಯಾವ ಕೆಲಸಗಳನ್ನೂ ಮಾಡಿಲ್ಲ :ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಜಿಗಜಿಣಗಿ ನೆನಪಿಡುವ ಯಾವ ಕೆಲಸಗಳನ್ನೂ ಮಾಡಿಲ್ಲ :ಎಂ.ಬಿ.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಅಧಿಕಾರದಲ್ಲಿದ್ದಾಗ ನಾವು ಮಾಡುವ ಕೆಲಸಗಳನ್ನು ಜನ ಸ್ಮರಿಸುವಂತಿರಬೇಕು. ಆದರೆ, ಸಂಸದ ರಮೇಶ ಜಿಗಜಿಣಗಿ ಜಿಲ್ಲೆಯ ಜನ ನೆನಪಿಡುವ ಯಾವ ಕೆಲಸಗಳನ್ನೂ ಮಾಡಿಲ್ಲ ಎಂದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶನಿವಾರ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿ ಮತ್ತು ಕಂಬಾಗಿಯಲ್ಲಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಅವರು ಮಾತನಾಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಸಂಸದರಾಗಿ ಹೈದರಾಬಾದ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕೊಡಿಸಿದರು. ಇಎಸ್ಐ ಆಸ್ಪತ್ರೆ ನಿರ್ಮಿಸಿದರು. ಪ್ರಕಾಶ ಹುಕ್ಕೇರಿ ಸಂಸದರಾಗಿ ಚಿಕ್ಕೋಡಿ ಮತಕ್ಷೇತ್ರದಲ್ಲಿ ಸವಳು- ಜವಳು ಬಗೆ ಹರಿಸುವುದು ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಇದರಿಂದಾಗಿ ಜನ ಈಗಲೂ ಅವರನ್ನು ಸ್ಮರಿಸುತ್ತಾರೆ. ಇವರ ಅಭಿವೃದ್ಧಿ ಕಾರ್ಯಗಳನ್ನು ನೋಡಿಯಾದರೂ ಸಂಸದ ರಮೇಶ ಜಿಗಜಿಣಗಿ ವಿಜಯಪುರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಬೇಕಿತ್ತು. ಯಾವುದೇ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಸಂಸತ್ತಿಗೆ ಹೋಗಿ ಪ್ರಯೋಜನವಾದರೂ ಏನೂ? ಎಂದು ಅವರು ಪ್ರಶ್ನಿಸಿದರು.
ಕೆಲವು ರಾಜ್ಯಗಳ ಆರ್ಥಿಕತೆ ಪ್ರವಾಸೋದ್ಯಮ ಮೇಲೆ ಹೆಚ್ಚು ಅವಲಂಬಿತವಾಗಿದೆ. ವಿಜಯಪುರ ಜಿಲ್ಲೆಯಲ್ಲಿಯೂ ಪ್ರವಾಸೋದ್ಯಮ, ತೋಟಗಾರಿಕೆ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿದ್ದರೂ ಸಂಸದರು ಸ್ಪಂದಿಸಿಲ್ಲ. ಕೆಲಸ ಮಾಡದವರು ಸಾಕು. ಕ್ರಿಯಾಶೀಲರಾದ ಹೊಸಬರಿಗೆ ಅವಕಾಶ ನೀಡೋಣ. ಪ್ರೊ. ರಾಜು ಆಲಗೂರ ಅವರನ್ನು ಮತಹಾಕಿ ಗೆಲ್ಲಿಸಿ. ಅಭಿವೃದ್ಧಿ ಮಾಡಿಸುವುದು ನನ್ನ ಗ್ಯಾರಂಟಿ ಎಂದು ಸಚಿವರು ತಿಳಿಸಿದರು.
ಪ್ರೊ. ರಾಜು ಆಲಗೂರ ಅವರು ವಿಜಯಪುರದ ಸರ್ವಾಂಗೀಣ ಅಭಿವೃದ್ಧಿಗೆ ಅವರದೇ ಆದ ವಿಜನ್ ಹೊಂದಿದ್ದು, ಈಗಾಗಲೇ 10 ಅಂಶಗಳ ಪ್ರಣಾಳಿಕೆ ಪ್ರಕಟಿಸಿದ್ದಾರೆ. ಸರಳ, ಸಜ್ಜನ, ಯಾರಿಗೂ ಕೆಟ್ಟದ್ದನ್ನು ಮಾಡದ, ಕ್ರಿಯಾಶೀಲ ವ್ಯಕ್ತಿಯಾಗಿರುವ ಅವರಿಗೆ ಮತ ಹಾಕಿ ಗೆಲ್ಲಿಸಬೇಕು ಎಂದು ಹೇಳಿದರು.
ಈ ವೇಳೆ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರ ಸಂಗನಗೌಡ ಪಾಟೀಲ ಚಿಕ್ಕಗಲಗಲಿ, ಕಾಂಗ್ರೆಸ್ ಮುಖಂಡರಾದ ಬಸನಗೌಡ ಪಾಟೀಲ ಹೊಸೂರ, ಎಸ್. ಎಂ. ಸೊನ್ನದ, ಎಂ. ಕೆ. ಶಿವಣ್ಣವರ, ಸಂಜು ಕಂಬಾಗಿ ಮಾತನಾಡಿ, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಗೆಲ್ಲಿಸೋಣ. ಸಚಿವ ಎಂ. ಬಿ. ಪಾಟೀಲ ಅವರ ಕೈ ಬಲಪಡಿಸೋಣ ಎಂದು ಮಾಡಿದರು.
ಈ ಸಂದರ್ಭದಲ್ಲಿ ಎಲ್. ಎಸ್. ನಿಡೋಣಿ, ಲಕ್ಷ್ಮಣ ಚಿಗದಾನಿ, ಪಾಂಡುಗೌಡ ಬಿರಾದಾರ, ವಿ. ಎಚ್. ಪಾಟೀಲ, ರಮೇಶ ಯರಗಟ್ಟಿ, ಸಂಜುಗೌಡ ಪಾಟೀಲ, ಎಂ. ಬಿ. ಮದರಖಂಡಿ, ಕೆ. ಎಂ. ಮಠಪತಿ, ರಂಗನಗೌಡ ಕ. ಬಿರಾದಾರ, ಅಪ್ಪಾಸಾಹೇಬಗೌಡ ಪಾಟೀಲ, ಮಲ್ಲಿಕಾರ್ಜುನ ಅಂಗಡಿ, ಮಹಾಳಿಂಗರಾಯ ಮಹಾರಾಜರು ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.