ಝಳಕಿ: ನರೇಂದ್ರ ಮೋದಿ ಅವರ ನಾಯಕತ್ವ ದೇಶದ ಭದ್ರತೆ ವಿಚಾರದಲ್ಲಿ ಅನಿವಾರ್ಯವಾಗಿದೆ ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡಿಕೊಟ್ಟು,ವಕಸಿತ ಭಾರತದ ಸಂಕಲ್ಪದೊಂದಿಗೆ ದೇಶವಾಸಿಗಳ ರಕ್ಷಣೆಗೆ ಪಣತೊಟ್ಟಿರುವ ಪ್ರಧಾನಿ ಮೋದಿಯವರ ನೇತೃತ್ವದ ಬಿಜೆಪಿ ಗೆಲ್ಲಿಸಿ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಪಸೆ ಹೇಳಿದರು.
ಸಮೀಪದ ಜೇವೂರ ಗ್ರಾಮದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಪಸೆ ಹಾಗೂ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಸರ್ಕಾರದಲ್ಲಿ ಕಳೆದ ಹತ್ತು ವರ್ಷಗಳ ಸಾಧನೆಗಳು, ಜನಪರ ಯೋಜನೆಗಳು, ದೇಶದಲ್ಲಾದ ಸಕಾರಾತ್ಮಕ ಬದಲಾವಣೆಗಳ ಜೊತೆಗೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರು ನಡೆ,ನುಡಿ ಮತ್ತು ಅವರ ತಾಯಿ ಗುಣ ಹೊಂದಿದವರು ಅವರು ಸಕಾರಾತ್ಮಕ ಗುಣದವರು ಬಿಜೆಪಿ ಪಕ್ಷಕ್ಕೆ ಬೆಂಬಲಿಸಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ್ತೊಮ್ಮೆ ಆಶಿರ್ವದಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.
ಪ್ರತಿ ಮನೆಗಳಲ್ಲಿ ಸಿಕ್ಕ ಅದ್ಬುತ ಸ್ಪಂದನೆ ಹಾಗೂ ಬೆಂಬಲದಾಯಕ ಮಾತುಗಳು ಕಾರ್ಯಕರ್ತರ ಚುನಾವಣಾ ಪ್ರಚಾರದ ಹುಮ್ಮಸ್ಸನ್ನು ಹೆಚ್ಚಾಗಿಸಿದೆ.
ಈ ವೇಳೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಮತ್ತು ಬಿ.ಡಿ.ಪಾಟೀಲ ಮಾತನಾಡಿದರು.
ಕಾಸುಗೌಡ ಬಿರಾದಾರ, ಹಣಮಂತರಾಯಗೌಡ ಬಿರಾದಾರ, ರಾಜುಗೌಡ ಪಾಟೀಲ, ರಾಜಕುಮಾರ ಸಗಾಯಿ, ವಿಠ್ಠಲ ಕಾಗರ, ಜಾಕೀರ ಸಧಾಪ್, ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

