Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋದಿ ನೀಡಿದ ಭರವಸೆಗಳೆಲ್ಲವೂ ಹುಸಿಯಾಗಿವೆ :ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಮೋದಿ ನೀಡಿದ ಭರವಸೆಗಳೆಲ್ಲವೂ ಹುಸಿಯಾಗಿವೆ :ಎಂ.ಬಿ.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೊದಲ ಪುಟ

ವಿಜಯಪುರ: ಸುಳ್ಳು ಹೇಳುವ ಮೋದಿ ಮತ್ತು ಬಿಜೆಪಿಯನ್ನು ಮನೆಗೆ ಕಳುಹಿಸುವ ಸಮಯ ಬಂದಿದ್ದು, ಮಂಗಳವಾರ ಮತದಾರರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಗೆಲ್ಲಿಸಬೇಕು ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ರವಿವಾರ ತಿಕೋಟಾ ತಾಲೂಕಿನ ಹೊನವಾಡ, ಬಬಲೇಶ್ವರ ತಾಲೂಕಿನ ಅರ್ಜುಣಗಿ, ಕಾತ್ರಾಳ ಮತ್ತು ಹಲಗಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಮಾತನಾಡಿದ ಅವರು, ಜಿಲ್ಲೆ, ದೇಶದ ಭವಿಷ್ಯ ನಿರ್ಣಯಿಸುವ ಶುಭ ಘಳಿಗೆ ಈಗ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರಿಗೆ ಮತ ಹಾಕಿ ಗೆಲ್ಲಿಸೋಣ ಎಂದು ಅವರು ಹೇಳಿದರು.
ನರೇಂದ್ರ ಮೋದಿ ಅವರಿಗೆ 10 ವರ್ಷ ಮೋದಿಗೆ ಅವಕಾಶ ನೀಡಿದ್ದು ಸಾಕು. ಜಿಗಜಿಣಗಿ ಅವರಿಗೆ ಆರು ಬಾರಿ ಅವಕಾಶ ನೀಡಿದ್ದೂ ಸಾಕು. ಮೋದಿ ಅವರು ನೀಡಿದ ಭರವಸೆಗಳೆಲ್ಲವೂ ಹುಸಿಯಾಗಿವೆ. ಬೆಲೆ ಏರಿಕೆ, ನಿರುದ್ಯೋಗ, ಅಭಿವೃದ್ಧಿಯ ಕಡೆಗಣನೆಯಿಂದಾಗಿ ರೈತರು, ಬಡವರು, ಜನಸಾಮಾನ್ಯರ ತತ್ತರಿಸಿದ್ದಾರೆ. ಗೊಬ್ಬರ ಬೆಲೆ ಮೂರು ಪಟ್ಟು ಹೆಚ್ಚಾಗಿದೆ. ದ್ರಾಕ್ಷಿ ಔಷಧಿ ದರ ಐದು ಪಟ್ಟು ತುಟ್ಟಿಯಾಗಿದೆ. ರೈತರ ಆದಾಯ ದ್ವಿಗುಣವಾಗುವ ಬದಲು ಕೃಷಿ, ತೋಟಗಾರಿಕೆ ನಿರ್ವಹಣೆ ವೆಚ್ಚ ದ್ವಿಗುಣವಾಗಿದೆ. ಮೋದಿ ಮಾತುಗಳು ಹೊಟ್ಟೆ ತುಂಬಿಸುವುದಿಲ್ಲ ಎಂಬುದು ಜನರಿಗೆ ಅರಿವಾಗಿದೆ. ಕಾಂಗ್ರೆಸ್ ಈ ಮುಂಚೆ ಜನರ ಬದುಕು ಕಟ್ಟಿಕೊಟ್ಟಿದೆ. ಈಗ ಪಂಚ ಗ್ಯಾರಂಟಿಗಳ ಮೂಲಕ ಸರ್ವ ಸಮುದಾಯಗಳ ಆರ್ಥಿಕ ಸ್ಥಿತಿ ಸುಧಾರಿಸುತ್ತಿದೆ. ಈ ಚುನಾವಣೆಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ದೇಶದ ರೈತರು, ಮಹಿಳೆಯರು, ಯುವಕರು ಹಾಗೂ ಸರ್ವ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ಮಾಡಲಿದೆ ಎಂದು ಅವರು ತಿಳಿಸಿದರು.
ಪ್ರಾಣಿ ಪಕ್ಷಿಗಳು ಕೂಡ ಉಪಕಾರ ಮಾಡಿದವರನ್ನು ನೆನೆಯುತ್ತವೆ. ಮನುಷ್ಯರಾದ ನಾವು ನಮಗೆ ನೆರವಾದರನ್ನು ಮರೆಯಬಾರದು. ವಿಜಯಪುರ ಜಿಲ್ಲೆಯನ್ನು ಬಾರಮತಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಕನಸನ್ನು ಹೊಂದಿದ್ದೇನೆ. ನಾವು ರೈತರ ಜನ. ನಮ್ಮದು ನೀರಿನ ಜಾತಿ. ನೀರು ಮತ್ತು ಅಭಿವೃದ್ಧಿ ನಮ್ಮ‌ ಧರ್ಮ ಎಂದು ಅವರು ಹೇಳಿದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಅರವಿಂದ ಮಸಳಿ, ಜಕ್ಕಪ್ಪ ಯಡವೆ, ಚನ್ನಪ್ಪ ಕೊಪ್ಪದ, ಬಾಪುಗೌಡ ಪಾಟೀಲ ಶೇಗುಣಸಿ, ಡಾ. ಕೆ. ಎಚ್. ಮುಂಬಾರಡ್ಡಿ, ಬಸನಗೌಡ ಬ. ಪಾಟೀಲ ಮಾತನಾಡಿದರು.
ಈ ಸಂದರ್ಭದಲ್ಲಿ ವಿಜಯಕುಮಾರ ಹಿರೇಮಠ, ಸಾಬು ಖಂಡೆಕರ, ರಾಮಗೊಂಡ ಚಾವರ, ತುಕಾರಾಮ ದಡಕೆ, ಸುರೇಶಗೌಡ ಪಾಟೀಲ, ಸಿದ್ದಪ್ಪ ಬೆಳಗಾವಿ, ಶ್ಯಾಮು ಬಡಳ್ಳಿ, ರಫೀಕ್ ಮಕಾಂದಾರ, ರಮೇಶ ದೇಸಾಯಿ, ಸುಲ್ತಾನ ಹೊಕ್ಕುಂಡಿ, ರಫೀಕ್ ಸೋನಾರ, ಕಲ್ಲಪ್ಪಗೌಡ ನ್ಯಾಮಗೌಡ, ಎಂ. ಎನ್. ಅಂಗಡಿ, ಮುದಕಪ್ಪಗೌಡ ಪಾಟೀಲ, ಮಲ್ಲಪ್ಪ ಕೆಂಪವಾಡ, ಮುತ್ತಪ್ಪ ವಾಣಿ, ರಾಮನಿಂಗ ಕೊಕಟನೂರ, ಎಸ್. ಡಿ. ಗುಗ್ಗರಿ, ಬಾಳೇಶ ಪಡಸಲಗಿ, ರಂಗಪ್ಪ ಚಿಕ್ಕಲಕಿ, ಸಿದ್ಧರಾಯ ಬಿರಾದಾರ, ಸಂಗಪ್ಪ ಮನಗೂಳಿ, ಹನಮಂತಗೌಡ ಬಿರಾದಾರ, ಟಿ. ಎಸ್. ಕುಲಕರ್ಣಿ, ಬಸವರಾಜ ಬಡ್ರಿ, ಡಾ. ಕೆ. ಎಚ್. ಮುಂಬಾರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.