Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾನತೆ ಸಾರಿದ ವಚನಕಾರ ದಾಸಿಮಯ್ಯ
(ರಾಜ್ಯ ) ಜಿಲ್ಲೆ

ಸಮಾನತೆ ಸಾರಿದ ವಚನಕಾರ ದಾಸಿಮಯ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ಪರೋಪಕಾರವನ್ನೇ ಜೀವನವನ್ನಾಗಿಟ್ಟುಕೊಂಡು ಬದುಕುವ ಆದರ್ಶ ಪುರುಷರಲ್ಲಿ ಜೇಡರ ದಾಸಿಮಯ್ಯ ಪ್ರಮುಖರಾಗಿದ್ದಾರೆ. ಮಹಿಳಾ ಸಮಾನತೆ, ಅಸ್ಮಿತೆಯ ಬಗ್ಗೆ ತನ್ನ ವಚನದ ಮೂಲಕವೇ ತಿಳಿಸಿದ ಶ್ರೇಷ್ಠ ವಚನಕಾರರಾಗಿದ್ದು, ಆತ್ಮಕ್ಕೆ ಯಾವುದೇ ಜಾತಿ, ಲಿಂಗ ಭೇದವಿಲ್ಲವೆಂದು ಅಂದಿನ ಕಾಲದಲ್ಲಿಯೇ ತಿಳಿಸಿದ ವಚನಕಾರ ಎಂದು ಮೈಂದರಗಿ ಗುರು ಹಿರೇಮಠದ ರೇವಣಸಿದ್ಧ ಪಟ್ಟದದೇವರು ಹೇಳಿದರು.
ಪಟ್ಟಣದಲ್ಲಿ ಆಯೋಜಿಸಲಾದ ದೇವರದಾಸೀಮಯ್ಯ ಜಯಂತಿಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಸಾಹಿತಿ ಹಾಗೂ ಸಮುದಾಯದ ಹಿರಿಯ ಮುಖಂಡ ಬಸವರಾಜ ಯಂಕಂಚಿ ಮಾತನಾಡಿ, ಬಸವಣ್ಣ, ದೇವರದಾಸಿಮಯ್ಯ ಹೀಗೆ ಅನೇಕ ವಚನಕಾರರು ತಮ್ಮ ಕಾಲದಲ್ಲಿಯೇ ಮಹಿಳೆ ಮತ್ತು ಪುರುಷರಿಗೆ ಸಮಾನ ಹಕ್ಕು ನೀಡಿದರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದರು. ದೇವರ ದಾಸಿಮಯ್ಯ ಅವರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತವೆ. ಜೀವನದ ಅನುಭವ ಅವರ ವಚನಗಳಲ್ಲಿವೆ. ಜಯಂತಿ ಆಚರಿಸುವ ಮೂಲಕ ಅವರ ಬದುಕಿನ ಅನೇಕ ಮಜಲುಗಳನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಎಂದರು.
ಮೈoದರಗಿ ವಿರಕ್ತ ಮಠದ ಮೃತ್ಯುಂಜಯ ಮಹಾಸ್ವಾಮೀಜಿ ಮಾತನಾಡಿ,
ಮಾನವ ಕುಲಕ್ಕೆ ಸನ್ಮಾರ್ಗವನ್ನು ತಮ್ಮ ವಚನಗಳ ಮೂಲಕ ತೋರಿಸಿದ ಆದ್ಯ ವಚನಕಾರ ದೇವರ ದಾಸಿಮಯ್ಯ ಸರ್ವ ಸಮುದಾಯಗಳಿಗೆ ಮಾದರಿಯಾಗಿದ್ದಾರೆ ಎಂದರು.
ಕಾರ್ಯಕ್ರಮದ ಮುಂಚೆ ಹೂವಿನಿಂದ ಅಲಂಕಾರಗೊಂಡ ದೇವರದಾಸೀಮಯ್ಯ ಭಾವಚಿತ್ರದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ನಡೆಯಿತು.
ಗುರುಪಾದಪ್ಪಾ ಜೀರಂಕಲಗಿ, ಗಂಗಾಧರ ಭಂಡಾರಕವಟೆ, ಮಲ್ಲಿಕಾರ್ಜುನ ಭಂಡಾರಕವಟೆ, ಮಹದೇವ ಯಂಕಂಚಿ, ದಯಾನಂದ ಕಟಗೇರಿ, ಮಚಣ್ಣ ಮೇತ್ರಿ, ಮಲ್ಲಪ್ಪ ಭಂಡಾರಕವಟೆ, ರಾಮ ಮಲಾಪುರ, ಮಲ್ಲು ಉಮರಾಣಿ, ಮಲ್ಲು ಹಿಟ್ನಳ್ಳಿ, ಬಸವರಾಜ ಭಂಡರಕವಟೆ, ಸಂತೋಷ ದಟ್ಟಿ, ಬಸವರಾಜ ಉಮರಾಣಿ, ಜಗದೀಶ ಭಂಡಾರಕವಟೆ, ಬಸವರಾಜ ಬಿರಾದಾರ, ವಿವೇಕಾನಂದ ಹಿಟ್ನಳ್ಳಿ, ಶ್ರೀಶೈಲ ಉಮರಾಣಿ, ರಾಜಶೇಖರ ಡೊಣಗಂವ, ದುಂಡಪ್ಪ ಬರಗಾಲಿ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.
ಶಿಕ್ಷಕ ಬಸವರಾಜ ಅಂಕದ ನಿರೂಪಿಸಿದರು. ಶ್ರೀಶೈಲ ಉಮರಾಣಿ ಸ್ವಾಗತಿಸಿದರು.

BIJAPUR NEWS CHADACHAN udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.