Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಸರ್ಕಾರದ ಬಗ್ಗೆ ಜನತೆಗೆ ಭ್ರಮನಿರಸನ :ಶಹಾಪೂರ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಸರ್ಕಾರದ ಬಗ್ಗೆ ಜನತೆಗೆ ಭ್ರಮನಿರಸನ :ಶಹಾಪೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಎಐಸಿಸಿ ಧುರೀಣ ರಾಹುಲ್ ಗಾಂಧಿ ವಿಜಯಪುರಕ್ಕೆ ಬಂದಾಗ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರೇ ಆ ಸಭೆಯಲ್ಲಿ ಇರಲಿಲ್ಲ, ಅವರ ಫೋಟೋ ಸಹ ಬ್ಯಾನರನಲ್ಲಿ ಅಲ್ಲಿರಲಿಲ್ಲ, ರಾಹುಲ್ ಗಾಂಧೀ ಆಲಗೂರ ಅವರ ಹೆಸರು ಸಹ ಉಲ್ಲೇಖಿಸಿ ಮತಯಾಚಿಸಲಿಲ್ಲ, ಪ್ರಚಾರ ಸಭೆಗೆ ಅಭ್ಯರ್ಥಿಯನ್ನೇ ಆಹ್ವಾನಿಸದೆ ಕಾಂಗ್ರೆಸ್ ಈಗಾಗಲೇ ಸೋಲು ಒಪ್ಪಿಕೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಹೇಳಿದರು.
ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಾಲಿ ಶಾಸಕರಾಗಿದ್ದ ಪ್ರೊ.ರಾಜು ಆಲಗೂರ ಅವರಿಗೆ ಕಾಂಗ್ರೆಸ್ ಪಕ್ಷ 2018 ರಲ್ಲಿ ಟಿಕೆಟ್ ಏಕೆ ನಿರಾಕರಣೆ ಮಾಡಿತು? 2024 ರ ಚುನಾವಣೆಯಲ್ಲಿಯೂ ಸಹ ಅವರಿಗೆ ಕಾಂಗ್ರೆಸ್ ಟಿಕೇಟ್ ನಿರಾಕರಣೆ ಮಾಡಿತ್ತು, ಈಗ ಲೋಕಸಭೆಗೆ ಯಾರೊಬ್ಬರು ಅಭ್ಯರ್ಥಿಯೇ ಕಾಂಗ್ರೆಸ್ ಬಳಿ ಇರದ್ದರಿಂದ ಅನಿವಾರ್ಯವಾಗಿ ಆಲಗೂರ ಅವರ ಕೊರಳಿಗೆ ಈ ಜವಾಬ್ದಾರಿ ವಹಿಸಿದೆ ಎಂದರು.
ಈ ಹಿಂದೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡಿದ ಗುತ್ತಿಗೆದಾರರು ಸಹ ಈ ಸರ್ಕಾರದ ಮೇಲೆ ಅಸಮಾಧಾನಗೊಂಡು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕಾಮಗಾರಿಗೆ ಲೋಕಾರ್ಪಣೆ ಮಾಡುವಲ್ಲಿ ಅಷ್ಟೇ ಏಕೆ, ಶಾಸಕರಿಗೆ ಪ್ರದೇಶಾಭಿವೃದ್ಧಿ ನಿಧಿ ಅನುದಾನ ನೀಡುವಲ್ಲಿಯೂ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್ ಶಾಸಕರಲ್ಲಿಯೇ ಅತೃಪ್ತಿ ಪ್ರಬಲವಾಗಿದೆ ಎಂದು ದೂರಿದರು.
ನೇತೃತ್ವದ ಬಗ್ಗೆ ಉತ್ತರ ನೀಡಲು ಸಾಧ್ಯವಿಲ್ಲದ ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಅಭ್ಯರ್ಥಿಯೇ ಇಲ್ಲದಂತಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಮೋದಿಜಿ ಅವರ ಅಖಂಡ ನೇತೃತ್ವ ಬಿಜೆಪಿ ಹೆಗಲಿದೆ ಇದೆ. ಕಳೆದ ವಿಧಾನಸಭಾ ಗೆಲುವಿನ ಗುಂಗಿನಿಂದ ಕಾಂಗ್ರೆಸ್ ಇನ್ನೂ ಹೊರಬಂದಿಲ್ಲ. ಇದೇ ಗುಂಗಿನಲ್ಲಿ ಲೋಕಸಭೆಯನ್ನೂ ಜಯಿಸುವ ಭ್ರಮೆ ಕಾಂಗ್ರೆಸ್ ಪಕ್ಷದಲ್ಲಿದೆ, ಒಂದು ರೀತಿ ಈ ಭ್ರಮೆ ಹೊರತುಪಡಿಸಿ ಯಾವ ರೀತಿಯ ಬತ್ತಳಿಕೆಯೂ ಇಲ್ಲ. ಕೇವಲ ಮೋದಿಜಿ ಅವರನ್ನು ತೆಗಳುವುದೊಂದಕ್ಕೆ ಕಾಂಗ್ರೆಸ್ ಸೀಮಿತವಾಗಿದೆ ಎಂದು ಶಹಾಪೂರ ಹೇಳಿದರು.
ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯಡಿಯಲ್ಲಿ ಅನೇಕ ಜನರಿಗೆ ಆಗಿರುವ ಅನ್ಯಾಯವನ್ನು ನಾವು ಸಮರ್ಥವಾಗಿ ಬಿಂಬಿಸಿದ್ದೇವೆ. ಒಂದೇ ವರ್ಷದಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಮನಿರಸನವಾಗಿದೆ ಎಂದು ಅರುಣ ಶಹಾಪೂರ ನುಡಿದರು.

65 ಮಹಾಶಕ್ತಿ ಕೇಂದ್ರಗಳಲ್ಲಿ ಪ್ರಚಾರ

ಬಿಜೆಪಿ ಪ್ರಚಾರ ಸಾಗಿ ಬಂದಿರುವ ಕುರಿತಾಗಿಯೂ ವಿವರಣೆ ನೀಡಿದ ಶಹಾಪೂರ, ಭಾರತೀಯ ಜನತಾ ಪಕ್ಷ ಜಿಲ್ಲೆಯಲ್ಲಿ ಒಟ್ಟು 65 ಮಹಾಶಕ್ತಿ ಕೇಂದ್ರಗಳಲ್ಲಿ ಯಶಸ್ವಿ ಪ್ರಚಾರ ನಡೆಸಿದೆ, ಪಾದಯಾತ್ರೆ, ಬಹಿರಂಗ ಸಭೆ ಹಾಗೂ ಈ ಬಾರಿ ಔಪಚಾರಿಕ ಮತಯಾಚಿಸುವ ಕಟ್ಟೆ ಸಭೆಗಳ ಮೂಲಕ ಮತಯಾಚಿಸುವ ವಿಭಿನ್ನ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಲಾಗಿದೆ, ಈ ಕಟ್ಟೆ ಸಭೆಯಲ್ಲಿ ರಾಷ್ಟ್ರೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು,100 ಕ್ಕೂ ಹೆಚ್ಚು ಕಟ್ಟೆಸಭೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ, ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಕಳೆದ ಬಾರಿಗಿಂತ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಶತಸಿದ್ಧ ಎಂದು ಭವಿಷ್ಯ ನುಡಿದರು.
ಬಿಜೆಪಿ ಮುಖಂಡರಾದ ಸಂಜಯ ಪಾಟೀಲ ಕನಮಡಿ, ಶಂಕರಗೌಡ ಪಾಟೀಲ, ಭರತ ಕೋಳಿ, ಕೃಷ್ಣಾ ಗುನ್ನಾಳಕರ, ರವಿ ವಗ್ಗೆ, ವಿಜಯ ಜೋಶಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.