Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಸ್ತೆ ಕಾಮಗಾರಿಗಾಗಿ ಮರಗಳ ಮಾರಣಹೋಮ :ಸಾರ್ವಜನಿಕರ ಅಸಮಾಧಾನ
(ರಾಜ್ಯ ) ಜಿಲ್ಲೆ

ರಸ್ತೆ ಕಾಮಗಾರಿಗಾಗಿ ಮರಗಳ ಮಾರಣಹೋಮ :ಸಾರ್ವಜನಿಕರ ಅಸಮಾಧಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಅಭಿವೃದ್ಧಿಯ ಹೆಸರಲ್ಲಿ ರಸ್ತೆ ಕಾಮಗಾರಿಗಾಗಿ ಎಡ ಬಲಗಳಲ್ಲಿಯ ಮರಗಳ ಮಾರಣಹೋಮ ನಡೆಯುತ್ತಿದ್ದರೂ ಕಂಡು ಕಾಣದಂತಿರುವ ಅರಣ್ಯ ಇಲಾಖೆಯ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಇಂಡಿ ರಸ್ತೆಯಲ್ಲಿ ದ್ವಿಪಥ ರಸ್ತೆಗಾಗಿ ಕಾಮಗಾರಿ ಆರಂಭಿಸಲಾಗಿದ್ದು, ರಸ್ತೆ ಬದಿಯ ಚರಂಡಿ ನಿರ್ಮಾಣಕ್ಕಾಗಿ ಅಂಬೇಡ್ಕರ್ ವೃತ್ತದಿಂದ ಕೆಇಬಿವರೆಗಿನ ಎಡಬಲಗಳಲ್ಲಿನ ಹತ್ತು ವರ್ಷಗಳ ಹಿಂದೆ ನೆಟ್ಟ ೧೦೦ ಕ್ಕೂ ಹೆಚ್ಚು ಮರಗಳನ್ನು ಬೇರು ಸಮೇತ ಕಿತ್ತುಹಾಕಲಾಗಿದೆ. ಸಾಮಾನ್ಯವಾಗಿ ಅಭಿವೃದ್ಧಿ ಕಾರ್ಯಗಳಿಗೆ ಮರಗಳ ತೆರವು ಕಾರ್ಯಕ್ಕೆ ಅರಣ್ಯ ಇಲಾಖೆಯ ಅನುಮತಿ ಬೇಕು. ಆದರೆ ಇಲ್ಲಿ ಅರಣ್ಯ ಇಲಾಖೆಯ ಗಮನ ತಂದು ಮರಗಳನ್ನು ಕಡಿತಗೊಳಿಸಲಾಗಿದೆಯೋ ಹೇಗೆ ಎಂಬುದರ ಕುರಿತು ಮಾಹಿತಿಯಿಲ್ಲ.
ಒಂದೆಡೆ ದಿನದಿಂದ ದಿನಕ್ಕೆ ಕಾಡು ಬೆಳೆಸಿ, ನಾಡು ಉಳಿಸಿ, ಮನೆಗೊಂದು ಮರ ಬೆಳೆಸಿ ಎಂಬ ಘೋಷಣೆಗಳೊಂದಿಗೆ ಪರಿಸರ ಉಳಿವಿಗಾಗಿ ಜಾಗೃತಿ ಮೂಡಿಸಲಾಗುತ್ತಿದ್ದರೇ, ಇಲ್ಲಿ ಮಾತ್ರ ಮರಗಳ ಜಾಗೃತಿ ಬದಲು ದುರ್ಗತಿ ಎನ್ನುವಂತಾಗಿದೆ. ತಾಪಮಾನದ ಹೆಚ್ಚಳ, ಆಮ್ಲಜನಕದ ಕುಸಿತ, ಬಿಸಿಗಾಳಿ ಬಿಸುವಿಕೆ, ಮಳೆಪ್ರಮಾಣದಲ್ಲಿ ಇಳಿಕೆಯಂತ ಎಚ್ಚರಿಕೆಗಳ ನಡುವೆಯೂ ಪಟ್ಟಣದ ಮರಗಳನ್ನು ಬೇಕಾಬಿಟ್ಟಿಯಾಗಿ ಕಡಿಯುತ್ತಿರುವುದು ಅತ್ಯಂತ ನಿರ್ಲಕ್ಷö್ಯ ನಡೆ. ಒಂದು ಸಸಿಗೆ ನೀರುಣಿಸಿ ಮರವಾಗಿ ಬೆಳೆಸುವುದರ ಹಿಂದಿನ ಶ್ರಮ ಎಂಥದ್ದು ಎಂಬುವುದು ಕೇವಲ ಮರಗಳನ್ನು ನೆಟ್ಟು ಬೆಳೆಸಿದವರಿಗೆ ಗೊತ್ತು. ಆದರೆ ಈಗ ನಿಷ್ಕರುಣೆಯಿಂದ ಅಗತ್ಯಕ್ಕಿಂತ ಹೆಚ್ಚಾಗಿ ಮರಗಳನ್ನು ಕತ್ತರಿಸಿರುವುದು ಅಕ್ಷರಶ ತಪ್ಪು. ಆದ್ದರಿಂದ ಕೂಡಲೇ ರಸ್ತೆ, ಚರಂಡಿ ನಿರ್ಮಾಣದ ನಂತರ ಅಂಬೇಡ್ಕರ್ ವೃತ್ತದಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಎಡಬಲಗಳಲ್ಲಿ ನೂರಕ್ಕೂ ಅಧಿಕ ಸಸಿಗಳನ್ನು ನೆಡಲು ಕ್ರಮ ವಹಿಸಬೇಕು. ಜೊತೆಗೆ ಮುಖ್ಯವಾಗಿ ಹೆಸ್ಕಾಂಇಲಾಖೆ ಅನಗತ್ಯವಾಗಿ ಗಿಡ ಮರಗಳಿಗೆ ಕೊಡಲಿಯೇಟು ಹಾಕದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ರಮೇಶ ಮಸಬಿನಾಳ, ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ನಾಗೇಂದ್ರ ಇಂಡಿ, ನಜೀರ್ ಕಲಕೇರಿ, ಸೋಮು ಸೊನ್ನದ ಸೇರಿದಂತೆ ಹಲವು ಪರಿಸರ ಪ್ರೀಯರ ಆಗ್ರಹವಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026
    In ದಿನಪತ್ರಿಕೆ
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.