ದೇವರಹಿಪ್ಪರಗಿ: ರಸ್ತೆ ಪಕ್ಕ ನಿಂತಿದ್ದ ಲಾರಿಯ ಹಿಂಬದಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಅಫಘಾತ ಸಂಭವಿಸಿರುವ ಘಟನೆ ಪಟ್ಟಣದಲ್ಲಿ ಜರುಗಿದೆ.
ಪಟ್ಟಣದಲ್ಲಿ ಭಾನುವಾರ ಈ ಘಟನೆ ಸಂಭವಿಸಿದ್ದು, ಪಟ್ಟಣದ ಪಾಟೀಲ ಪೆಟ್ರೋಲ್ ಪಂಪ್ ಹತ್ತಿರ ನಿಂತಿದ್ದ ಲಾರಿಯ ಹಿಂಬದಿಗೆ ವಿಜಯಪುರದಿಂದ ಕಲಬುರ್ಗಿಗೆ ತೆರಳುತ್ತಿದ್ದ ಕೆಎ-೩೨ ಎಫ್ ೨೬೨೬ ಸಂಖ್ಯೆಯ ಬಸ್ ಅಪ್ಪಳಿಸಿದ ಪರಿಣಾಮ ಬಸ್ನಲ್ಲಿ ಇದ್ದ ಪ್ರಯಾಣಿಕರಲ್ಲಿ ನಾಲ್ವರು ಮಹಿಳೆಯರು ಗಾಯಗೊಂಡಿದ್ದಾರೆ.
ಅಫಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ಪೊಲೀಸರು ಹೆಚ್ಚಿನ ಗಾಯಗಳಿಂದ ನರಳುತ್ತಿದ್ದ ಗಬಸಾವಳಗಿ ಗ್ರಾಮದ ಮಹಿಳೆಗೆ ತಕ್ಷಣವೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಪರಿಣಾಮ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಚಾಲಕನ ಅಜಾಗರೂಕ ಚಾಲನೆಯೇ ಅಫಘಾತಕ್ಕೆ ಮೂಲಕಾರಣ ಎಂದು ಪ್ರಯಾಣಿಕರು ಹಾಗೂ ಪ್ರತ್ಯಕ್ಷದರ್ಶಿಗಳು ದೂರುವುದು ಕಂಡು ಬಂತು.
Subscribe to Updates
Get the latest creative news from FooBar about art, design and business.
Related Posts
Add A Comment

