Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಾರದರ್ಶಕ ಮತದಾನ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ :ಗಂಗಪ್ಪ ಎಂ.
(ರಾಜ್ಯ ) ಜಿಲ್ಲೆ

ಪಾರದರ್ಶಕ ಮತದಾನ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ :ಗಂಗಪ್ಪ ಎಂ.

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಸಾರ್ವತ್ರಿಕ ಲೋಕಸಭಾ ಚುನಾವಣೆಯಂಗವಾಗಿ ಮೇ. ೭ ರಂದು ನಡೆಯಲಿರುವ ಮತದಾನಕ್ಕೆ ಯಾವುದೇ ತೊಂದರೆಯಾಗದಂತೆ ಅಚ್ಚುಕಟ್ಟಾಗಿ ಶೇ.೧೦೦ ರಷ್ಟು ಮತದಾನದ ಗುರಿಯೊಂದಿಗೆ ಮತದಾನ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಈಗಾಗಲೇ ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ, ಆಲಮಟ್ಟಿ ವಿಶೇಷ ಭೂಸ್ವಾಧಿನಾಧಿಕಾರಿ ಗಂಗಪ್ಪ ಎಂ. ಹೇಳಿದರು.
ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿರುವ ಸಹಾಯಕ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವನಬಾಗೇವಾಡಿ ಮತಕ್ಷೇತ್ರವು ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ ಮೂರು ತಾಲೂಕುಗಳನ್ನು ಒಳಗೊಂಡಿದೆ. ಈ ಮತಕ್ಷೇತ್ರದಲ್ಲಿ ೧೨೨ ಸ್ಥಳದಲ್ಲಿ ೨೩೦ ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮತಕ್ಷೇತ್ರದಲ್ಲಿ ೧,೧೦,೨೪೬ ಪುರುಷ ಮತದಾರರು, ೧,೦೭,೩೦೭ ಮಹಿಳಾ ಮತದಾರರು, ೧೫ ಇತರೆ ಮತದಾರರು ಸೇರಿ ಒಟ್ಟು ೨,೧೭,೫೬೮ ಮತದಾರರು ಇದ್ದಾರೆ. ಕ್ಷೇತ್ರದಲ್ಲಿ ೨೧ ಸೆಕ್ಟರ್ಗಳನ್ನಾಗಿ ವಿಂಗಡಿಸಲಾಗಿದೆ. ೨೩೦ ಮತಗಟ್ಟೆಗಳಲ್ಲಿ ೮ ವಿಶೇಷ ಮತಗಟ್ಟೆ ಎಂದು ಗುರುತಿಸಿಲಾಗಿದೆ. ೧೧೫ ಮತಗಟ್ಟೆಗಳಿಗೆ ವೆಬ್ ಕ್ಯಾಮರಾ ಅಳವಡಿಸಲಾಗಿದೆ. ೧೦ ಮತಗಟ್ಟೆಗಳಿಗೆ ವಿಡಿಯೋ ಗ್ರಾಫರ್, ೧೧ ಮತಗಟ್ಟೆಗಳಿಗೆ ಮೈಕ್ರೊಅಬ್ಸರವರ್ ನೇಮಕ ಮಾಡಲಾಗಿದೆ. ಅವಶ್ಯಕತೆ ಕಂಡು ಬಂದಿರುವ ೬೨ ಮತಗಟ್ಟೆಗಳಲ್ಲಿ ಮತದಾರರಿಗಾಗಿ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ. ಮತದಾರರಿಗೂ ಕುಡಿಯುವ ನೀರು, ನೆರಳಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಜರುಗಿದ ಘಟನೆಯನ್ನು ಸ್ಮರಿಸಿಕೊಂಡು ಇಂತಹ ಘಟನೆಗಳು ಚುನಾವಣೆಯ ಸಂದರ್ಭದಲ್ಲಿ ನಡೆಯದಂತೆ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ೨೧ ಸೆಕ್ಟರ್ ಅಽಕಾರಿಗಳ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ಈ ವಾಹನಕ್ಕೆ ಅಗತ್ಯ ಭದ್ರತೆ ಸಹ ಒದಗಿಸಲಾಗುತ್ತಿದೆ. ಮತದಾನ ದಿನದಂದು ವಿದ್ಯುನ್ಮಾನ ಮಂತ್ರದಲ್ಲಿ ಏನಾದರೂ ದೋಷ ಕಂಡುಬಂದರೆ ತ್ವರಿತವಾಗಿ ದುರಸ್ತಿ ಮಾಡಲು ಇಬ್ಬರು ಅಭಿಯಂತರರನ್ನು ನಿಯೋಜನೆ ಮಾಡಿದೆ. ಚುನಾವಣೆಗೆ ನಿಯುಕ್ತರಾದ ೧೧೨೦ ಸಿಬ್ಬಂದಿಗಳಿಗೆ ಎರಡು ಹಂತದಲ್ಲಿ ತರಬೇತಿ ನೀಡಲಾಗಿದೆ. ಮತಗಟ್ಟೆ ಕೇಂದ್ರಗಳಲ್ಲಿ ಚುನಾವಣೆ ಸಿಬ್ಬಂದಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಈಗಾಗಲೇ ಕ್ಷೇತ್ರದಲ್ಲಿ ಚುನಾವಣೆಗೆ ನಿಯುಕ್ತಿಗೊಂಡ ೨೧೪೦ ಸಿಬ್ಬಂದಿಗಳು ಅಂಚೆ ಪತ್ರದ ಮೂಲಕ ಮತದಾನ ಮಾಡಿದ್ದಾರೆ. ಈಗಾಗಲೇ ಮನೆಯಿಂದ ಮತದಾನ ಪ್ರಕ್ರಿಯೆಯಲ್ಲಿ ೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷ ಚೇತನರ ಒಟ್ಟು ೪೫೫ ಮತದಾರರಲ್ಲಿ ೪೨೪ ಮತದಾರರು ಮತ ಚಲಾಯಿಸಿದ್ದಾರೆ. ೪೫೫ ಮತದಾರರಲ್ಲಿ ೬ ಜನ ಮೃತರಾಗಿದ್ದಾರೆ. ಗೈರು ಉಳಿದ ಮತದಾರರ ಮನೆಗೆ ಎರಡು ಸಲ ಸಿಬ್ಬಂದಿಗಳು ಭೇಟಿ ನೀಡಿದರೂ ಅವರು ಲಭ್ಯವಾಗದೇ ಇರುವದರಿಂದಾಗಿ ಅವರ ಮತದಾನವಾಗಿಲ್ಲ ಎಂದರು.
ಚುನಾವಣೆ ಬಹಿರಂಗ ಪ್ರಚಾರ ಭಾನುವಾರ ಸಂಜೆ ಮುಕ್ತಾಯವಾಗಲಿದೆ. ಕ್ಷೇತ್ರದಲ್ಲಿ ಈ ಕ್ಷೇತ್ರದ ಮತದಾರರು ಅಲ್ಲದವರು ಕ್ಷೇತ್ರದಲ್ಲಿ ಇರುವಂತಿಲ್ಲ. ಅಂತಹ ಮತದಾರರು ಕ್ಷೇತ್ರಕ್ಕೆ ಬಿಟ್ಟು ಹೋಗುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.
ಮತದಾನ ಕೇಂದ್ರಕ್ಕೆ ಮತದಾನ ಸಿಬ್ಬಂದಿಗಳನ್ನು ತಲುಪಿಸಲು ಒಟ್ಟು ೪೯ ಮಾರ್ಗಗಳಿಗೆ ೨೮ ಬಸ್, ೨೧ ಕ್ರೂಸರ್ಗಳನ್ನು ಬಳಕೆ ಮಾಡಲಾಗುತ್ತಿದೆ. ಪ್ರಖರ ಬಿಸಿಲು ಇರುವದರಿಂದಾಗಿ ಪ್ರತಿ ಮತಗಟ್ಟೆಯ ಸಿಬ್ಬಂದಿಗಳ ಆರೋಗ್ಯದ ಯೋಗಕ್ಷೇಮಕ್ಕಾಗಿ ಪ್ರತಿ ಮತಗಟ್ಟೆಗೆ ಒರ್ವ ಆರೋಗ್ಯ ಸಿಬ್ಬಂದಿಯನ್ನು ಆರೋಗ್ಯದ ಕಿಟ್ನೊಂದಿಗೆ ನಿಯೋಜನೆ ಮಾಡಲಾಗಿದೆ. ಮಸ್ಟರಿಂಗ್, ಡಿ-ಮಸ್ಟರಿಂಗ್ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿಗಳು ಇರಲಿದ್ದಾರೆ. ಮತದಾನ ಸಾಮಗ್ರಿ ಪಡೆಯುವ ದಿನ ಮತದಾನ ಸಿಬ್ಬಂದಿಗಳ ಮಕ್ಕಳ ಆರೈಕೆಗಾಗಿ ಸಿಡಿಪಿಓ ಇಲಾಖೆಯ ಸಹಯೋಗದೊಂದಿಗೆ ಡೇ-ಕೇರ್ ಕೇಂದ್ರವನ್ನು ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗೆ ನಿಯೋಜನೆ ಮಾಡಿದ ಸಿಬ್ಬಂದಿಗಳಿಗೆ ಮತದಾನ ಮುನ್ನ ದಿನ, ಮತದಾನದ ದಿನ ಅಕ್ಷರದಾಸೋಹ ಸಿಬ್ಬಂದಿಗಳಿಂದ ಉಪಹಾರ, ಊಟ, ಶುದ್ಧ ಕುಡಿಯವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮಸ್ಟರಿಂಗ್, ಡಿ-ಮಸ್ಟರಿಂಗ್ ಬಸವನಬಾಗೇವಾಡಿಯ ಬಸವೇಶ್ವರ ಸರ್ಕಾರಿ ಪಪೂ ಕಾಲೇಜಿನಲ್ಲಿ ನಡೆಯಲಿದೆ ಎಂದರು.
ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಮಾತನಾಡಿ, ಮತದಾನ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಅಗತ್ಯ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ. ಮತದಾನ ದಿನದಂದು ಒರ್ವ ಡಿವೈಎಸ್ಪಿ, ಮೂವರು ಪಿಐ, ೧೨ ಪಿಎಸ್ಐ, ೩೩೦ ಸಿಬ್ಬಂದಿಗಳು, ಒಂದು ಸಿಎಪಿಎಫ್ ವಾಹನ, ಒಂದು ಕೆಎಸ್ಆರ್ಫಿ ವಾಹನದ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದರು.
ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಮತದಾನ ಮಾಡಲು ಮತದಾರರ ಗುರುತಿನ ಚೀಟಿ ಸೇರಿದಂತೆ ಚುನಾವಣೆ ಆಯೋಗ ಸೂಚಿಸಿರುವ ೧೨ ದಾಖಲೆಗಳಲ್ಲಿ ಒಂದಾದರೂ ದಾಖಲೆಯೊಂದಿಗೆ ಮತದಾರರು ಬಂದು ಮತದಾನ ಮಾಡಬೇಕು. ಯಾವುದೇ ಕಾರಣಕ್ಕೂ ಮತಗಟ್ಟೆಗಳಿಗೆ ಮೊಬೈಲ್ ಮತದಾರರು ತರುವಂತಿಲ್ಲ. ಯಶಸ್ವಿ ಮತದಾನವಾಗಲು ಎಲ್ಲರ ಸಹಕಾರ ಅಗತ್ಯವಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕೊಲ್ಹಾರ ತಹಸೀಲ್ದಾರ ಎಸ್.ಎಸ್.ನಾಯಕಲಮಠ, ತಾಲೂಕು ಪಂಚಾಯಿತಿ ಪ್ರಭಾರಿ ಇಓ, ತಾಲೂಕು ಸ್ಪೀಪ್ ಸಮಿತಿ ಅಧ್ಯಕ್ಷ ಪ್ರಕಾಶ ದೇಸಾಯಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.