ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮಹಾಸಂಪರ್ಕ ಅಭಿಯಾನ ಅಂಗವಾಗಿ ವಿಜಯಪುರ ಮಹಾನಗರ ಪಾಲಿಕೆ 33 ನೇ ವಾರ್ಡ್ ಭವಾನಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಪರ ಭರ್ಜರಿ ಪ್ರಚಾರ ನಡೆಸಿದರು.
ವಿಜಯಪುರ ನಗರದ ವಾರ್ಡ್ ನಂ. 33 ನೇ ವಾರ್ಡಿನ ಶಾಸ್ತ್ರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕಳೆದ ಹತ್ತು ವರ್ಷಗಳ ಸಾಧನೆಗಳು, ಜನಪರ ಯೋಜನೆಗಳು, ದೇಶದಲ್ಲಾದ ಸಕಾರಾತ್ಮಕ ಬದಲಾವಣೆಗಳ ಜೊತೆಗೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಮತಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡಿಕೊಟ್ಟು, ವಿಕಸಿತ ಭಾರತದ ಸಂಕಲ್ಪದೊಂದಿಗೆ ದೇಶವಾಸಿಗಳ ರಕ್ಷಣೆಗೆ ಪಣತೊಟ್ಟಿರುವ ಪ್ರಧಾನಿ ಮೋದಿಯವರ ನೇತೃತ್ವದ ಬಿಜೆಪಿ ಪಕ್ಷಕ್ಕೆ ಬೆಂಬಲಿಸಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ್ತೊಮ್ಮೆ ಆಶಿರ್ವದಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು. ಪ್ರತಿ ಮನೆಗಳಲ್ಲಿ ಸಿಕ್ಕ ಅದ್ಬುತ ಸ್ಪಂದನೆ ಹಾಗೂ ಬೆಂಬಲದಾಯಕ ಮಾತುಗಳು ಕಾರ್ಯಕರ್ತರ ಚುನಾವಣಾ ಪ್ರಚಾರದ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದ್ದವು.
Subscribe to Updates
Get the latest creative news from FooBar about art, design and business.
Related Posts
Add A Comment

