Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣ ಮತ್ತು ಸಂಸ್ಕಾರ ಉತ್ತಮ ಬದುಕು ರೂಪಿಸಬಲ್ಲದು
(ರಾಜ್ಯ ) ಜಿಲ್ಲೆ

ಶಿಕ್ಷಣ ಮತ್ತು ಸಂಸ್ಕಾರ ಉತ್ತಮ ಬದುಕು ರೂಪಿಸಬಲ್ಲದು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಶಿಕ್ಷಣದಿಂದ ಮಾತ್ರ ಈ ದೇಶ ಬಲಿಷ್ಠವಾಗಲಿದೆ. ಯೋಗ್ಯ ಶಿಕ್ಷಣ ಮತ್ತು ಸಂಸ್ಕಾರ ನಮ್ಮ ಬದುಕನ್ನೇ ಉತ್ತಮವಾಗಿ ರೂಪಿಸಬಲ್ಲದು ಎಂದು ಶ್ರೀಶೈಲ ಪೀಠದ ಪರಮ ಪೂಜ್ಯ ಜಗದ್ಗುರು ಡಾ.ಚೆನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.
ತಾಲೂಕಿನ ಕನ್ನೋಳ್ಳಿ ಹಿರೇಮಠದ ಶ್ರೀಜಗದುರು ದಾರುಕಾಚಾರ್ಯರ ಜಾತ್ರಾ ಮಹೋತ್ಸವ ಮತ್ತು ಲಿಂ.ಶ್ರೀ ಮರುಳಾರಾಧ್ಯ ಶಿವಾಚಾರ್ಯರ ೧೧೦ ನೇ ಜಯಂತ್ಯುತ್ಸವದ ನಿಮಿತ್ಯ ಶ್ರೀ ಸಿದ್ದಲಿಂಗೇಶ್ವರ ಜ್ಞಾನಜ್ಯೋತಿ ವಿದ್ಯಾಪ್ರಸಾರ ಸಂಘದ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮಾತೋಶ್ರೀ ಬಸಲಿಂಗಮ್ಮ ಭಾಳಪ್ಪ ಭೂಸನೂರ ಕಲಾ, ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನವನನ್ನು ಮಹಾದೇವನನ್ನಾಗಿ ಪರಿವರ್ತಿಸುವ ಮಹಾಶಕ್ತಿ ಶಿಕ್ಷಣಕ್ಕೆ ಇದೆ. ಪ್ರತಿಯೊಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡಿದ್ದಲ್ಲಿ ಭಾರತ ಜಗತ್ತಿಗೆ ದೊಡ್ಡ ಶಕ್ತಿಯಾಗಿ ಹೊರ ಹೊಮ್ಮಲಿದೆ ಎಂದ ಅವರು ಲಿಂ.ಮರುಳಾರಾಧ್ಯ ಶಿವಾಚಾರ್ಯರು ಸದಾ ಭಕ್ತರ ಕಲ್ಯಾಣವನ್ನು ಬಯಸಿ ಅವರ ಮುಖದಲ್ಲಿಯೇ ಪರಮಾತ್ಮನನ್ನು ಕಂಡಂತವರು. ಧಾರ್ಮಿಕ ಸಂಸ್ಕಾರ, ಸಾಮಾಜಿಕ ಪ್ರಜ್ಞೆಯನ್ನು ಭಕ್ತರಲ್ಲಿ ಮೂಡಿಸಿ ಜನಮಾನಸದಲ್ಲಿ ಚಿರಸ್ಥಾಯಿಯಾದವರು ಎಂದರು.
ಈ ವೇಳೆ ಭಂಥನಾಳದ ಪೂಜ್ಯ ಶ್ರೀ ವೃಷಬಲಿಂಗ ಮಹಾಸ್ವಾಮಿಗಳು ಮಾತನಾಡಿ, ಕನ್ನೋಳ್ಳಿಯ ಹಿರೇಮಠದ ಧಾರ್ಮಿಕ ಮತ್ತು ಶಿಕ್ಷಣದ ಕಾರ್ಯ ನಿರಂತರವಾಗಿದೆ. ಭಂಥನಾಳದ ಲಿಂ.ಸಂಗನಬಸವೇಶ್ವರ ಮಹಾಸ್ವಾಮಿಗಳು ಜೋಳಿಗೆ ಹಿಡಿದು ಈ ಭಾಗದಲ್ಲಿ ಶಿಕ್ಷಣದ ಪ್ರಸಾರ ಮಾಡದೇ ಇದ್ದಲ್ಲಿ ಈ ಭಾಗ ಅತ್ಯಂತ ಹಿಂದುಳಿದ ಪ್ರದೇಶವಾಗುತ್ತಿತ್ತು. ಅವರ ಪರಿಶ್ರಮದಿಂದ ಈ ಭಾಗದ ಸಾವಿರಾರು ಮಕ್ಕಳು ಉತ್ತಮ ಶಿಕ್ಷಣ ಪಡಿಯುವಂತಾಗಿದೆ. ಆ ನಿಟ್ಟಿನಲ್ಲಿ ಕನ್ನೋಳ್ಳಿಯ ಹಿರೇಮಠವು ಕೂಡಾ ಶಿಕ್ಷಣದ ಕ್ರಾಂತಿಯನ್ನು ಈ ಭಾಗದಲ್ಲಿ ಮಾಡುವಂತಾಗಲಿ ಎಂದು ಶುಭಹಾರೈಸಿದರು.
ಈ ಸಂಧರ್ಭದಲ್ಲಿ ಯಂಕಂಚಿ ಹಿರೇಮಠದ ಪೂಜ್ಯ ಶ್ರೀಅಭಿನವ ರುದ್ರಮನಿ ಶೀವಾಚಾರ್ಯರು, ಕೋಣ್ಣೂರಿನ ಹೊರಗಿನ ಕಲ್ಯಾಣಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬಡ ಅನಾಥ ಮಕ್ಕಳಿಗೆ ಮತ್ತು ಶಿಕ್ಷಣ ನೀಡುವ ಕಾರ್ಯ ಮಾಡುತ್ತಿರುವ ಕನ್ನೋಳ್ಳಿಯ ಹಿರೇಮಠದ ಕಾರ್ಯವನ್ನು ಶ್ಲಾಘಿಸಿದರು.
ಕಾರ್ಯಕ್ರಮದ ವೇದಿಕೆ ಮೇಲೆ ಸಿಂದಗಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಬಸವನ ಬಾಗೇವಾಡಿಯ ಶ್ರೀ ಶಿವಪ್ರಕಾಶ ಶಿವಾಚಾರ್ಯರು, ಕನ್ನೋಳ್ಳಿಯ ಹಿರೇಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯರು, ಸಿದ್ದಗೊಂಡಪ್ಪಗೌಡ ಪಾಟೀಲ, ಕಂಟೆಪ್ಪ ಸಾಹುಕಾರ ಕೊಲ್ಲೂರ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಶಂಕರಲಿಂಗಯ್ಯ ಹಿರೇಮಠ, ಸಂಗನಗೌಡ ಪಾಟೀಲ, ಸಿದ್ದಪ್ಪ ಟೆಂಗಳಿ, ಮುತ್ತಪ್ಪ ಹರಿಜನ, ಅನೀಲ ಕಡಿಮನಿ, ಶಂಕರ ಬಗಲಿ, ಸಿದ್ದಣ್ಣ ಸಾಹುಕಾರ ಕೊಲ್ಲೂರ, ಭಾಗಪ್ಪ ಶೀವಣಗಿ ಸೇರಿದಂತೆ ಗ್ರಾಮದ ಅನೇಕ ಹಿರಿಯರುಇದ್ದರು. ರೇಣುಕ ಗವಾಯಿಗಳು ಪ್ರಾರ್ಥಿಸಿದರು.
ಉಪನ್ಯಾಸಕ ಸಿದ್ದಲಿಂಗ ಕಿಣಗಿ ನಿರೂಪಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.