ವಿಜಯಪುರ: ಉಳಿದವರಂತೆ ನಾನು ಬೋಗಸ್ ಭೂಮಿಪೂಜೆ ಮಾಡುತ್ತಿಲ್ಲ. ಅನುದಾನ ಬಿಡುಗಡೆಗೊಂಡು, ಟೆಂಡರ್ ಮುಗಿದ ಬಳಿಕವೇ ಗುಣಮಟ್ಟದ ರಸ್ತೆಗಳ ಅಭಿವೃದ್ಧಿ ಮಾಡಲು ಭೂಮಿಪೂಜೆ ಮಾಡುತ್ತಿದೇನೆ ಎಂದು ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಹೇಳಿದರು.
ಮಹಾನಗರ ಪಾಲಿಕೆ ವಾರ್ಡ ನಂ.೧ರ ಸಂಗಮೇಶ್ವರ ಕಾಲೊನಿಯ ಆಂತರಿಕ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸಿಸಿ ರಸ್ತೆ ಕಾಣದ ನಗರದಲ್ಲಿ, ನನ್ನ ಅವಧಿಯಲ್ಲಿ ಅಭಿವೃದ್ದಿಗೊಂಡ ರಸ್ತೆಗಳು, ಸುಳ್ಳು ಹೇಳಿ ಹೋಗುವ ರಾಜಕಾರಣಿ ಅಲ್ಲ. ಹೇಳಿದಂತೆ ನಡೆದುಕೊಳ್ಳುವೆ ಎಂದರು.
ನನ್ನ ಅವಧಿಯಲ್ಲಿ ಆಗಿರುವ ರಸ್ತೆಗಳು, ಕನಿಷ್ಠ ೨೦ ರಿಂದ ೨೫ ವರ್ಷ ಏನು ಆಗುವುದಿಲ್ಲ. ಕೇವಲ ಮುಖ್ಯ ರಸ್ತೆಗಳನ್ನು ಮಾತ್ರ ಅಭಿವೃದ್ಧಿ ಮಾಡದೆ, ಪ್ರತಿ ಕಾಲೊನಿ, ಬಡಾವಣೆಗಳಲ್ಲಿಯೂ ಆಂತರಿಕ ರಸ್ತೆಗಳು ಅಭಿವೃದ್ಧಿಗೊಂಡಿದ್ದರಿAದ, ಧೂಳಾಪುರ ಕುಖ್ಯಾತಿ ಹೋಗಿದೆ ಎಂದರು.
ನಗರದ ತುಂಬಾ ರಸ್ತೆ ಬದಿಯಲ್ಲಿ, ಉದ್ಯಾನಗಳಲ್ಲಿ ಸಾಕಷ್ಟು ಗಿಡಗಳನ್ನು ಬೆಳೆಸಿದ್ದರಿಂದ ನಗರದ ಪರಿಸರವೇ ಬದಲಾಗಿದೆ. ಮೂಲಸೌಕರ್ಯಗಳಾದ ಶುದ್ಧ ಕುಡಿಯುವ ನೀರಿನ ಘಟಕಗಳು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಗೂ ಸಾಕಷ್ಟು ಅನುದಾನ ಕಲ್ಪಿಸಲಾಗಿದೆ ಎಂದು.
ನಗರದ ಅಭಿವೃದ್ಧಿ ಜೊತೆಗೆ ಸುಮಾರು ೩೨ ರಸ್ತೆಗಳಿಗೆ ಮಹಾಪುರುಷರ ಹೆಸರುಗಳನ್ನು ನಾಮಕರಣ ಮಾಡಿರುವುದು ಕೂಡ ಇತಿಹಾಸ. ೧೧ ಮಹಾಪುರುಷರ ವೃತ್ತಗಳನ್ನು ಮಾಡಿ, ಪುತ್ಥಳಿ ಸಹÀ ನಿರ್ಮಾಣ ಮಾಡಲಾಗಿದೆ. ಮಾನ ನಿಲ್ದಾಣಕ್ಕೆ ಹೆಚ್ಚುವರಿ ಅನುದಾನ, ವೈನ್ ಪಾರ್ಕ, ಜವಳಿ ಪಾರ್ಕ ಮಂಜೂರುಗೊಳಿಸಿರುವೆ. ಮೆಡಿಕಲ್ ಕಾಲೇಜು ಮಾಡುವುದು ಬಾಕಿ ಇದೆ ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಕಾಲೊನಿ ನಿವಾಸಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment