Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಣ್ಣ ವಿಶ್ವದ ಶ್ರೇಷ್ಠ ದಾರ್ಶನಿಕ :ಸಾಹಿತಿ ಬೈಚಬಾಳ
(ರಾಜ್ಯ ) ಜಿಲ್ಲೆ

ಬಸವಣ್ಣ ವಿಶ್ವದ ಶ್ರೇಷ್ಠ ದಾರ್ಶನಿಕ :ಸಾಹಿತಿ ಬೈಚಬಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕಾಶ್ಮೀರದ ಅರಸ ಪರ್ಷಿಯನ್ ಭಾಷೆ ಬಿಟ್ಟು ಕನ್ನಡ ಕಲಿತು ಶ್ರೇಷ್ಠ ವಚನಕಾರನೆನಿಸಲು ಬಸವಣ್ಣನವರ ನಡೆ – ನುಡಿಗಳೆ ಕಾರಣವಾದವು. ಧಾರ್ಮಿಕ ಜಿಡ್ಡು ತೊಳೆದು ವೈಚಾರಿಕ ನೆಲೆಗಟ್ಟಿನಲ್ಲಿ. ಲಿಂಗಾಯತ ಸಮಾಜ ನಿರ್ಮಿಸಿದ ಬಸವಣ್ಣ ವಿಶ್ವದ ಶ್ರೇಷ್ಠ ದಾರ್ಶನಿಕ ಎನಿಸಿದ್ದಾನೆ ಎಂದು ಜನಪದ ಸಾಹಿತಿ ಶಂಕರ ಬೈಚಬಾಳ ಹೇಳಿದರು.
ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ಆಶ್ರಯದಲ್ಲಿ ನಗರದ ಪರಿಷತ್ ಕಾರ್ಯಾಲಯದಲ್ಲಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಸವಾದಿ ಶಿವಶರಣರು ಜನಪದರ ಆಡು ನುಡಿಯಲ್ಲಿ ವಚನ ಬರೆದು ಜನಪದ ಸಾಹಿತ್ಯ ರಕ್ಷಿಸಿದರು . ವಚನ ಸಾಹಿತ್ಯ ಗ್ರಾಮೀಣ ಬದುಕಿನ ಪ್ರತಿಬಿಂಬವಾಗಿ ಕಾಣುತ್ತಿದೆ ಎಂದು ಹೇಳಿದರು.
” ಸಾಮರಸ್ಯದ ಬದುಕಿಗೆ ಶರಣರ ವಚನಗಳು ” ಕುರಿತು ಉಪನ್ಯಾಸ ನೀಡಿದ ಚಿಂತಕ ಮೋಹನ ಕಟ್ಟಿಮನಿ, ಸತ್ಕಾರ್ಯ- ಸದ್ವಿಚಾರದ ಮೂಲಕ ಬಸವಣ್ಣನವರು ಸಮಾನತೆಯ ಸಮಾಜ ನಿರ್ಮಿಸುವ ಕನಸು ಕಂಡರು. ಶರಣರ ಸಹಕಾರದಿಂದ ವಚನ ಚಳುವಳಿ ನಡೆಸಿದರು. ಬಸವಣ್ಣನವರ ವಿಚಾರಧಾರೆಗಳು ಮೈಗೂಡಿಸಿಕೊಂಡು ನಡೆದರೆ ಬದುಕು ಸುಂದರವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಬಸವಣ್ಣನವರು ಕೇವಲ ಸಾಂಸ್ಕೃತಿಕ ನಾಯಕ ಅಷ್ಟೆ ಅಲ್ಲ. ಅವರೊಬ್ಬ ನಾಗರಿಕ ಸಮಾಜದ ನಿರ್ಮಾಪಕ. ಜಗತ್ತಿನ ಸಮಾನತೆಯ ಹರಿಕಾರ ಎಂದು ಹೇಳಿದರು.
ಕ ಜಾ ಪ ತಿಕೋಟಾ ತಾಲೂಕು ಗೌರವಾಧ್ಯಕ್ಷ ಬಾಬುರಾವ್ ಮಹಾರಾಜರು ಸಾನಿಧ್ಯ ವಹಿಸಿದ್ದರು. ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯೆ ಶ್ರೀಮತಿ ಅನಸೂಯಾ ವಡ್ಡರ, ಕ ಜಾ ಪ ಜಿಲ್ಲಾ ಖಜಾಂಚಿ ಪ್ರೊ ಎಸ್ ಎಲ್ ಮೇತ್ರಿ, ಇಂಡಿ ತಾಲೂಕಾಧ್ಯಕ್ಷ ರಾಜಶೇಖರ ಪಾಟೀಲ, ಮುದ್ದೇಬಿಹಾಳ ತಾಲೂಕಾಧ್ಯಕ್ಷ ಎ ಆರ್ ಮುಲ್ಲಾ, ವಿಜಯಪುರ ತಾಲೂಕಾಧ್ಯಕ್ಷ ವೈ ಎಚ್ ಪವಾರ , ವಲಯ ಅಧ್ಯಕ್ಷರಾದ ಸಿದರಾಯ ಬಡಿಗೇರ, ಶಿವಾನಂದ ಮಳ್ಳಿ ಉಪಸ್ಥಿತರಿದ್ದರು.
ಜಿಲ್ಲಾ ಘಟಕದ ಸದಸ್ಯ ಎಸ್ ಆಯ್ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಡಾ ರಮೇಶ ತೇಲಿ ನಿರೂಪಿಸಿದರು. ಜಿಲ್ಲಾ ಸಂಚಾಲಕ ಪ್ರೊ ಜಿ ಎಂ ಹಳ್ಳೂರ ಸ್ವಾಗತಿಸಿದರು. ಜಿಲ್ಲಾ ಸದಸ್ಯ ಮೌಲಾಲಾಬ ಜಹಾಗಿರದಾರ ವಂದಿಸಿದರು.
ಕಾರ್ಯಕ್ರಮದಲ್ಲಿ ನಾಗಠಾಣ ಭಜನೆ ಉಪ್ಪಲದಿನ್ನಿ ರಿವಾಯತ ಮತ್ತು ವಚನ ಪಠಣ ನಡೆದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.