ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದಲ್ಲಿ ಮೇ. ೧೧ ರಂದು ಸಂಜೆ ೬ ಗಂಟೆಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಾಂಸ್ಕ್ರತಿಕ ನಾಯಕ ಬಸವೇಶ್ವರರ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾನಿಧ್ಯವನ್ನು ಸಿದ್ದಲಿಂಗ ಸ್ವಾಮೀಜಿ, ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಉದ್ಘಾಟಿಸುವರು. ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಪುಷ್ಪಾರ್ಚನೆ ನೆರವೇರಿಸುವರು. ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ ವಹಿಸುವರು. ಮಹಮ್ಮದಗೌಸ ಹವಾಲ್ದಾರ ಉಪನ್ಯಾಸ ನೀಡುವರು. ಮುಖ್ಯಅತಿಥಿಗಳಾಗಿ ರಾಜ್ಯ ವಿಮಾ ಸಹಕಾರ ಮಹಾಮಂಡಳ ಅಧ್ಯಕ್ಷ ಶಿವನಗೌಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ವಕೀಲ ಬಿ.ಕೆ.ಕಲ್ಲೂರ, ಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಫ್.ಡಿ.ಮೇಟಿ, ಮುಖಂಡರಾದ ಸಂಗಮೇಶ ಓಲೇಕಾರ, ಅಶೋಕ ಹಾರಿವಾಳ, ಎಂ.ಎನ್. ಅಂಗಡಗೇರಿ ಆಗಮಿಸುವರು ಎಂದು ತಾಲೂಕು ಕಸಾಪ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
