ಇಂಡಿ: ಜಾತಿ ರಹಿತ ಸಮಾಜ ನಿರ್ಮಾಣ ಮಾಡಲು ಬಸವಣ್ಣ ಕೊಟ್ಟ ಕೊಡುಗೆ ಅಪಾರವಾದದ್ದು. ಅವರ ತತ್ವ ಸಿದ್ಧಾಂತಗಳು ಇಡೀ ವಿಶ್ವ ಒಪ್ಪಿಕೊಳ್ಳುವ ಕಾಲ ಇಂದು ಸನ್ನಿಹಿತವಾಗಿದೆ ಎಂದು ಬಸವ ಸಮಿತಿ ಅಧ್ಯಕ್ಷ ಶಿವರಾಯಗೌಡ ಬಿರಾದಾರ ಹೇಳಿದರು.
ಶುಕ್ರವಾರ ತಾಲೂಕಿನ ಆಳೂರ ಗ್ರಾಮದ ಕಾರ್ಕಲ್ ವಸತಿ ಹತ್ತಿರ ಬಸವೇಶ್ವರ ಸರ್ಕಲದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಭಕ್ತಿ ಭಂಡಾರಿ ಬಸವಣ್ಣನವರ ವಚನಗಳು ಹಾಗೂ ತತ್ವ ಸಿದ್ಧಾಂತಗಳು ಸರ್ವಕಾಲಕ್ಕೂ ಸತ್ಯವಾಗಿವೆ, ಅದನ್ನು ಬಹುತೇಕ ಎಲ್ಲಾ ಪಾಶ್ಚಿಮಾತ್ಯ ದೇಶಗಳಲ್ಲಿ ಅನುಸರಿಸಲಾಗುತ್ತಿದೆ ಎಂದ ಅವರು, ಬಸವಣ್ಣನವರ ಆದರ್ಶಗಳನ್ನು ನಾವುಗಳೆಲ್ಲಾ ರೂಢಿಸಿಕೊಳ್ಳಬೇಕೆಂದರು.
ಸಮಿತಿಯ ಉಪಾಧ್ಯಕ್ಷ ಜಗದೇವಪ್ಪ ಬಬಲಾದ ಮಾತನಾಡಿ, ಮಹಿಳೆಯರಿಗೆ ಸ್ವಾತಂತ್ರ್ಯ ನೀಡಿದ ಮೊಟ್ಟಮೊದಲ ದಾರ್ಶನಿಕ ಬಸವಣ್ಣನವರು ಎಂದ ಅವರು, ಹಿಂದಿನ ಕಾಲದಲ್ಲಿ ಹೆಣ್ಣಿನ ಎಲ್ಲಾ ಸ್ವಾತಂತ್ರವನ್ನು ಕಸಿದುಕೊಂಡು ಆಕೆಯನ್ನು ಅಡುಗೆ ಮನೆಗೆ ಸೀಮಿತಗೊಳಿಸಲಾಗಿತ್ತು. ಆದರೆ, ೧೨ನೇ ಶತಮಾನದಲ್ಲಿ ಬಸವಣ್ಣನವರು ಹೆಣ್ಣು ಮಕ್ಕಳಿಗೆ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ನೀಡುವ ಮೂಲಕ ಸಮಾಜದಲ್ಲಿ ಕ್ರಾಂತಿ ಮಾಡಿದರು ಎಂದರು.
ನಿರಂಜನ ಬಡಿಗೇರ ಮಾತನಾಡಿ, ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಜಾತಿ, ಲಿಂಗಭೇದ, ಮೇಲು ಕೀಳು ಎಂಬ ಭೇದವನ್ನು ತಡೆಯಲು ಹೋರಾಡಿದರು. ಬಸವಣ್ಣನವರ ಆದರ್ಶಗಳನ್ನು ನಾವುಗಳು ಅಳವಡಿಸಿಕೊಳ್ಳಬೇಕೆಂದರು.
ಸಲೀಂ ಚಪರಬಂದ, ಬಸವರಾಜ ಕಾರ್ಕಲ್, ಧರ್ಮಣ ನಾಟೀಕಾರ, ಬಸು ಖೇಡ, ಅಂಬಣ್ಣ ತೆಲಿ, ಪರಮೇಶ್ವರ ನಾಟೀಕಾರ, ಕಲ್ಯಾಣಿ ಕುಮಸಗಿ, ಸಂಗು ಬಗಲಿ, ರೇವಣಸಿದ್ದ ಬೇವನೂರ ಸೇರಿದಂತೆ ಅನೇಕ ಸಮಿತಿಯ ಸದಸ್ಯರುಗಳು ಇದ್ದರು.
Subscribe to Updates
Get the latest creative news from FooBar about art, design and business.
ಬಸವಣ್ಣನವರ ತತ್ವ ಸಿದ್ಧಾಂತ ವಿಶ್ವ ಒಪ್ಪಿಕೊಳ್ಳುವ ಕಾಲ ಸನ್ನಿಹಿತ
Related Posts
Add A Comment

