ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದ ಶ್ರೀ ಬೀರೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದ್ದಾರೆ.
ಪ್ರವೀಣ ಹಬಗೊಂಡೆ ಶೇ.೯೫.೨೦% ಪ್ರಥಮ, ಸ್ನೇಹಲ್ ಬಿರಾದಾರ ಶೇ.೮೯.೧೨% ದ್ವಿತೀಯ, ಸವಿತಾ ಖರಾತ ಶೇ.೮೮.೮೦% ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಉಳಿದಂತೆ ಆದರ್ಶ ಪಾಟೀಲ ಶೇ.೮೪.೧೬, ವರಲಕ್ಷ್ಮಿ ಹಬಗೊಂಡೆ ಶೇ.೮೪% ಅಂಕಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಫಲಿತಾಂಶಕ್ಕೆ ಶಾಲೆಯ ಮುಖ್ಯ ಗುರುಗಳಾದ ಬಿ.ಎಸ್.ಬನಸೋಡೆ, ಶಿಕ್ಷಕ ಸಿಬ್ಬಂದಿ ವರ್ಗ, ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಗ್ರಾಮಸ್ಥರು ಮೆಚ್ಚುಗೆ ಸೂಚಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

