Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವಭಾತೃತ್ವವನ್ನು ವಿಶ್ವಕ್ಕೆ ಸಾರಿದ ಬಸವಣ್ಣ :ಮಡಿವಾಳೇಶ್ವರ ಶ್ರೀ
(ರಾಜ್ಯ ) ಜಿಲ್ಲೆ

ವಿಶ್ವಭಾತೃತ್ವವನ್ನು ವಿಶ್ವಕ್ಕೆ ಸಾರಿದ ಬಸವಣ್ಣ :ಮಡಿವಾಳೇಶ್ವರ ಶ್ರೀ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಇವ ನಮ್ಮವ, ಇವ ನಮ್ಮವ ಎನ್ನುವ ಮೂಲಕ ವಿಶ್ವಭಾತೃತ್ವವನ್ನು ವಿಶ್ವಕ್ಕೆ ಸಾರಿ ಬಸವಣ್ಣ ಮಹಾಮಾನವತಾವಾದಿ ಎನಿಸಿದ್ದಾರೆ ಎಂದು ಗದ್ದಿಗೆಮಠದ ಮಡಿವಾಳೇಶ್ವರ ಸ್ವಾಮೀಜಿ ಹೇಳಿದರು.
ಪಟ್ಟಣದ ಸಿದ್ದೇಶ್ವರ ಸ್ವಾಮೀಜಿ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ಬಸವ ಜಯಂತ್ಯುತ್ಸವ ಹಾಗೂ ಶ್ರೀ ಬಸವಶ್ರೀ ಪ್ರಶಸ್ತಿ ವಿತರಣಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.
ವಚನ ಸಾಹಿತ್ಯವೇ ನಮ್ಮ ಗ್ರಂಥ, ಸಂವಿಧಾನ ಮೂಲ ಆಶಯಗಳನ್ನು ಅಂದೇ ತಮ್ಮ ವಚನಗಳ ಮೂಲಕ ಸಾರಿದ ಬಸವಣ್ಣ ಅಸಮಾನತೆಯ ವಿರುದ್ಧ ಸಮರ ಸಾರಿದ ಕ್ರಾಂತಿಯೋಗಿ. ಬಸವಣ್ಣನ ವಚನಗಳ ಸೂಕ್ಷ್ಮ ಅಧ್ಯಯನ ಇಂದು ಅತ್ಯಂತ ಅಗತ್ಯವಾಗಿದೆ ಎಂದು ಕವನ ವಾಚಿಸಿ ಆಶೀರ್ವಚನ ನೀಡಿದರು.
ಸಿಂದಗಿಯ ಸಾಹಿತಿ ರಾ.ಶಿ.ವಾಡೇದ ಹಾಗೂ ಶಿಕ್ಷಕಿ ಮಹಾದೇವಿ ಪಾಟೀಲ ಮಾತನಾಡಿ, ಕಾಯಕ ತತ್ವದ ಮಹತ್ವವನ್ನು ಜಗಕ್ಕೆ ಸಾರುವ ಮೂಲಕ ನಮ್ಮಲ್ಲಿ ಕರ್ತವ್ಯಪ್ರಜ್ಞೆಯನ್ನು ಜಾಗೃತಗೊಳಿಸಿದ ಮಹಾನುಭಾವ ಅಣ್ಣ ಬಸವಣ್ಣ ಎಂದರು.
ಶ್ರೀಬಸವಶ್ರೀ ಪ್ರಶಸ್ತಿ ವಿಜೇಯರಾದ ಡಾ.ಬಾಬು ಶಿವಸಿಂಪಿಗೇರ ಹಾಗೂ ಬಸವರಾಜ ಹಡಪದ ಮಾತನಾಡಿ, ಬಸವಣ್ಣನವರು ಸಾಗರದ ಪ್ರತೀಕ ಅವರನ್ನು ಅರಿಯಬೇಕಾದರೆ ಆಳಕ್ಕೆ ಇಳಿಯಬೇಕು. ಬಸವಣ್ಣ ಎಂಬ ಸಾಗರದ ಮೇಲ್ಮೆಯಲ್ಲಿ ನಿಮಗೆ ಮೀನು, ಮೋಸಳೆಗಳು ಮಾತ್ರ ಗೋಚರಿಸಬಹುದು, ಆದರೆ ಆಳಕ್ಕೆ ಇಳಿದರೆ ಮುತ್ತು, ರತ್ನಗಳು ದೊರೆಯುವುದರಲ್ಲಿ ಸಂದೇಹವಿಲ್ಲ ಎಂದರು.
ಬಸವ ಶರಣ ಸಂಗಮ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಸಂಗಪ್ಪ ತಡವಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಬಿ.ಸಿ.ಹಿರೇಮಠ, ವಿಶ್ವನಾಥ ಡೋಣೂರ, ಡಾ.ಶಿವಸಿಂಪಿಗೇರ, ಬಸವರಾಜ ಹಡಪದ, ಸಿದ್ದು ಮೇಲಿನಮನಿ ಇವರಿಗೆ ಶ್ರೀಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಂತರ ನಿವೃತ್ತ ಶಿಕ್ಷಕರಾದ ಎಸ್.ಎನ್.ಪಡನೂರ, ಕೆ.ಎಂ.ನಂದಿ ಸೇರಿದಂತೆ ನಾನಾಗೌಡ ಪಾಟೀಲ, ಕೆ.ಬಿ.ದೇವಣಗಾಂವ, ಕೆ.ಬಿ.ಕಡಿಮನಿ, ಭಾಗಮ್ಮ ಕೋಟಿನ್ ಇವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಅಂಜನಾ ಮಾರ್ಕಂಡೆ ಭರತನಾಟ್ಯದ ಮೂಲಕ ಬಸವಣ್ಣನ ವಚನ ಪ್ರಸ್ತುತ ಪಡಿಸಿ ಗಮನ ಸೆಳೆದರು.
ಬಸವಶರಣ ಸಂಗಮ ಸೇವಾ ಸಮಿತಿಯ ಗೌರವಾಧ್ಯಕ್ಷ ಬಿ.ಎಮ್.ಪಾಟೀಲ, ರಾಷ್ಟ್ರೀಯ ಬಸವ ದಳದ ಅಧ್ಯಕ್ಷ ಬಸವರಾಜ ಕೊಂಡಗೂಳಿ, ವಚನಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಜೆ.ಆರ್.ಬಿರಾದಾರ, ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ಪ್ರಾಥಮಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಚ್.ವಾಲಿಕಾರ, ಸಿದ್ಧೇಶ್ವರ ಶಿಕ್ಷಣ ಸಂಸ್ಥೆಯ ವಿ.ಕೆ.ಪಾಟೀಲ, ಮಲ್ಲು ಹಳಿಮನಿ, ಗಿರೀಶ ಕುಲಕರ್ಣಿ, ನಿಂಗು ಜಡಗೊಂಡ, ಗೋಲ್ಲಾಳ ಬಿರಾದಾರ, ಸೋಮು ಹಡಪದ ಸೇರಿದಂತೆ ಮಹಿಳೆಯರು, ಮಕ್ಕಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.