ಸಿಂದಗಿ: ಮುಂಬರುವ ದಿನಮಾನಗಳಲ್ಲಿ ಸಿಂದಗಿ ಮತಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಕನಸನ್ನು ಹೊಂದಿದ್ದೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಗೋಲಗೇರಿ ಹಾಗೂ ಸಾಸಾಬಾಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹಮ್ಮಿಕೊಂಡ ವಿಜಯೋತ್ಸವದಲ್ಲಿ ಮಾತನಾಡಿದ ಅವರು, ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ. ಅದನ್ನು ಈಡೇರಿಸಿಯೇ ತಿರುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಬಸವರಾಜ ಮಾರಲಭಾವಿ, ದಾನಪ್ಪಗೌಡ ಚನಗೊಂಡ, ಸಿಂದಗಿ ಭೂನ್ಯಾಯ ಮಂಡಳಿ ಸದಸ್ಯ ಮುದಿಗೌಡ ಬಿರಾದಾರ, ಕಾಂಗ್ರೆಸ್ ಪಕ್ಷದ ಮುಖಂಡ ಮಡಿವಾಳ ನಾಯ್ಕೋಡಿ, ಮಂಜುನಾಥ ಯಂಕಂಚಿ, ನೀಲಕಂಠ ಚಲವಾದಿ, ನಬೀಸಾಬ ಕೋರಬು, ಬಾಬು ಜಾಲವಾದಿ, ಖಾದರ್ ಹಳಿಮನಿ, ಲಕ್ಷ್ಮಣ ಕಲಾಲ, ರಾಜು ಹೊಳಕುಂದಿ, ಸಿದ್ದಣ್ಣ ಬಿರಾದಾರ, ಧರ್ಮುರಾಠೋಡ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಉಪಸ್ಥಿತಿರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

